ಆಂದೋಲನ ಪುರವಣಿ

ಜಡವಸ್ತುಗಳಿಗೂ ಜೀವ ತುಂಬುವ ಮೂರ್ತಿ ಇವರು

ಎ. ಆರ್. ಗಿರಿಧರ

ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯ ನಿವಾಸಿ ಕೆ. ಜಿ. ಅನಂತ ಕೃಷ್ಣ (ಮನೆಯವರು, ಸ್ನೇಹಿತರು ಕರೆಯುವುದು ಮೂರ್ತಿ) ಅವರಿಗೆ ಜಡ ವಸ್ತುಗಳಿಗೂ ಜೀವ ತುಂಬುವ ಕಲೆ ಕರಗತವಾಗಿದೆ. ಕೊಬ್ಬರಿಗಿಟಕಿ, ಕಬ್ಬಿಣದ ತಗಡು, ಬೆಲ್ಲದ ಉಂಡೆ, ಅಚ್ಚು, ಕ್ಯಾರೆಟ್, ಬೀಟ್ರೂಟ್ ಮೊದಲಾದ ತರಕಾರಿಗಳು, ಗೋಂಡಂಬಿ, ಬಣ್ಣದ ಪೇಪರ್ ಯಾವುದೇ ಇವರ ಕೈಗೇ ಸಿಕ್ಕಿದರೂ ಕಲಾಕೃತಿಗಳನ್ನು ರೂಪಿಸುವ ಕೈಚಳಕ ಇವರಿಗಿದೆ.

ಐಟಿಐ ಫಿಟ್ಟರ್ ವ್ಯಾಸಂಗ ಮಾಡಿ ವಿಕ್ರಾಂತ್ (ಈಗ ಜೆಕೆ) ಟೈರ್ಸ್‌ನಲ್ಲಿ ಮೋಲ್ಡ್ ವಿಭಾಗದಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಅನಂತ ಕೃಷ್ಣ ಕ್ಯಾರೆಟ್, ಮೂಲಂಗಿ, ಗೋಡಂಬಿ, ಕಡೆಗೆ ಕೊಬ್ಬರಿಯ ತುಂಡಿನಲ್ಲೂ ಬಾತುಕೋಳಿ ಮೊದಲಾದ ಚಿತ್ರಗಳನ್ನು ಮೂಡಿಸುತ್ತಾರೆ. ಚಿಕ್ಕಂದಿನಿಂದಲೂ ಕ್ರಿಯಾಶೀಲ ವ್ಯಕ್ತಿಯಾಗಿದ್ದ ಮೂರ್ತಿ ಅವರು ಆಟೋಟ, ಯೋಗಾಸನ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲಿಯೇ ಮುಂದಿರುತ್ತಿದ್ದರು. ೧೯೬೭ರಲ್ಲಿ ಕೊಬ್ಬರಿಯಲ್ಲಿ ಕಲಾಕೃತಿಗಳನ್ನು ರಚಿಸುತ್ತಿದ್ದ ಸುಬ್ಬ ಲಕ್ಷ ಮ್ಮ ಅವರು ಇವರಿಗೂ ಕೊಬ್ಬರಿ ಗಿಟಕಿಯೊಂದನ್ನು ಕೊಟ್ಟು ಸ್ಕೆಚ್ ಮಾಡಲು ಹೇಳಿದರು. ಅಂದಿನಿಂದ ಮೂರ್ತಿ ಅವರು ಕೊಬ್ಬರಿಯಲ್ಲಿ ಕಲಾ ಕೃತಿಗಳನ್ನು ರಚಿಸಲು ಆರಂಭಿಸಿದರು.

ಪರಿಚಯಸ್ತರು, ಅಕ್ಕಪಕ್ಕದವರ ಮನೆಯಲ್ಲಿ ಮದುವೆ ನಿಶ್ಚಯವಾದರೆ ಮೊದಲು ಸಂಪರ್ಕಿಸುವುದು ಮೂರ್ತಿ ಅವರನ್ನು. ಕೊಬ್ಬರಿ ಗಿಟಕಿನಲ್ಲಿ, ವೀಣೆ, ನವಿಲು, ಗಿಳಿ ಪಂಜರ, ಪನ್ನೀರು ದಾನಿ, ಗೌರಿಯ ಮುಖ ಹೀಗೆ ಹಲವಾರು ಕಲಾಕೃತಿಗಳನ್ನು ರೂಪಿಸುತ್ತಾರೆ. ಇದಕ್ಕಾಗಿ ಅಂಗಡಿಗೆ ತೆರಳಿ ಸುಮಾರು ೧೦೦ ಕೊಬ್ಬರಿ ಗಿಟಕುಗಳನ್ನು ಹುಡುಕಿದರೆ ಆಕಾರಕ್ಕೆ ತಕ್ಕಂತೆ ಕೆಲವೇ ಗಿಟಕಿಗಳು ಸಿಗುತ್ತವೆ.

