ಆಂದೋಲನ ಪುರವಣಿ

ಬರಹ: ಬದುಕು : ನನ್ನ ಕವಿತೆಗಂಟಿದ ಕಥೆಗಳು

ಕೀರ್ತಿ ಎಸ್. ಬೈಂದೂರು keerthisba2018@gmail.com

ಬೆಳಗಿನ ಖಾಲಿತನ ಸರಿಸಿಟ್ಟ ಮನೆಯಂಗಳ ಬೈಗಿನಲ್ಲಿ ಗಾಳಿಪಟ ತಾಂರಿಗಾಗಿ ಮಕ್ಕಳ ದಂಡಿನ ಗೌಜಿನಲ್ಲಿರುತ್ತಿತ್ತು. ಪತ್ರಿಕೆ ಹರಿದು, ಅನ್ನ ನುರಿದು ಅಂಟಾಗಿಸಿ, ಹಿಡಿಕಡ್ಡಿಗಳನ್ನು ಅಲ್ಲಲ್ಲಿ ಒತ್ತಿಟ್ಟು, ಸ್ಕೆಚ್ ಪೆನ್‌ನಲ್ಲಿ ಎರಡು ಕಣ್ಣರಳಿಸಿ, ಉದ್ದಕ್ಕೆ ಬಾಲ ಜೋತು ಬಿಟ್ಟ ಗಾಳಿಪಟ ಹಕ್ಕಿಗಳಲ್ಲೇ ವಿಶೇಷ ಅಂತೆನಿಸುತ್ತಿತ್ತು. ಮಾರನೇ ದಿನ ಆಗಸವನ್ನೇ ಕೊಂಡುಕೊಂಡಷ್ಟು ಗತ್ತಿನಿಂದ ಹಾರುವುದೇನು! ಅದನ್ನು ಕಂಡದ್ದೇ ನಾನು ಮತ್ತು ನನ್ನ ಅಕ್ಕ ಸೇರಿ ಹುಮ್ಮಸ್ಸಿನಲ್ಲಿಯೇ ಗಾಳಿಪಟ ತಯಾರು ಮಾಡಿಬಿಟ್ಟೆವು. ಹಾರುವುದು ಹೋಗಲಿ, ಈ ಗಾಳಿಪಟ ಏಳುವುದೂ ಇಲ್ಲ. ