ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದೇಶದ ಪರಮೋಚ್ಛ ಹುದ್ದೆಯನ್ನು ಮಹಿಳೆಯೊಬ್ಬರು ಮತ್ತೆ ಅಲಂಕರಿಸಿದಂತಾಗಿದೆ.
ಇದರ ಬೆನ್ನಲ್ಲೇ ವಿಪಕ್ಷಗಳು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕನ್ನಡತಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಿದೆ. ಅವರ ಗೆಲುವು-ಸೋಲು ರಾಜಕೀಯ ಲೆಕ್ಕಾಚಾರ. ಅದರಾಚೆಗೆ ಮಾರ್ಗರೇಟ್ ಆಳ್ವ ನಿಜಕ್ಕೂ ಆ ಸ್ಥಾನಕ್ಕೆ ಅರ್ಹರು. ಅವರ ಸಾಧನೆ, ನಿಭಾಯಿಸಿದ ಜವಾಬ್ದಾರಿಗಳೇ ಇದಕ್ಕೆ ಸಾಕ್ಷಿ.
ಮಂಗಳೂರಿನ ರೋಮನ್ ಕ್ಯಾಥೋಲಿಕ್ ಕುಟುಂಬದಲ್ಲಿ ಏ.೧೪, ೧೯೪೨ರಲ್ಲಿ ಹುಟ್ಟಿದ ಮಾರ್ಗರೇಟ್ ಆಳ್ವ ನಂತರ ವಿದ್ಯಾಭ್ಯಾಸ ಪಡೆದದ್ದೆಲ್ಲವೂ ಬೆಂಗಳೂರಿನಲ್ಲಿ. ೮೦ ವರ್ಷದ ಮಾರ್ಗರೇಟ್ ಅವರು ಸುಮಾರು ೬೦ ವರ್ಷಗಳನ್ನು ರಾಜಕಾರಣದಲ್ಲಿಯೇ ಕಳೆದವರು. ೧೯೭೪ರಲ್ಲಿ ಮೊದಲಿಗೆ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಅವರು ನಂತರ ೧೯೮೦, ೮೬, ೯೨ರಲ್ಲಿ ಲೋಕಸಭೆಗೆ ಆಯ್ಕೆಯಾದವರು. ಸಂಸದೀಯ ವ್ಯವಹಾರಗಳ ಖಾತೆ, ಯುವಜನ ಮತ್ತು ಕ್ರೀಡಾ ಖಾತೆ, ಮಹಿಳೆ-ಮಕ್ಕಳ ಕಲ್ಯಾಣ ಖಾತೆಗಳನ್ನು ನಿರ್ವಹಿಸಿ ಸೈ ಎನ್ನಿಸಿಕೊಂಡವರು. ಅದಕ್ಕಿಂತ ಹೆಚ್ಚಾಗಿ ಗೋವಾ, ಗುಜರಾತ್, ರಾಜಸ್ಥಾನ, ಉತ್ತರಾಖಾಂಡ್ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದವರು.
ಕಾಂಗ್ರೆಸ್ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಹೈಕಮಾಂಡ್ ದೃಷ್ಟಿಯಲ್ಲಿ ಒಳ್ಳೆಯ ನಾಯಕಿ ಎನ್ನಿಸಿಕೊಂಡ ಮಾರ್ಗರೇಟ್ ಆಳ್ವ ಅವರು ಸೋಲು-ಗೆಲುವು ಎಲ್ಲವನ್ನೂ ಸಮಾನವಾಗಿ ಕಂಡು ಕ್ಷೇತ್ರದ ಜನತೆಯೊಂದಿಗೆ ಸದಾ ಭಾಂದವ್ಯ ಇಟ್ಟುಕೊಂಡವರು. ಕ್ಷೇತ್ರದ ಅಭಿವೃದ್ಧಿಗಾಗಿ ಅರ್ಹನಿಶಿ ದುಡಿದವರು. ಇಂತಹ ಅಪರೂಪದ ರಾಜಕಾರಣಿ ಎಲ್ಲ ಮಹಿಳೆಯರಿಗೂ ಮಾದರಿ.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…