ಆಂದೋಲನ ಪುರವಣಿ

ಜಡವಸ್ತುಗಳಿಗೂ ಜೀವ ತುಂಬುವ ಮೂರ್ತಿ ಇವರು

ಎ. ಆರ್. ಗಿರಿಧರ

ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯ ನಿವಾಸಿ ಕೆ. ಜಿ. ಅನಂತ ಕೃಷ್ಣ (ಮನೆಯವರು, ಸ್ನೇಹಿತರು ಕರೆಯುವುದು ಮೂರ್ತಿ) ಅವರಿಗೆ ಜಡ ವಸ್ತುಗಳಿಗೂ ಜೀವ ತುಂಬುವ ಕಲೆ ಕರಗತವಾಗಿದೆ. ಕೊಬ್ಬರಿಗಿಟಕಿ, ಕಬ್ಬಿಣದ ತಗಡು, ಬೆಲ್ಲದ ಉಂಡೆ, ಅಚ್ಚು, ಕ್ಯಾರೆಟ್, ಬೀಟ್ರೂಟ್ ಮೊದಲಾದ ತರಕಾರಿಗಳು, ಗೋಂಡಂಬಿ, ಬಣ್ಣದ ಪೇಪರ್ ಯಾವುದೇ ಇವರ ಕೈಗೇ ಸಿಕ್ಕಿದರೂ ಕಲಾಕೃತಿಗಳನ್ನು ರೂಪಿಸುವ ಕೈಚಳಕ ಇವರಿಗಿದೆ.

ಐಟಿಐ ಫಿಟ್ಟರ್ ವ್ಯಾಸಂಗ ಮಾಡಿ ವಿಕ್ರಾಂತ್ (ಈಗ ಜೆಕೆ) ಟೈರ್ಸ್‌ನಲ್ಲಿ ಮೋಲ್ಡ್ ವಿಭಾಗದಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಅನಂತ ಕೃಷ್ಣ ಕ್ಯಾರೆಟ್, ಮೂಲಂಗಿ, ಗೋಡಂಬಿ, ಕಡೆಗೆ ಕೊಬ್ಬರಿಯ ತುಂಡಿನಲ್ಲೂ ಬಾತುಕೋಳಿ ಮೊದಲಾದ ಚಿತ್ರಗಳನ್ನು ಮೂಡಿಸುತ್ತಾರೆ. ಚಿಕ್ಕಂದಿನಿಂದಲೂ ಕ್ರಿಯಾಶೀಲ ವ್ಯಕ್ತಿಯಾಗಿದ್ದ ಮೂರ್ತಿ ಅವರು ಆಟೋಟ, ಯೋಗಾಸನ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿಯೇ ಮುಂದಿರುತ್ತಿದ್ದರು. ೧೯೬೭ರಲ್ಲಿ ಕೊಬ್ಬರಿಯಲ್ಲಿ ಕಲಾಕೃತಿಗಳನ್ನು ರಚಿಸುತ್ತಿದ್ದ ಸುಬ್ಬ ಲಕ್ಷ ಮ್ಮ ಅವರು ಇವರಿಗೂ ಕೊಬ್ಬರಿ ಗಿಟಕಿಯೊಂದನ್ನು ಕೊಟ್ಟು ಸ್ಕೆಚ್ ಮಾಡಲು ಹೇಳಿದರು. ಅಂದಿನಿಂದ ಮೂರ್ತಿ ಅವರು ಕೊಬ್ಬರಿಯಲ್ಲಿ ಕಲಾ ಕೃತಿಗಳನ್ನು ರಚಿಸಲು ಆರಂಭಿಸಿದರು.

ಪರಿಚಯಸ್ತರು, ಅಕ್ಕಪಕ್ಕದವರ ಮನೆಯಲ್ಲಿ ಮದುವೆ ನಿಶ್ಚಯವಾದರೆ ಮೊದಲು ಸಂಪರ್ಕಿಸುವುದು ಮೂರ್ತಿ ಅವರನ್ನು. ಕೊಬ್ಬರಿ ಗಿಟಕಿನಲ್ಲಿ, ವೀಣೆ, ನವಿಲು, ಗಿಳಿ ಪಂಜರ, ಪನ್ನೀರು ದಾನಿ, ಗೌರಿಯ ಮುಖ ಹೀಗೆ ಹಲವಾರು ಕಲಾಕೃತಿಗಳನ್ನು ರೂಪಿಸುತ್ತಾರೆ. ಇದಕ್ಕಾಗಿ ಅಂಗಡಿಗೆ ತೆರಳಿ ಸುಮಾರು ೧೦೦ ಕೊಬ್ಬರಿ ಗಿಟಕುಗಳನ್ನು ಹುಡುಕಿದರೆ ಆಕಾರಕ್ಕೆ ತಕ್ಕಂತೆ ಕೆಲವೇ ಗಿಟಕಿಗಳು ಸಿಗುತ್ತವೆ.

ಅಂಗಡಿಯವರು ಕೇಳಿದಷ್ಟು ಬೆಲೆ ನೀಡಿ ಮನೆಗೆ ತಂದು ಅದನ್ನು ಆಕಾರಕ್ಕೆ ತಕ್ಕಂತೆ ಕತ್ತರಿಸಿ ಕಲಾ ಕೃತಿಗಳನ್ನು ರೂಪಿಸುತ್ತಾರೆ. ಇವರು ಮಾಡಿದ ಕೊಬ್ಬರಿ ಕಲಾಕೃತಿಗಳು ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಇತರೆ ದೇಶಗಳಿಗೂ ತಲುಪಿರುವುದು ವಿಶೇಷ. ಚಿಕ್ಕ ಗಾತ್ರದಲ್ಲಿ ಬರುವ ಬಕೆಟ್, ಬೆಲ್ಲದಲ್ಲಿ ಶಿವಲಿಂಗ, ಬಾತುಕೋಳಿ, ಕಮಲದ ಬಟ್ಟಲು, ಹಣತೆ ಮೊದಲಾದ ಕಲಾಕೃತಿಗಳು ಹೆಚ್ಚು ಆಕರ್ಷಣೀಯವಾಗಿವೆ.

