ಆಂದೋಲನ ಪುರವಣಿ

ವನಿತೆ ಮಮತೆ : ಮಾರ್ಗರೇಟ್ ಆಳ್ವ ಎಂಬ ಮಾದರಿ ರಾಜಕಾರಣಿ

ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದೇಶದ ಪರಮೋಚ್ಛ ಹುದ್ದೆಯನ್ನು ಮಹಿಳೆಯೊಬ್ಬರು ಮತ್ತೆ ಅಲಂಕರಿಸಿದಂತಾಗಿದೆ.

ಇದರ ಬೆನ್ನಲ್ಲೇ ವಿಪಕ್ಷಗಳು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕನ್ನಡತಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಿದೆ. ಅವರ ಗೆಲುವು-ಸೋಲು ರಾಜಕೀಯ ಲೆಕ್ಕಾಚಾರ. ಅದರಾಚೆಗೆ ಮಾರ್ಗರೇಟ್ ಆಳ್ವ ನಿಜಕ್ಕೂ ಆ ಸ್ಥಾನಕ್ಕೆ ಅರ್ಹರು. ಅವರ ಸಾಧನೆ, ನಿಭಾಯಿಸಿದ ಜವಾಬ್ದಾರಿಗಳೇ ಇದಕ್ಕೆ ಸಾಕ್ಷಿ.

ಮಂಗಳೂರಿನ ರೋಮನ್ ಕ್ಯಾಥೋಲಿಕ್ ಕುಟುಂಬದಲ್ಲಿ ಏ.೧೪, ೧೯೪೨ರಲ್ಲಿ ಹುಟ್ಟಿದ ಮಾರ್ಗರೇಟ್ ಆಳ್ವ ನಂತರ ವಿದ್ಯಾಭ್ಯಾಸ ಪಡೆದದ್ದೆಲ್ಲವೂ ಬೆಂಗಳೂರಿನಲ್ಲಿ. ೮೦ ವರ್ಷದ ಮಾರ್ಗರೇಟ್ ಅವರು ಸುಮಾರು ೬೦ ವರ್ಷಗಳನ್ನು ರಾಜಕಾರಣದಲ್ಲಿಯೇ ಕಳೆದವರು. ೧೯೭೪ರಲ್ಲಿ ಮೊದಲಿಗೆ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಅವರು ನಂತರ ೧೯೮೦, ೮೬, ೯೨ರಲ್ಲಿ ಲೋಕಸಭೆಗೆ ಆಯ್ಕೆಯಾದವರು. ಸಂಸದೀಯ ವ್ಯವಹಾರಗಳ ಖಾತೆ, ಯುವಜನ ಮತ್ತು ಕ್ರೀಡಾ ಖಾತೆ, ಮಹಿಳೆ-ಮಕ್ಕಳ ಕಲ್ಯಾಣ ಖಾತೆಗಳನ್ನು ನಿರ್ವಹಿಸಿ ಸೈ ಎನ್ನಿಸಿಕೊಂಡವರು. ಅದಕ್ಕಿಂತ ಹೆಚ್ಚಾಗಿ ಗೋವಾ, ಗುಜರಾತ್, ರಾಜಸ್ಥಾನ, ಉತ್ತರಾಖಾಂಡ್ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದವರು.

ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಹೈಕಮಾಂಡ್ ದೃಷ್ಟಿಯಲ್ಲಿ ಒಳ್ಳೆಯ ನಾಯಕಿ ಎನ್ನಿಸಿಕೊಂಡ ಮಾರ್ಗರೇಟ್ ಆಳ್ವ ಅವರು ಸೋಲು-ಗೆಲುವು ಎಲ್ಲವನ್ನೂ ಸಮಾನವಾಗಿ ಕಂಡು ಕ್ಷೇತ್ರದ ಜನತೆಯೊಂದಿಗೆ ಸದಾ ಭಾಂದವ್ಯ ಇಟ್ಟುಕೊಂಡವರು. ಕ್ಷೇತ್ರದ ಅಭಿವೃದ್ಧಿಗಾಗಿ ಅರ್ಹನಿಶಿ ದುಡಿದವರು. ಇಂತಹ ಅಪರೂಪದ ರಾಜಕಾರಣಿ ಎಲ್ಲ ಮಹಿಳೆಯರಿಗೂ ಮಾದರಿ.

andolana

Recent Posts

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

6 mins ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

1 hour ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

2 hours ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

2 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

2 hours ago

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಳ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು, ಬಿಸಿಲಿನ ಅಲೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

2 hours ago