ಆಂದೋಲನ ಪುರವಣಿ

ವನಿತೆ ಮಮತೆ : ಮಾರ್ಗರೇಟ್ ಆಳ್ವ ಎಂಬ ಮಾದರಿ ರಾಜಕಾರಣಿ

ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದೇಶದ ಪರಮೋಚ್ಛ ಹುದ್ದೆಯನ್ನು ಮಹಿಳೆಯೊಬ್ಬರು ಮತ್ತೆ ಅಲಂಕರಿಸಿದಂತಾಗಿದೆ.

ಇದರ ಬೆನ್ನಲ್ಲೇ ವಿಪಕ್ಷಗಳು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕನ್ನಡತಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಿದೆ. ಅವರ ಗೆಲುವು-ಸೋಲು ರಾಜಕೀಯ ಲೆಕ್ಕಾಚಾರ. ಅದರಾಚೆಗೆ ಮಾರ್ಗರೇಟ್ ಆಳ್ವ ನಿಜಕ್ಕೂ ಆ ಸ್ಥಾನಕ್ಕೆ ಅರ್ಹರು. ಅವರ ಸಾಧನೆ, ನಿಭಾಯಿಸಿದ ಜವಾಬ್ದಾರಿಗಳೇ ಇದಕ್ಕೆ ಸಾಕ್ಷಿ.

ಮಂಗಳೂರಿನ ರೋಮನ್ ಕ್ಯಾಥೋಲಿಕ್ ಕುಟುಂಬದಲ್ಲಿ ಏ.೧೪, ೧೯೪೨ರಲ್ಲಿ ಹುಟ್ಟಿದ ಮಾರ್ಗರೇಟ್ ಆಳ್ವ ನಂತರ ವಿದ್ಯಾಭ್ಯಾಸ ಪಡೆದದ್ದೆಲ್ಲವೂ ಬೆಂಗಳೂರಿನಲ್ಲಿ. ೮೦ ವರ್ಷದ ಮಾರ್ಗರೇಟ್ ಅವರು ಸುಮಾರು ೬೦ ವರ್ಷಗಳನ್ನು ರಾಜಕಾರಣದಲ್ಲಿಯೇ ಕಳೆದವರು. ೧೯೭೪ರಲ್ಲಿ ಮೊದಲಿಗೆ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಅವರು ನಂತರ ೧೯೮೦, ೮೬, ೯೨ರಲ್ಲಿ ಲೋಕಸಭೆಗೆ ಆಯ್ಕೆಯಾದವರು. ಸಂಸದೀಯ ವ್ಯವಹಾರಗಳ ಖಾತೆ, ಯುವಜನ ಮತ್ತು ಕ್ರೀಡಾ ಖಾತೆ, ಮಹಿಳೆ-ಮಕ್ಕಳ ಕಲ್ಯಾಣ ಖಾತೆಗಳನ್ನು ನಿರ್ವಹಿಸಿ ಸೈ ಎನ್ನಿಸಿಕೊಂಡವರು. ಅದಕ್ಕಿಂತ ಹೆಚ್ಚಾಗಿ ಗೋವಾ, ಗುಜರಾತ್, ರಾಜಸ್ಥಾನ, ಉತ್ತರಾಖಾಂಡ್ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದವರು.

ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಹೈಕಮಾಂಡ್ ದೃಷ್ಟಿಯಲ್ಲಿ ಒಳ್ಳೆಯ ನಾಯಕಿ ಎನ್ನಿಸಿಕೊಂಡ ಮಾರ್ಗರೇಟ್ ಆಳ್ವ ಅವರು ಸೋಲು-ಗೆಲುವು ಎಲ್ಲವನ್ನೂ ಸಮಾನವಾಗಿ ಕಂಡು ಕ್ಷೇತ್ರದ ಜನತೆಯೊಂದಿಗೆ ಸದಾ ಭಾಂದವ್ಯ ಇಟ್ಟುಕೊಂಡವರು. ಕ್ಷೇತ್ರದ ಅಭಿವೃದ್ಧಿಗಾಗಿ ಅರ್ಹನಿಶಿ ದುಡಿದವರು. ಇಂತಹ ಅಪರೂಪದ ರಾಜಕಾರಣಿ ಎಲ್ಲ ಮಹಿಳೆಯರಿಗೂ ಮಾದರಿ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago