ಆಂದೋಲನ ಪುರವಣಿ

ಜಡವಸ್ತುಗಳಿಗೂ ಜೀವ ತುಂಬುವ ಮೂರ್ತಿ ಇವರು

ಎ. ಆರ್. ಗಿರಿಧರ

ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯ ನಿವಾಸಿ ಕೆ. ಜಿ. ಅನಂತ ಕೃಷ್ಣ (ಮನೆಯವರು, ಸ್ನೇಹಿತರು ಕರೆಯುವುದು ಮೂರ್ತಿ) ಅವರಿಗೆ ಜಡ ವಸ್ತುಗಳಿಗೂ ಜೀವ ತುಂಬುವ ಕಲೆ ಕರಗತವಾಗಿದೆ. ಕೊಬ್ಬರಿಗಿಟಕಿ, ಕಬ್ಬಿಣದ ತಗಡು, ಬೆಲ್ಲದ ಉಂಡೆ, ಅಚ್ಚು, ಕ್ಯಾರೆಟ್, ಬೀಟ್ರೂಟ್ ಮೊದಲಾದ ತರಕಾರಿಗಳು, ಗೋಂಡಂಬಿ, ಬಣ್ಣದ ಪೇಪರ್ ಯಾವುದೇ ಇವರ ಕೈಗೇ ಸಿಕ್ಕಿದರೂ ಕಲಾಕೃತಿಗಳನ್ನು ರೂಪಿಸುವ ಕೈಚಳಕ ಇವರಿಗಿದೆ.

ಐಟಿಐ ಫಿಟ್ಟರ್ ವ್ಯಾಸಂಗ ಮಾಡಿ ವಿಕ್ರಾಂತ್ (ಈಗ ಜೆಕೆ) ಟೈರ್ಸ್‌ನಲ್ಲಿ ಮೋಲ್ಡ್ ವಿಭಾಗದಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಅನಂತ ಕೃಷ್ಣ ಕ್ಯಾರೆಟ್, ಮೂಲಂಗಿ, ಗೋಡಂಬಿ, ಕಡೆಗೆ ಕೊಬ್ಬರಿಯ ತುಂಡಿನಲ್ಲೂ ಬಾತುಕೋಳಿ ಮೊದಲಾದ ಚಿತ್ರಗಳನ್ನು ಮೂಡಿಸುತ್ತಾರೆ. ಚಿಕ್ಕಂದಿನಿಂದಲೂ ಕ್ರಿಯಾಶೀಲ ವ್ಯಕ್ತಿಯಾಗಿದ್ದ ಮೂರ್ತಿ ಅವರು ಆಟೋಟ, ಯೋಗಾಸನ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿಯೇ ಮುಂದಿರುತ್ತಿದ್ದರು. ೧೯೬೭ರಲ್ಲಿ ಕೊಬ್ಬರಿಯಲ್ಲಿ ಕಲಾಕೃತಿಗಳನ್ನು ರಚಿಸುತ್ತಿದ್ದ ಸುಬ್ಬ ಲಕ್ಷ ಮ್ಮ ಅವರು ಇವರಿಗೂ ಕೊಬ್ಬರಿ ಗಿಟಕಿಯೊಂದನ್ನು ಕೊಟ್ಟು ಸ್ಕೆಚ್ ಮಾಡಲು ಹೇಳಿದರು. ಅಂದಿನಿಂದ ಮೂರ್ತಿ ಅವರು ಕೊಬ್ಬರಿಯಲ್ಲಿ ಕಲಾ ಕೃತಿಗಳನ್ನು ರಚಿಸಲು ಆರಂಭಿಸಿದರು.

ಪರಿಚಯಸ್ತರು, ಅಕ್ಕಪಕ್ಕದವರ ಮನೆಯಲ್ಲಿ ಮದುವೆ ನಿಶ್ಚಯವಾದರೆ ಮೊದಲು ಸಂಪರ್ಕಿಸುವುದು ಮೂರ್ತಿ ಅವರನ್ನು. ಕೊಬ್ಬರಿ ಗಿಟಕಿನಲ್ಲಿ, ವೀಣೆ, ನವಿಲು, ಗಿಳಿ ಪಂಜರ, ಪನ್ನೀರು ದಾನಿ, ಗೌರಿಯ ಮುಖ ಹೀಗೆ ಹಲವಾರು ಕಲಾಕೃತಿಗಳನ್ನು ರೂಪಿಸುತ್ತಾರೆ. ಇದಕ್ಕಾಗಿ ಅಂಗಡಿಗೆ ತೆರಳಿ ಸುಮಾರು ೧೦೦ ಕೊಬ್ಬರಿ ಗಿಟಕುಗಳನ್ನು ಹುಡುಕಿದರೆ ಆಕಾರಕ್ಕೆ ತಕ್ಕಂತೆ ಕೆಲವೇ ಗಿಟಕಿಗಳು ಸಿಗುತ್ತವೆ.

