ಆಂದೋಲನ ಪುರವಣಿ

ಜಡವಸ್ತುಗಳಿಗೂ ಜೀವ ತುಂಬುವ ಮೂರ್ತಿ ಇವರು

ಎ. ಆರ್. ಗಿರಿಧರ

ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯ ನಿವಾಸಿ ಕೆ. ಜಿ. ಅನಂತ ಕೃಷ್ಣ (ಮನೆಯವರು, ಸ್ನೇಹಿತರು ಕರೆಯುವುದು ಮೂರ್ತಿ) ಅವರಿಗೆ ಜಡ ವಸ್ತುಗಳಿಗೂ ಜೀವ ತುಂಬುವ ಕಲೆ ಕರಗತವಾಗಿದೆ. ಕೊಬ್ಬರಿಗಿಟಕಿ, ಕಬ್ಬಿಣದ ತಗಡು, ಬೆಲ್ಲದ ಉಂಡೆ, ಅಚ್ಚು, ಕ್ಯಾರೆಟ್, ಬೀಟ್ರೂಟ್ ಮೊದಲಾದ ತರಕಾರಿಗಳು, ಗೋಂಡಂಬಿ, ಬಣ್ಣದ ಪೇಪರ್ ಯಾವುದೇ ಇವರ ಕೈಗೇ ಸಿಕ್ಕಿದರೂ ಕಲಾಕೃತಿಗಳನ್ನು ರೂಪಿಸುವ ಕೈಚಳಕ ಇವರಿಗಿದೆ.

ಐಟಿಐ ಫಿಟ್ಟರ್ ವ್ಯಾಸಂಗ ಮಾಡಿ ವಿಕ್ರಾಂತ್ (ಈಗ ಜೆಕೆ) ಟೈರ್ಸ್‌ನಲ್ಲಿ ಮೋಲ್ಡ್ ವಿಭಾಗದಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಅನಂತ ಕೃಷ್ಣ ಕ್ಯಾರೆಟ್, ಮೂಲಂಗಿ, ಗೋಡಂಬಿ, ಕಡೆಗೆ ಕೊಬ್ಬರಿಯ ತುಂಡಿನಲ್ಲೂ ಬಾತುಕೋಳಿ ಮೊದಲಾದ ಚಿತ್ರಗಳನ್ನು ಮೂಡಿಸುತ್ತಾರೆ. ಚಿಕ್ಕಂದಿನಿಂದಲೂ ಕ್ರಿಯಾಶೀಲ ವ್ಯಕ್ತಿಯಾಗಿದ್ದ ಮೂರ್ತಿ ಅವರು ಆಟೋಟ, ಯೋಗಾಸನ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿಯೇ ಮುಂದಿರುತ್ತಿದ್ದರು. ೧೯೬೭ರಲ್ಲಿ ಕೊಬ್ಬರಿಯಲ್ಲಿ ಕಲಾಕೃತಿಗಳನ್ನು ರಚಿಸುತ್ತಿದ್ದ ಸುಬ್ಬ ಲಕ್ಷ ಮ್ಮ ಅವರು ಇವರಿಗೂ ಕೊಬ್ಬರಿ ಗಿಟಕಿಯೊಂದನ್ನು ಕೊಟ್ಟು ಸ್ಕೆಚ್ ಮಾಡಲು ಹೇಳಿದರು. ಅಂದಿನಿಂದ ಮೂರ್ತಿ ಅವರು ಕೊಬ್ಬರಿಯಲ್ಲಿ ಕಲಾ ಕೃತಿಗಳನ್ನು ರಚಿಸಲು ಆರಂಭಿಸಿದರು.

ಪರಿಚಯಸ್ತರು, ಅಕ್ಕಪಕ್ಕದವರ ಮನೆಯಲ್ಲಿ ಮದುವೆ ನಿಶ್ಚಯವಾದರೆ ಮೊದಲು ಸಂಪರ್ಕಿಸುವುದು ಮೂರ್ತಿ ಅವರನ್ನು. ಕೊಬ್ಬರಿ ಗಿಟಕಿನಲ್ಲಿ, ವೀಣೆ, ನವಿಲು, ಗಿಳಿ ಪಂಜರ, ಪನ್ನೀರು ದಾನಿ, ಗೌರಿಯ ಮುಖ ಹೀಗೆ ಹಲವಾರು ಕಲಾಕೃತಿಗಳನ್ನು ರೂಪಿಸುತ್ತಾರೆ. ಇದಕ್ಕಾಗಿ ಅಂಗಡಿಗೆ ತೆರಳಿ ಸುಮಾರು ೧೦೦ ಕೊಬ್ಬರಿ ಗಿಟಕುಗಳನ್ನು ಹುಡುಕಿದರೆ ಆಕಾರಕ್ಕೆ ತಕ್ಕಂತೆ ಕೆಲವೇ ಗಿಟಕಿಗಳು ಸಿಗುತ್ತವೆ.

