ಆಂದೋಲನ ಪುರವಣಿ

ವನಿತೆ ಮಮತೆ : ಮಾರ್ಗರೇಟ್ ಆಳ್ವ ಎಂಬ ಮಾದರಿ ರಾಜಕಾರಣಿ

ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದೇಶದ ಪರಮೋಚ್ಛ ಹುದ್ದೆಯನ್ನು ಮಹಿಳೆಯೊಬ್ಬರು ಮತ್ತೆ ಅಲಂಕರಿಸಿದಂತಾಗಿದೆ.

ಇದರ ಬೆನ್ನಲ್ಲೇ ವಿಪಕ್ಷಗಳು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕನ್ನಡತಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಿದೆ. ಅವರ ಗೆಲುವು-ಸೋಲು ರಾಜಕೀಯ ಲೆಕ್ಕಾಚಾರ. ಅದರಾಚೆಗೆ ಮಾರ್ಗರೇಟ್ ಆಳ್ವ ನಿಜಕ್ಕೂ ಆ ಸ್ಥಾನಕ್ಕೆ ಅರ್ಹರು. ಅವರ ಸಾಧನೆ, ನಿಭಾಯಿಸಿದ ಜವಾಬ್ದಾರಿಗಳೇ ಇದಕ್ಕೆ ಸಾಕ್ಷಿ.

ಮಂಗಳೂರಿನ ರೋಮನ್ ಕ್ಯಾಥೋಲಿಕ್ ಕುಟುಂಬದಲ್ಲಿ ಏ.೧೪, ೧೯೪೨ರಲ್ಲಿ ಹುಟ್ಟಿದ ಮಾರ್ಗರೇಟ್ ಆಳ್ವ ನಂತರ ವಿದ್ಯಾಭ್ಯಾಸ ಪಡೆದದ್ದೆಲ್ಲವೂ ಬೆಂಗಳೂರಿನಲ್ಲಿ. ೮೦ ವರ್ಷದ ಮಾರ್ಗರೇಟ್ ಅವರು ಸುಮಾರು ೬೦ ವರ್ಷಗಳನ್ನು ರಾಜಕಾರಣದಲ್ಲಿಯೇ ಕಳೆದವರು. ೧೯೭೪ರಲ್ಲಿ ಮೊದಲಿಗೆ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಅವರು ನಂತರ ೧೯೮೦, ೮೬, ೯೨ರಲ್ಲಿ ಲೋಕಸಭೆಗೆ ಆಯ್ಕೆಯಾದವರು. ಸಂಸದೀಯ ವ್ಯವಹಾರಗಳ ಖಾತೆ, ಯುವಜನ ಮತ್ತು ಕ್ರೀಡಾ ಖಾತೆ, ಮಹಿಳೆ-ಮಕ್ಕಳ ಕಲ್ಯಾಣ ಖಾತೆಗಳನ್ನು ನಿರ್ವಹಿಸಿ ಸೈ ಎನ್ನಿಸಿಕೊಂಡವರು. ಅದಕ್ಕಿಂತ ಹೆಚ್ಚಾಗಿ ಗೋವಾ, ಗುಜರಾತ್, ರಾಜಸ್ಥಾನ, ಉತ್ತರಾಖಾಂಡ್ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದವರು.

ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಹೈಕಮಾಂಡ್ ದೃಷ್ಟಿಯಲ್ಲಿ ಒಳ್ಳೆಯ ನಾಯಕಿ ಎನ್ನಿಸಿಕೊಂಡ ಮಾರ್ಗರೇಟ್ ಆಳ್ವ ಅವರು ಸೋಲು-ಗೆಲುವು ಎಲ್ಲವನ್ನೂ ಸಮಾನವಾಗಿ ಕಂಡು ಕ್ಷೇತ್ರದ ಜನತೆಯೊಂದಿಗೆ ಸದಾ ಭಾಂದವ್ಯ ಇಟ್ಟುಕೊಂಡವರು. ಕ್ಷೇತ್ರದ ಅಭಿವೃದ್ಧಿಗಾಗಿ ಅರ್ಹನಿಶಿ ದುಡಿದವರು. ಇಂತಹ ಅಪರೂಪದ ರಾಜಕಾರಣಿ ಎಲ್ಲ ಮಹಿಳೆಯರಿಗೂ ಮಾದರಿ.

andolana

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

5 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

5 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

6 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

7 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

9 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

11 hours ago