ಬೆಳಗಿನ ಖಾಲಿತನ ಸರಿಸಿಟ್ಟ ಮನೆಯಂಗಳ ಬೈಗಿನಲ್ಲಿ ಗಾಳಿಪಟ ತಾಂರಿಗಾಗಿ ಮಕ್ಕಳ ದಂಡಿನ ಗೌಜಿನಲ್ಲಿರುತ್ತಿತ್ತು. ಪತ್ರಿಕೆ ಹರಿದು, ಅನ್ನ ನುರಿದು ಅಂಟಾಗಿಸಿ, ಹಿಡಿಕಡ್ಡಿಗಳನ್ನು ಅಲ್ಲಲ್ಲಿ ಒತ್ತಿಟ್ಟು, ಸ್ಕೆಚ್ ಪೆನ್ನಲ್ಲಿ ಎರಡು ಕಣ್ಣರಳಿಸಿ, ಉದ್ದಕ್ಕೆ ಬಾಲ ಜೋತು ಬಿಟ್ಟ ಗಾಳಿಪಟ ಹಕ್ಕಿಗಳಲ್ಲೇ ವಿಶೇಷ ಅಂತೆನಿಸುತ್ತಿತ್ತು. ಮಾರನೇ ದಿನ ಆಗಸವನ್ನೇ ಕೊಂಡುಕೊಂಡಷ್ಟು ಗತ್ತಿನಿಂದ ಹಾರುವುದೇನು! ಅದನ್ನು ಕಂಡದ್ದೇ ನಾನು ಮತ್ತು ನನ್ನ ಅಕ್ಕ ಸೇರಿ ಹುಮ್ಮಸ್ಸಿನಲ್ಲಿಯೇ ಗಾಳಿಪಟ ತಯಾರು ಮಾಡಿಬಿಟ್ಟೆವು. ಹಾರುವುದು ಹೋಗಲಿ, ಈ ಗಾಳಿಪಟ ಏಳುವುದೂ ಇಲ್ಲ. ಮತ್ತೆ ತಿಳಿದದ್ದು, ಗಾಳಿಪಟ ಹಾರುವುದಕ್ಕೆ ಹಗುರಾಗುವ ಅರ್ಹತೆಯಿರಬೇಕು ಎಂದು. ಮುಂದಿನ ಪ್ರಯತ್ನ ನಮ್ಮದು; ಸಹಕಾರ ಎದುರು ಮನೆಯವರದ್ದು. ಆದರೂ ನಾವೇ ಕೂತು ಮಾಡಿಸಿಕೊಂಡ ಕಾರಣಕ್ಕೆ ನಮ್ಮ ಹೆಸರಿಟ್ಟು ದಾರ ಕಟ್ಟಿ ಹಾರಿಸಿದ್ದೆವು. ಹಗುರಾಗಿ ಮೇಲಕ್ಕೆ ಥೇಟ್ ಹಕ್ಕಿಯಾಗಿ ಹಾರಾಡಿದ್ದ ಗಾಳಿಪಟವನ್ನು ಕಾಣುವಾಗ ಬೀಸಿದ್ದ ಚಪ್ಪಾಳೆ, ಖುಷಿಯಲ್ಲವು ಎಂಟು ಸಾಲಿನ ಪುಟ್ಟ ಕವಿತೆಯಾಗಿತ್ತು.
ಹಾಸ್ಟೆಲ್ನ ಏಕತಾನತೆಯ ಬದುಕಿನಲ್ಲಿ ಮನೆಯವರ ಫೋನ್ಗಾಗಿ ಕಾಯುವುದು ಕೂಡ ಸೇರಿಹೋಗಿತ್ತು. ಮನೆಯಿಂದ ಮತ್ತೆ ಹಾಸ್ಟೆಲ್ ಸೇರಿದ ದಿನ ವಿಪರೀತ ವೈರಾಗ್ಯ ತಾಳಿದ ಕವಿತೆ, ರುಚಿಗಟ್ಟಾದ ಅಡುಗೆಯು ಕವಿತೆ, ಬೆಳಗಿನ ಸೂರ್ಯೋದಯ ಮತ್ತು ರಾತ್ರಿಯ ಚಂದ್ರನ ಕುರಿತು ಹೀಗೆ ಹಲವು ಕವಿತೆಗಳನ್ನು ಸುಮ್ಮನೆ ಬರೆಯುತ್ತಿದ್ದೆನಷ್ಟೆ. ಅಡುಗೆ ಕವಿತೆ ಎಷ್ಟು ಯಶಸ್ವಿಯಾಯಿತೆಂದರೆ, ಕೇಳಿದ ತಕ್ಷಣವೆ ಮೆಸ್ ಆಂಟಿಯರೆಲ್ಲ ಮನೆಗೆ ಫೋನ್ ಮಾಡಿಕೊಡುತ್ತಿದ್ದರು. ಕವಿತೆಯ ಪ್ರೋಂಜನವೆಂದು ಈಗ ನಕ್ಕು ಸುಮ್ಮನಾಗುವುದು.
(ಲೇಖಕಿ ಮಾನಸಗಂಗೋತ್ರಿಯಲ್ಲಿ ಇದೀಗ ತಾನೇ ಕನ್ನಡ ಎಂ.ಎ. ವ್ಯಾಸಂಗ ಮುಗಿಸಿದ್ದಾರೆ)
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…