ಅಂಗಡಿಯವರು ಕೇಳಿದಷ್ಟು ಬೆಲೆ ನೀಡಿ ಮನೆಗೆ ತಂದು ಅದನ್ನು ಆಕಾರಕ್ಕೆ ತಕ್ಕಂತೆ ಕತ್ತರಿಸಿ ಕಲಾ ಕೃತಿಗಳನ್ನು ರೂಪಿಸುತ್ತಾರೆ. ಇವರು ಮಾಡಿದ ಕೊಬ್ಬರಿ ಕಲಾಕೃತಿಗಳು ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಇತರೆ ದೇಶಗಳಿಗೂ ತಲುಪಿರುವುದು ವಿಶೇಷ. ಚಿಕ್ಕ ಗಾತ್ರದಲ್ಲಿ ಬರುವ ಬಕೆಟ್, ಬೆಲ್ಲದಲ್ಲಿ ಶಿವಲಿಂಗ, ಬಾತುಕೋಳಿ, ಕಮಲದ ಬಟ್ಟಲು, ಹಣತೆ ಮೊದಲಾದ ಕಲಾಕೃತಿಗಳು ಹೆಚ್ಚು ಆಕರ್ಷಣೀಯವಾಗಿವೆ.

ಮೆಟಲ್ ವರ್ಕ್: ಅಲ್ಯೂಮಿನಿಯಂ ತಗಡಿನಲ್ಲಿಯೂ ಇವರು ನಿಪುಣರು. ಪರಶುರಾಮ, ನವಿಲು, ಗಿಡಮರ, ಕೊಕ್ಕರೆ ಮೊದಲಾದ ಕಲಾಕೃತಿಗಳು ಇವರ ಕೈಚಳಕದಲ್ಲಿ ಮೂಡಿವೆ. ಮೆಟಲ್ ವರ್ಕ್ ಮಾಡಲು ಅಪಾರ ಪರಿಶ್ರಮ ಬೇಕು. ಮೊದಲು ಯಾವ ಚಿತ್ರ ರಚಿಸಬೇಕೋ ಅದರ ಸ್ಕೆಚ್ ಹಾಕುಕೊಂಡು ಚಿನ್ನ, ಬೆಳ್ಳಿ ಕೆಲಸಗಾರರು ಬಳಸುವ ಆಕ್ಸಾ ಬ್ಲೇಡ್ ಮಾದರಿಯ ಉಪಕರಣದಲ್ಲಿ ಕೊರೆಯುತ್ತಾ ಹೋಗಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ಕೈಗೆ ಗಾಯವಾಗುತ್ತದೆ ಇಲ್ಲವೇ ಕಲಾಕೃತಿ ಹಾಳಾಗುತ್ತದೆ. ಸುಂದರ ಕಲಾಕೃತಿ ಮೂಡಿ ಬಂದಾಗ ಆಗುವ ಸಂತಸಕ್ಕೆ ಬೆಲೆ ಕಟ್ಟಲಾಗದು ಎನ್ನುತ್ತಾರೆ ಮೂರ್ತಿ.

ಪೇಪರ್ ಕಟಿಂಗ್ಸ್ ನಲ್ಲಿಯೂ ಸೈ: ಪತ್ರಿಕೆಯಲ್ಲಿ ಬಂದಿದ್ದ ಪೇಪರ್ ಕಟಿಂಗ್ ಕಲಾವಿದರೊಬ್ಬರ ಬಗೆಗಿನ ಲೇಖನದಿಂದ ಪ್ರೇರಿತರಾದ ಮೂರ್ತಿ ಅವರು ಬಣ್ಣದ ಪೇಪರ್ ಗಳಲ್ಲಿ ಗಂಡಭೇರುಂಡ, ಅಶೋಕ ಚಕ್ರ ಮೊದಲಾದವುಗಳನ್ನು ರಚಿಸುವುದನ್ನು ಕಲಿತರು. ಇನ್ನು ಹತ್ತಿ ಹಾರ ಮಾಡುವು ದರಲ್ಲಿಯೂ ಇವರು ನಿಪುಣರು. ಹಬ್ಬದ ದಿನಗಳಲ್ಲಿ ತಿಂಗಳಿಗೂ ಮೊದಲೇ ಇಂತಹ ಹಾರ ಬೇಕು ಎಂದು ಬೇಡಿಕೆ ಇಡುವ ಗ್ರಾಹಕರೂ ಇದ್ದಾರೆ.

 

andolana

Recent Posts

ಇವ ನಮ್ಮವ ಮಸೂದೆ; ಅಮಾಯಕ ಯುವ ಜೀವಗಳ ರಕ್ಷಣೆ

ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…

20 mins ago

ಪ್ರೊ.ಡಿ.ಆನಂದ್ – ಮ್ಯಾನೇಜ್‌ಮೆಂಟ್ ಶಿಕ್ಷಣದ ಜಂಗಮ

ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು  ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…

24 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸಂದೇಶ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…

34 mins ago

ಅದ್ಧೂರಿಯಾಗಿ ನೆರವೇರಿದ ನಂಜನಗೂಡಿನ ಗೌತಮ ಪಂಚಮಹಾರಥೋತ್ಸವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಹಸ್ರಾರು ಮಂದಿ ಭಕ್ತರ ಸಮ್ಮುಖದಲ್ಲಿ ಗೌತಮ ಪಂಚಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಪಂಚಮಹಾರಥೋತ್ಸವದ ಹಿನ್ನೆಲೆಯಲ್ಲಿ ಇಂದು…

47 mins ago

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

4 hours ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

4 hours ago