ಆಂದೋಲನ ಪುರವಣಿ

ಬರಹ: ಬದುಕು : ನನ್ನ ಕವಿತೆಗಂಟಿದ ಕಥೆಗಳು

ಕೀರ್ತಿ ಎಸ್. ಬೈಂದೂರು keerthisba2018@gmail.com

ಬೆಳಗಿನ ಖಾಲಿತನ ಸರಿಸಿಟ್ಟ ಮನೆಯಂಗಳ ಬೈಗಿನಲ್ಲಿ ಗಾಳಿಪಟ ತಾಂರಿಗಾಗಿ ಮಕ್ಕಳ ದಂಡಿನ ಗೌಜಿನಲ್ಲಿರುತ್ತಿತ್ತು. ಪತ್ರಿಕೆ ಹರಿದು, ಅನ್ನ ನುರಿದು ಅಂಟಾಗಿಸಿ, ಹಿಡಿಕಡ್ಡಿಗಳನ್ನು ಅಲ್ಲಲ್ಲಿ ಒತ್ತಿಟ್ಟು, ಸ್ಕೆಚ್ ಪೆನ್‌ನಲ್ಲಿ ಎರಡು ಕಣ್ಣರಳಿಸಿ, ಉದ್ದಕ್ಕೆ ಬಾಲ ಜೋತು ಬಿಟ್ಟ ಗಾಳಿಪಟ ಹಕ್ಕಿಗಳಲ್ಲೇ ವಿಶೇಷ ಅಂತೆನಿಸುತ್ತಿತ್ತು. ಮಾರನೇ ದಿನ ಆಗಸವನ್ನೇ ಕೊಂಡುಕೊಂಡಷ್ಟು ಗತ್ತಿನಿಂದ ಹಾರುವುದೇನು! ಅದನ್ನು ಕಂಡದ್ದೇ ನಾನು ಮತ್ತು ನನ್ನ ಅಕ್ಕ ಸೇರಿ ಹುಮ್ಮಸ್ಸಿನಲ್ಲಿಯೇ ಗಾಳಿಪಟ ತಯಾರು ಮಾಡಿಬಿಟ್ಟೆವು. ಹಾರುವುದು ಹೋಗಲಿ, ಈ ಗಾಳಿಪಟ ಏಳುವುದೂ ಇಲ್ಲ. ಮತ್ತೆ ತಿಳಿದದ್ದು, ಗಾಳಿಪಟ ಹಾರುವುದಕ್ಕೆ ಹಗುರಾಗುವ ಅರ್ಹತೆಯಿರಬೇಕು ಎಂದು. ಮುಂದಿನ ಪ್ರಯತ್ನ ನಮ್ಮದು; ಸಹಕಾರ ಎದುರು ಮನೆಯವರದ್ದು. ಆದರೂ ನಾವೇ ಕೂತು ಮಾಡಿಸಿಕೊಂಡ ಕಾರಣಕ್ಕೆ ನಮ್ಮ ಹೆಸರಿಟ್ಟು ದಾರ ಕಟ್ಟಿ ಹಾರಿಸಿದ್ದೆವು. ಹಗುರಾಗಿ ಮೇಲಕ್ಕೆ ಥೇಟ್ ಹಕ್ಕಿಯಾಗಿ ಹಾರಾಡಿದ್ದ ಗಾಳಿಪಟವನ್ನು ಕಾಣುವಾಗ ಬೀಸಿದ್ದ ಚಪ್ಪಾಳೆ, ಖುಷಿಯಲ್ಲವು ಎಂಟು ಸಾಲಿನ ಪುಟ್ಟ ಕವಿತೆಯಾಗಿತ್ತು.

ಹಾಸ್ಟೆಲ್‌ನ ಏಕತಾನತೆಯ ಬದುಕಿನಲ್ಲಿ ಮನೆಯವರ ಫೋನ್‌ಗಾಗಿ ಕಾಯುವುದು ಕೂಡ ಸೇರಿಹೋಗಿತ್ತು. ಮನೆಯಿಂದ ಮತ್ತೆ ಹಾಸ್ಟೆಲ್ ಸೇರಿದ ದಿನ ವಿಪರೀತ ವೈರಾಗ್ಯ ತಾಳಿದ ಕವಿತೆ, ರುಚಿಗಟ್ಟಾದ ಅಡುಗೆಯು ಕವಿತೆ, ಬೆಳಗಿನ ಸೂರ್ಯೋದಯ ಮತ್ತು ರಾತ್ರಿಯ ಚಂದ್ರನ ಕುರಿತು ಹೀಗೆ ಹಲವು ಕವಿತೆಗಳನ್ನು ಸುಮ್ಮನೆ ಬರೆಯುತ್ತಿದ್ದೆನಷ್ಟೆ. ಅಡುಗೆ ಕವಿತೆ ಎಷ್ಟು ಯಶಸ್ವಿಯಾಯಿತೆಂದರೆ, ಕೇಳಿದ ತಕ್ಷಣವೆ ಮೆಸ್ ಆಂಟಿಯರೆಲ್ಲ ಮನೆಗೆ ಫೋನ್ ಮಾಡಿಕೊಡುತ್ತಿದ್ದರು. ಕವಿತೆಯ ಪ್ರೋಂಜನವೆಂದು ಈಗ ನಕ್ಕು ಸುಮ್ಮನಾಗುವುದು.
(ಲೇಖಕಿ ಮಾನಸಗಂಗೋತ್ರಿಯಲ್ಲಿ ಇದೀಗ ತಾನೇ ಕನ್ನಡ ಎಂ.ಎ. ವ್ಯಾಸಂಗ ಮುಗಿಸಿದ್ದಾರೆ)

andolana

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

33 mins ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

41 mins ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

1 hour ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

2 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

2 hours ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

2 hours ago