ಕರ್ನಾಟಕ ರಾಜ್ಯ ಸರ್ಕಾರ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸಲು ಮನಸ್ವಿನಿ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಅವಿವಾಹಿತ ಹಾಗೂ ವಿಚ್ಛೇ ದನ ಪಡೆದಿರುವ ಮಹಿಳೆಯರಿಗೆ ಪ್ರತಿ ತಿಂಗಳು ೫೦೦ ರೂಪಾಯಿ ಮಾಸಾಶನ ನೀಡಲಾಗುತ್ತದೆ.
ಅರ್ಹ ಫಲಾನುಭವಿಗಳು ಯಾರ್ಯಾರು?
೧.ಫಲಾನುಭವಿಯು ೪೦ರಿಂದ ೬೫ ವರ್ಷ ವಯಸ್ಸಿನೊಳಗಿರಬೇಕು.
೨.ಗ್ರಾಮೀಣ ಪ್ರದೇಶದಲ್ಲಿ ವಾರ್ಷಿಕ ೧೨ ಸಾವಿರ ರೂಪಾಯಿ ಹಾಗೂ ನಗರ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿದ್ದಾರೆ.
ಬೇಕಾಗಿರುವ ಅಗತ್ಯ ದಾಖಲೆಗಳು
೧.ಅವಿವಾಹಿತರು ವಿವಾಹ ಆಗಿಲ್ಲವೆಂದು ಹಾಗೂ ವಿಚ್ಛೇ ದಿತರು ವಿಚ್ಛೇದನ ಪಡೆದಿರುವ ಬಗ್ಗೆ ಸ್ವಯಂ ಪ್ರಮಾಣ ಪತ್ರ ಸಲ್ಲಿಸಬೇಕು.
೨. ಆದಾಯ ಪ್ರಮಾಣ ಪತ್ರ, ಚುನಾವಣ ಗುರುತಿನ ಚೀಟಿ ಅಥವಾ ವಯಸ್ಸಿನ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.
ಈ ಮಾಸಾಶನವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ಅಥವಾ ಅಂಚೆ ಕಚೇರಿಯ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುತ್ತದೆ. ಈ ಯೋಜನೆಯ ಫಲಾನುಭವಿಗಳಾಗಲು ಬಯಸುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಅಟಲ್ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…