ಅಂಗಡಿಯವರು ಕೇಳಿದಷ್ಟು ಬೆಲೆ ನೀಡಿ ಮನೆಗೆ ತಂದು ಅದನ್ನು ಆಕಾರಕ್ಕೆ ತಕ್ಕಂತೆ ಕತ್ತರಿಸಿ ಕಲಾ ಕೃತಿಗಳನ್ನು ರೂಪಿಸುತ್ತಾರೆ. ಇವರು ಮಾಡಿದ ಕೊಬ್ಬರಿ ಕಲಾಕೃತಿಗಳು ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಇತರೆ ದೇಶಗಳಿಗೂ ತಲುಪಿರುವುದು ವಿಶೇಷ. ಚಿಕ್ಕ ಗಾತ್ರದಲ್ಲಿ ಬರುವ ಬಕೆಟ್, ಬೆಲ್ಲದಲ್ಲಿ ಶಿವಲಿಂಗ, ಬಾತುಕೋಳಿ, ಕಮಲದ ಬಟ್ಟಲು, ಹಣತೆ ಮೊದಲಾದ ಕಲಾಕೃತಿಗಳು ಹೆಚ್ಚು ಆಕರ್ಷಣೀಯವಾಗಿವೆ.

ಮೆಟಲ್ ವರ್ಕ್: ಅಲ್ಯೂಮಿನಿಯಂ ತಗಡಿನಲ್ಲಿಯೂ ಇವರು ನಿಪುಣರು. ಪರಶುರಾಮ, ನವಿಲು, ಗಿಡಮರ, ಕೊಕ್ಕರೆ ಮೊದಲಾದ ಕಲಾಕೃತಿಗಳು ಇವರ ಕೈಚಳಕದಲ್ಲಿ ಮೂಡಿವೆ. ಮೆಟಲ್ ವರ್ಕ್ ಮಾಡಲು ಅಪಾರ ಪರಿಶ್ರಮ ಬೇಕು. ಮೊದಲು ಯಾವ ಚಿತ್ರ ರಚಿಸಬೇಕೋ ಅದರ ಸ್ಕೆಚ್ ಹಾಕುಕೊಂಡು ಚಿನ್ನ, ಬೆಳ್ಳಿ ಕೆಲಸಗಾರರು ಬಳಸುವ ಆಕ್ಸಾ ಬ್ಲೇಡ್ ಮಾದರಿಯ ಉಪಕರಣದಲ್ಲಿ ಕೊರೆಯುತ್ತಾ ಹೋಗಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ಕೈಗೆ ಗಾಯವಾಗುತ್ತದೆ ಇಲ್ಲವೇ ಕಲಾಕೃತಿ ಹಾಳಾಗುತ್ತದೆ. ಸುಂದರ ಕಲಾಕೃತಿ ಮೂಡಿ ಬಂದಾಗ ಆಗುವ ಸಂತಸಕ್ಕೆ ಬೆಲೆ ಕಟ್ಟಲಾಗದು ಎನ್ನುತ್ತಾರೆ ಮೂರ್ತಿ.

ಪೇಪರ್ ಕಟಿಂಗ್ಸ್ ನಲ್ಲಿಯೂ ಸೈ: ಪತ್ರಿಕೆಯಲ್ಲಿ ಬಂದಿದ್ದ ಪೇಪರ್ ಕಟಿಂಗ್ ಕಲಾವಿದರೊಬ್ಬರ ಬಗೆಗಿನ ಲೇಖನದಿಂದ ಪ್ರೇರಿತರಾದ ಮೂರ್ತಿ ಅವರು ಬಣ್ಣದ ಪೇಪರ್ ಗಳಲ್ಲಿ ಗಂಡಭೇರುಂಡ, ಅಶೋಕ ಚಕ್ರ ಮೊದಲಾದವುಗಳನ್ನು ರಚಿಸುವುದನ್ನು ಕಲಿತರು. ಇನ್ನು ಹತ್ತಿ ಹಾರ ಮಾಡುವು ದರಲ್ಲಿಯೂ ಇವರು ನಿಪುಣರು. ಹಬ್ಬದ ದಿನಗಳಲ್ಲಿ ತಿಂಗಳಿಗೂ ಮೊದಲೇ ಇಂತಹ ಹಾರ ಬೇಕು ಎಂದು ಬೇಡಿಕೆ ಇಡುವ ಗ್ರಾಹಕರೂ ಇದ್ದಾರೆ.

 

andolana

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

56 seconds ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

11 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

30 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

53 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago