ಆಂದೋಲನ ಪುರವಣಿ

ವನಿತೆ ಮಮತೆ : ಮಾರ್ಗರೇಟ್ ಆಳ್ವ ಎಂಬ ಮಾದರಿ ರಾಜಕಾರಣಿ

ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದೇಶದ ಪರಮೋಚ್ಛ ಹುದ್ದೆಯನ್ನು ಮಹಿಳೆಯೊಬ್ಬರು ಮತ್ತೆ ಅಲಂಕರಿಸಿದಂತಾಗಿದೆ.

ಇದರ ಬೆನ್ನಲ್ಲೇ ವಿಪಕ್ಷಗಳು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕನ್ನಡತಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಿದೆ. ಅವರ ಗೆಲುವು-ಸೋಲು ರಾಜಕೀಯ ಲೆಕ್ಕಾಚಾರ. ಅದರಾಚೆಗೆ ಮಾರ್ಗರೇಟ್ ಆಳ್ವ ನಿಜಕ್ಕೂ ಆ ಸ್ಥಾನಕ್ಕೆ ಅರ್ಹರು. ಅವರ ಸಾಧನೆ, ನಿಭಾಯಿಸಿದ ಜವಾಬ್ದಾರಿಗಳೇ ಇದಕ್ಕೆ ಸಾಕ್ಷಿ.

ಮಂಗಳೂರಿನ ರೋಮನ್ ಕ್ಯಾಥೋಲಿಕ್ ಕುಟುಂಬದಲ್ಲಿ ಏ.೧೪, ೧೯೪೨ರಲ್ಲಿ ಹುಟ್ಟಿದ ಮಾರ್ಗರೇಟ್ ಆಳ್ವ ನಂತರ ವಿದ್ಯಾಭ್ಯಾಸ ಪಡೆದದ್ದೆಲ್ಲವೂ ಬೆಂಗಳೂರಿನಲ್ಲಿ. ೮೦ ವರ್ಷದ ಮಾರ್ಗರೇಟ್ ಅವರು ಸುಮಾರು ೬೦ ವರ್ಷಗಳನ್ನು ರಾಜಕಾರಣದಲ್ಲಿಯೇ ಕಳೆದವರು. ೧೯೭೪ರಲ್ಲಿ ಮೊದಲಿಗೆ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಅವರು ನಂತರ ೧೯೮೦, ೮೬, ೯೨ರಲ್ಲಿ ಲೋಕಸಭೆಗೆ ಆಯ್ಕೆಯಾದವರು. ಸಂಸದೀಯ ವ್ಯವಹಾರಗಳ ಖಾತೆ, ಯುವಜನ ಮತ್ತು ಕ್ರೀಡಾ ಖಾತೆ, ಮಹಿಳೆ-ಮಕ್ಕಳ ಕಲ್ಯಾಣ ಖಾತೆಗಳನ್ನು ನಿರ್ವಹಿಸಿ ಸೈ ಎನ್ನಿಸಿಕೊಂಡವರು. ಅದಕ್ಕಿಂತ ಹೆಚ್ಚಾಗಿ ಗೋವಾ, ಗುಜರಾತ್, ರಾಜಸ್ಥಾನ, ಉತ್ತರಾಖಾಂಡ್ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದವರು.

ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಹೈಕಮಾಂಡ್ ದೃಷ್ಟಿಯಲ್ಲಿ ಒಳ್ಳೆಯ ನಾಯಕಿ ಎನ್ನಿಸಿಕೊಂಡ ಮಾರ್ಗರೇಟ್ ಆಳ್ವ ಅವರು ಸೋಲು-ಗೆಲುವು ಎಲ್ಲವನ್ನೂ ಸಮಾನವಾಗಿ ಕಂಡು ಕ್ಷೇತ್ರದ ಜನತೆಯೊಂದಿಗೆ ಸದಾ ಭಾಂದವ್ಯ ಇಟ್ಟುಕೊಂಡವರು. ಕ್ಷೇತ್ರದ ಅಭಿವೃದ್ಧಿಗಾಗಿ ಅರ್ಹನಿಶಿ ದುಡಿದವರು. ಇಂತಹ ಅಪರೂಪದ ರಾಜಕಾರಣಿ ಎಲ್ಲ ಮಹಿಳೆಯರಿಗೂ ಮಾದರಿ.

andolana

Recent Posts

ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…

21 mins ago

ಶಾಲಾ ಬಸ್ ತಡೆದು ಬಾಲಕಿಯನ್ನು ವಶಕ್ಕೆ ನೀಡುವಂತೆ ಕಿರಿಕ್: ಪುಂಡರಿಬ್ಬರ ಬಂಧನ

ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…

30 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸಿ

ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…

34 mins ago

ಓದುಗರ ಪತ್ರ:  ರಷ್ಯಾ-ಭಾರತ ಇನ್ನೂ ಹತ್ತಿರ

ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…

1 hour ago

ಓದುಗರ ಪತ್ರ: ಸೋಲಾರ್ ಕೃಷಿ ಪಂಪ್ ಸೆಟ್ ಸಬ್ಸಿಡಿ ಸದ್ಬಳಕೆಯಾಗಲಿ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…

1 hour ago

ಕಾಡುಪ್ರಾಣಿಗಳಿಗೆ ಪ್ರತಿನಿತ್ಯ ಒಂದು ಹಸು ಬಲಿ!

ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…

2 hours ago