ಅಂಗಡಿಯವರು ಕೇಳಿದಷ್ಟು ಬೆಲೆ ನೀಡಿ ಮನೆಗೆ ತಂದು ಅದನ್ನು ಆಕಾರಕ್ಕೆ ತಕ್ಕಂತೆ ಕತ್ತರಿಸಿ ಕಲಾ ಕೃತಿಗಳನ್ನು ರೂಪಿಸುತ್ತಾರೆ. ಇವರು ಮಾಡಿದ ಕೊಬ್ಬರಿ ಕಲಾಕೃತಿಗಳು ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಇತರೆ ದೇಶಗಳಿಗೂ ತಲುಪಿರುವುದು ವಿಶೇಷ. ಚಿಕ್ಕ ಗಾತ್ರದಲ್ಲಿ ಬರುವ ಬಕೆಟ್, ಬೆಲ್ಲದಲ್ಲಿ ಶಿವಲಿಂಗ, ಬಾತುಕೋಳಿ, ಕಮಲದ ಬಟ್ಟಲು, ಹಣತೆ ಮೊದಲಾದ ಕಲಾಕೃತಿಗಳು ಹೆಚ್ಚು ಆಕರ್ಷಣೀಯವಾಗಿವೆ.

ಮೆಟಲ್ ವರ್ಕ್: ಅಲ್ಯೂಮಿನಿಯಂ ತಗಡಿನಲ್ಲಿಯೂ ಇವರು ನಿಪುಣರು. ಪರಶುರಾಮ, ನವಿಲು, ಗಿಡಮರ, ಕೊಕ್ಕರೆ ಮೊದಲಾದ ಕಲಾಕೃತಿಗಳು ಇವರ ಕೈಚಳಕದಲ್ಲಿ ಮೂಡಿವೆ. ಮೆಟಲ್ ವರ್ಕ್ ಮಾಡಲು ಅಪಾರ ಪರಿಶ್ರಮ ಬೇಕು. ಮೊದಲು ಯಾವ ಚಿತ್ರ ರಚಿಸಬೇಕೋ ಅದರ ಸ್ಕೆಚ್ ಹಾಕುಕೊಂಡು ಚಿನ್ನ, ಬೆಳ್ಳಿ ಕೆಲಸಗಾರರು ಬಳಸುವ ಆಕ್ಸಾ ಬ್ಲೇಡ್ ಮಾದರಿಯ ಉಪಕರಣದಲ್ಲಿ ಕೊರೆಯುತ್ತಾ ಹೋಗಬೇಕು. ಸ್ವಲ್ಪ ಎಚ್ಚರ ತಪ್ಪಿದರೂ ಕೈಗೆ ಗಾಯವಾಗುತ್ತದೆ ಇಲ್ಲವೇ ಕಲಾಕೃತಿ ಹಾಳಾಗುತ್ತದೆ. ಸುಂದರ ಕಲಾಕೃತಿ ಮೂಡಿ ಬಂದಾಗ ಆಗುವ ಸಂತಸಕ್ಕೆ ಬೆಲೆ ಕಟ್ಟಲಾಗದು ಎನ್ನುತ್ತಾರೆ ಮೂರ್ತಿ.

ಪೇಪರ್ ಕಟಿಂಗ್ಸ್ ನಲ್ಲಿಯೂ ಸೈ: ಪತ್ರಿಕೆಯಲ್ಲಿ ಬಂದಿದ್ದ ಪೇಪರ್ ಕಟಿಂಗ್ ಕಲಾವಿದರೊಬ್ಬರ ಬಗೆಗಿನ ಲೇಖನದಿಂದ ಪ್ರೇರಿತರಾದ ಮೂರ್ತಿ ಅವರು ಬಣ್ಣದ ಪೇಪರ್ ಗಳಲ್ಲಿ ಗಂಡಭೇರುಂಡ, ಅಶೋಕ ಚಕ್ರ ಮೊದಲಾದವುಗಳನ್ನು ರಚಿಸುವುದನ್ನು ಕಲಿತರು. ಇನ್ನು ಹತ್ತಿ ಹಾರ ಮಾಡುವು ದರಲ್ಲಿಯೂ ಇವರು ನಿಪುಣರು. ಹಬ್ಬದ ದಿನಗಳಲ್ಲಿ ತಿಂಗಳಿಗೂ ಮೊದಲೇ ಇಂತಹ ಹಾರ ಬೇಕು ಎಂದು ಬೇಡಿಕೆ ಇಡುವ ಗ್ರಾಹಕರೂ ಇದ್ದಾರೆ.

 

andolana

Recent Posts

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

8 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

10 hours ago

ಭಾರತಿರಾಜ್‌ ಅಂತಿಮ ದರ್ಶನ ಪಡೆದ ರಜನಿ, ಕಮಲ್‌, ಸಿ.ಎಂ.ವಿಜಯ್‌

ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…

13 hours ago

ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನಕ್ಕೆ ದಲಿತ ಸಂಘಟನೆಗಳ ಆಗ್ರಹ

ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…

13 hours ago

ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಬಿಟ್ಟು ಬೇರೇನೂ ಮಾಡಲಿಲ್ಲ ಸಿದ್ದರಾಮಯ್ಯ: ಟೀಕೆ

ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…

13 hours ago

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

16 hours ago