ಕರ್ನಾಟಕ ರಾಜ್ಯ ಸರ್ಕಾರ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಮನಸ್ವಿನಿ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಅವಿವಾಹಿತ ಹಾಗೂ ವಿಚ್ಛೇ ದನ ಪಡೆದಿರುವ ಮಹಿಳೆಯರಿಗೆ ಪ್ರತಿ ತಿಂಗಳು ೫೦೦ ರೂಪಾಯಿ ಮಾಸಾಶನ ನೀಡಲಾಗುತ್ತದೆ.
ಅರ್ಹ ಫಲಾನುಭವಿಗಳು ಯಾರ್ಯಾರು?
೧.ಫಲಾನುಭವಿಯು ೪೦ರಿಂದ ೬೫ ವರ್ಷ ವಯಸ್ಸಿನೊಳಗಿರಬೇಕು.
೨.ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ ೧೨ ಸಾವಿರ ರೂಪಾಯಿ ಹಾಗೂ ನಗರ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿದ್ದಾರೆ.
ಬೇಕಾಗಿರುವ ಅಗತ್ಯ ದಾಖಲೆಗಳು
೧.ಅವಿವಾಹಿತರು ವಿವಾಹ ಆಗಿಲ್ಲವೆಂದು ಹಾಗೂ ವಿಚ್ಛೇ ದಿತರು ವಿಚ್ಛೇದನ ಪಡೆದಿರುವ ಬಗ್ಗೆ ಸ್ವಯಂ ಪ್ರಮಾಣ ಪತ್ರ ಸಲ್ಲಿಸಬೇಕು.
೨. ಆದಾಯ ಪ್ರಮಾಣ ಪತ್ರ, ಚುನಾವಣ ಗುರುತಿನ ಚೀಟಿ ಅಥವಾ ವಯಸ್ಸಿನ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.
ಈ ಮಾಸಾಶನವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ಅಥವಾ ಅಂಚೆ ಕಚೇರಿಯ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುತ್ತದೆ. ಈ ಯೋಜನೆಯ ಫಲಾನುಭವಿಗಳಾಗಲು ಬಯಸುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಅಟಲ್ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…