ಆಂದೋಲನ ಪುರವಣಿ

ವನಿತೆ ಮಮತೆ : ಮಾರ್ಗರೇಟ್ ಆಳ್ವ ಎಂಬ ಮಾದರಿ ರಾಜಕಾರಣಿ

ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಆ ಮೂಲಕ ದೇಶದ ಪರಮೋಚ್ಛ ಹುದ್ದೆಯನ್ನು ಮಹಿಳೆಯೊಬ್ಬರು ಮತ್ತೆ ಅಲಂಕರಿಸಿದಂತಾಗಿದೆ.

ಇದರ ಬೆನ್ನಲ್ಲೇ ವಿಪಕ್ಷಗಳು ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಕನ್ನಡತಿ ಮಾರ್ಗರೇಟ್ ಆಳ್ವ ಅವರನ್ನು ಆಯ್ಕೆ ಮಾಡಿದೆ. ಅವರ ಗೆಲುವು-ಸೋಲು ರಾಜಕೀಯ ಲೆಕ್ಕಾಚಾರ. ಅದರಾಚೆಗೆ ಮಾರ್ಗರೇಟ್ ಆಳ್ವ ನಿಜಕ್ಕೂ ಆ ಸ್ಥಾನಕ್ಕೆ ಅರ್ಹರು. ಅವರ ಸಾಧನೆ, ನಿಭಾಯಿಸಿದ ಜವಾಬ್ದಾರಿಗಳೇ ಇದಕ್ಕೆ ಸಾಕ್ಷಿ.

ಮಂಗಳೂರಿನ ರೋಮನ್ ಕ್ಯಾಥೋಲಿಕ್ ಕುಟುಂಬದಲ್ಲಿ ಏ.೧೪, ೧೯೪೨ರಲ್ಲಿ ಹುಟ್ಟಿದ ಮಾರ್ಗರೇಟ್ ಆಳ್ವ ನಂತರ ವಿದ್ಯಾಭ್ಯಾಸ ಪಡೆದದ್ದೆಲ್ಲವೂ ಬೆಂಗಳೂರಿನಲ್ಲಿ. ೮೦ ವರ್ಷದ ಮಾರ್ಗರೇಟ್ ಅವರು ಸುಮಾರು ೬೦ ವರ್ಷಗಳನ್ನು ರಾಜಕಾರಣದಲ್ಲಿಯೇ ಕಳೆದವರು. ೧೯೭೪ರಲ್ಲಿ ಮೊದಲಿಗೆ ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಅವರು ನಂತರ ೧೯೮೦, ೮೬, ೯೨ರಲ್ಲಿ ಲೋಕಸಭೆಗೆ ಆಯ್ಕೆಯಾದವರು. ಸಂಸದೀಯ ವ್ಯವಹಾರಗಳ ಖಾತೆ, ಯುವಜನ ಮತ್ತು ಕ್ರೀಡಾ ಖಾತೆ, ಮಹಿಳೆ-ಮಕ್ಕಳ ಕಲ್ಯಾಣ ಖಾತೆಗಳನ್ನು ನಿರ್ವಹಿಸಿ ಸೈ ಎನ್ನಿಸಿಕೊಂಡವರು. ಅದಕ್ಕಿಂತ ಹೆಚ್ಚಾಗಿ ಗೋವಾ, ಗುಜರಾತ್, ರಾಜಸ್ಥಾನ, ಉತ್ತರಾಖಾಂಡ್ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದವರು.

ಕಾಂಗ್ರೆಸ್‌ನಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ ಹೈಕಮಾಂಡ್ ದೃಷ್ಟಿಯಲ್ಲಿ ಒಳ್ಳೆಯ ನಾಯಕಿ ಎನ್ನಿಸಿಕೊಂಡ ಮಾರ್ಗರೇಟ್ ಆಳ್ವ ಅವರು ಸೋಲು-ಗೆಲುವು ಎಲ್ಲವನ್ನೂ ಸಮಾನವಾಗಿ ಕಂಡು ಕ್ಷೇತ್ರದ ಜನತೆಯೊಂದಿಗೆ ಸದಾ ಭಾಂದವ್ಯ ಇಟ್ಟುಕೊಂಡವರು. ಕ್ಷೇತ್ರದ ಅಭಿವೃದ್ಧಿಗಾಗಿ ಅರ್ಹನಿಶಿ ದುಡಿದವರು. ಇಂತಹ ಅಪರೂಪದ ರಾಜಕಾರಣಿ ಎಲ್ಲ ಮಹಿಳೆಯರಿಗೂ ಮಾದರಿ.

andolana

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

2 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

9 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

9 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

9 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

9 hours ago