ಬೆಳಗಿನ ಖಾಲಿತನ ಸರಿಸಿಟ್ಟ ಮನೆಯಂಗಳ ಬೈಗಿನಲ್ಲಿ ಗಾಳಿಪಟ ತಾಂರಿಗಾಗಿ ಮಕ್ಕಳ ದಂಡಿನ ಗೌಜಿನಲ್ಲಿರುತ್ತಿತ್ತು. ಪತ್ರಿಕೆ ಹರಿದು, ಅನ್ನ ನುರಿದು ಅಂಟಾಗಿಸಿ, ಹಿಡಿಕಡ್ಡಿಗಳನ್ನು ಅಲ್ಲಲ್ಲಿ ಒತ್ತಿಟ್ಟು, ಸ್ಕೆಚ್ ಪೆನ್ನಲ್ಲಿ ಎರಡು ಕಣ್ಣರಳಿಸಿ, ಉದ್ದಕ್ಕೆ ಬಾಲ ಜೋತು ಬಿಟ್ಟ ಗಾಳಿಪಟ ಹಕ್ಕಿಗಳಲ್ಲೇ ವಿಶೇಷ ಅಂತೆನಿಸುತ್ತಿತ್ತು. ಮಾರನೇ ದಿನ ಆಗಸವನ್ನೇ ಕೊಂಡುಕೊಂಡಷ್ಟು ಗತ್ತಿನಿಂದ ಹಾರುವುದೇನು! ಅದನ್ನು ಕಂಡದ್ದೇ ನಾನು ಮತ್ತು ನನ್ನ ಅಕ್ಕ ಸೇರಿ ಹುಮ್ಮಸ್ಸಿನಲ್ಲಿಯೇ ಗಾಳಿಪಟ ತಯಾರು ಮಾಡಿಬಿಟ್ಟೆವು. ಹಾರುವುದು ಹೋಗಲಿ, ಈ ಗಾಳಿಪಟ ಏಳುವುದೂ ಇಲ್ಲ. ಮತ್ತೆ ತಿಳಿದದ್ದು, ಗಾಳಿಪಟ ಹಾರುವುದಕ್ಕೆ ಹಗುರಾಗುವ ಅರ್ಹತೆಯಿರಬೇಕು ಎಂದು. ಮುಂದಿನ ಪ್ರಯತ್ನ ನಮ್ಮದು; ಸಹಕಾರ ಎದುರು ಮನೆಯವರದ್ದು. ಆದರೂ ನಾವೇ ಕೂತು ಮಾಡಿಸಿಕೊಂಡ ಕಾರಣಕ್ಕೆ ನಮ್ಮ ಹೆಸರಿಟ್ಟು ದಾರ ಕಟ್ಟಿ ಹಾರಿಸಿದ್ದೆವು. ಹಗುರಾಗಿ ಮೇಲಕ್ಕೆ ಥೇಟ್ ಹಕ್ಕಿಯಾಗಿ ಹಾರಾಡಿದ್ದ ಗಾಳಿಪಟವನ್ನು ಕಾಣುವಾಗ ಬೀಸಿದ್ದ ಚಪ್ಪಾಳೆ, ಖುಷಿಯಲ್ಲವು ಎಂಟು ಸಾಲಿನ ಪುಟ್ಟ ಕವಿತೆಯಾಗಿತ್ತು.
ಹಾಸ್ಟೆಲ್ನ ಏಕತಾನತೆಯ ಬದುಕಿನಲ್ಲಿ ಮನೆಯವರ ಫೋನ್ಗಾಗಿ ಕಾಯುವುದು ಕೂಡ ಸೇರಿಹೋಗಿತ್ತು. ಮನೆಯಿಂದ ಮತ್ತೆ ಹಾಸ್ಟೆಲ್ ಸೇರಿದ ದಿನ ವಿಪರೀತ ವೈರಾಗ್ಯ ತಾಳಿದ ಕವಿತೆ, ರುಚಿಗಟ್ಟಾದ ಅಡುಗೆಯು ಕವಿತೆ, ಬೆಳಗಿನ ಸೂರ್ಯೋದಯ ಮತ್ತು ರಾತ್ರಿಯ ಚಂದ್ರನ ಕುರಿತು ಹೀಗೆ ಹಲವು ಕವಿತೆಗಳನ್ನು ಸುಮ್ಮನೆ ಬರೆಯುತ್ತಿದ್ದೆನಷ್ಟೆ. ಅಡುಗೆ ಕವಿತೆ ಎಷ್ಟು ಯಶಸ್ವಿಯಾಯಿತೆಂದರೆ, ಕೇಳಿದ ತಕ್ಷಣವೆ ಮೆಸ್ ಆಂಟಿಯರೆಲ್ಲ ಮನೆಗೆ ಫೋನ್ ಮಾಡಿಕೊಡುತ್ತಿದ್ದರು. ಕವಿತೆಯ ಪ್ರೋಂಜನವೆಂದು ಈಗ ನಕ್ಕು ಸುಮ್ಮನಾಗುವುದು.
(ಲೇಖಕಿ ಮಾನಸಗಂಗೋತ್ರಿಯಲ್ಲಿ ಇದೀಗ ತಾನೇ ಕನ್ನಡ ಎಂ.ಎ. ವ್ಯಾಸಂಗ ಮುಗಿಸಿದ್ದಾರೆ)
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಪಕ್ಕದ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯ ಪಕ್ಕದಲ್ಲಿರುವ ಮೋರಿಯೊಳಗೆ ಕಸದ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಇತ್ತೀಚೆಗೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದು ಸರ್ವೇಸಾಮಾನ್ಯ ಆಗಿಬಿಟ್ಟಿದೆ. ಈ ಕಾರಣದಿಂದ…
ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರಿಗೆ ಆಸ್ಪತ್ರೆಗೆ ಹೋಗುವುದೆಂದರೆ ಜೀವ ಉಳಿಸಿಕೊಳ್ಳುವ ಭರವಸೆಗಿಂತ, ‘ಜೇಬಿಗೆಕತ್ತರಿ’ ಬೀಳುವ ಭೀತಿಯೇಹೆಚ್ಚಾಗಿದೆ. ದೇಶದಲ್ಲಿ ನಡೆಯುವ ಶಸ್ತ್ರಚಿಕಿತ್ಸೆಗಳಲ್ಲಿ…
ಪಂಜು ಗಂಗೊಳ್ಳಿ ಜೈಲಿನ ಅನಕ್ಷರಸ್ಥ ಕೈದಿಗಳನ್ನು ಅಕ್ಷರಸ್ಥರನ್ನಾಗಿಸಲು ಮಹತ್ವದ ಯೋಜನೆ ರಾಜೇಶ್ ಕುಮಾರ್ ಯಾವತ್ತೂ ಶಾಲೆಯ ಮಟ್ಟಿಲು ಹತ್ತಿದವನಲ್ಲ. ಹಾಗಾಗಿ,…
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…