ಮೆಟಲ್ ವರ್ಕ್: ಅಲ್ಯೂಮಿನಿಯಂ ತಗಡಿನಲ್ಲಿಯೂ ಇವರು ನಿಪುಣರು. ಪರಶುರಾಮ, ನವಿಲು, ಗಿಡಮರ, ಕೊಕ್ಕರೆ ಮೊದಲಾದ ಕಲಾಕೃತಿಗಳು ಇವರ ಕೈಚಳಕದಲ್ಲಿ ಮೂಡಿವೆ. ಮೆಟಲ್ ವರ್ಕ್ ಮಾಡಲು ಅಪಾರ ಪರಿಶ್ರಮ ಬೇಕು. ಮೊದಲು ಯಾವ ಚಿತ್ರ ರಚಿಸಬೇಕೋ ಅದರ ಸ್ಕೆಚ್ ಹಾಕುಕೊಂಡು ಚಿನ್ನ, ಬೆಳ್ಳಿ ಕೆಲಸಗಾರರು ಬಳಸುವ ಆಕ್ಸಾ ಬ್ಲೇಡ್ ಮಾದರಿಯ ಉಪಕರಣದಲ್ಲಿ ಕೊರೆಯುತ್ತಾ ಹೋಗಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ಕೈಗೆ ಗಾಯವಾಗುತ್ತದೆ ಇಲ್ಲವೇ ಕಲಾಕೃತಿ ಹಾಳಾಗುತ್ತದೆ. ಸುಂದರ ಕಲಾಕೃತಿ ಮೂಡಿ ಬಂದಾಗ ಆಗುವ ಸಂತಸಕ್ಕೆ ಬೆಲೆ ಕಟ್ಟಲಾಗದು ಎನ್ನುತ್ತಾರೆ ಮೂರ್ತಿ.

ಪೇಪರ್ ಕಟಿಂಗ್ಸ್ ನಲ್ಲಿಯೂ ಸೈ: ಪತ್ರಿಕೆಯಲ್ಲಿ ಬಂದಿದ್ದ ಪೇಪರ್ ಕಟಿಂಗ್ ಕಲಾವಿದರೊಬ್ಬರ ಬಗೆಗಿನ ಲೇಖನದಿಂದ ಪ್ರೇರಿತರಾದ ಮೂರ್ತಿ ಅವರು ಬಣ್ಣದ ಪೇಪರ್ ಗಳಲ್ಲಿ ಗಂಡಭೇರುಂಡ, ಅಶೋಕ ಚಕ್ರ ಮೊದಲಾದವುಗಳನ್ನು ರಚಿಸುವುದನ್ನು ಕಲಿತರು. ಇನ್ನು ಹತ್ತಿ ಹಾರ ಮಾಡುವು ದರಲ್ಲಿಯೂ ಇವರು ನಿಪುಣರು. ಹಬ್ಬದ ದಿನಗಳಲ್ಲಿ ತಿಂಗಳಿಗೂ ಮೊದಲೇ ಇಂತಹ ಹಾರ ಬೇಕು ಎಂದು ಬೇಡಿಕೆ ಇಡುವ ಗ್ರಾಹಕರೂ ಇದ್ದಾರೆ.

 

andolana

Recent Posts

ಯತೀಂದ್ರ ಸಿದ್ಧರಾಮಯ್ಯ ಅವಹೇಳನ ಪ್ರಕರಣ: ಪ್ರತಾಪ್ ಸಿಂಹ ಹಾಗೂ ಬಿಜೆಪಿ ಐಟಿ ಸೆಲ್ ವಿರುದ್ಧ ದೂರು ದಾಖಲು

ಮೈಸೂರು: ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ವಿರುದ್ಧ ಅವಹೇಳನ ಪೋಸ್ಟ್‌ ಮಾಡಿದ್ದ ಮಾಜಿ ಸಂಸದ ಪ್ರತಾಪ್‌ ಸಿಂಹ ಹಾಗೂ ಬಿಜೆಪಿ ಐಟಿ…

20 mins ago

ಫೆಬ್ರವರಿ.13ರಿಂದ ಹಂಪಿ ಉತ್ಸವ-2026

ವಿಜಯನಗರ: ವಿಜಯನಗರ ಸಾಮ್ರಾಜ್ಯದ ಗತವೈಭವ ನೆನಪು ಮಾಡಿಕೊಡುವ ಹಂಪಿ ಉತ್ಸವದ ತಯಾರಿ ನಡೆಯುತ್ತಿದೆ. ಫೆಬ್ರವರಿ.13, 14 ಹಾಗೂ 15ರಂದು ಹಂಪಿ…

28 mins ago

ಹನೂರು ಕ್ಷೇತ್ರದಲ್ಲಿ 15 ವರ್ಷಗಳಿಂದ ಆಗದೇ ಇದ್ದ ಅಭಿವೃದ್ಧಿ ಕಾರ್ಯ ನಾನು ಮಾಡಿ ತೋರಿಸಿದ್ದೇನೆ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವಿಧಾನಸಭಾ ಕ್ಷೇತ್ರದ ಮತದಾರರ ಋಣದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಚುನಾವಣಾ ಪೂರ್ವದಲ್ಲಿ…

38 mins ago

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

1 hour ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

2 hours ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

2 hours ago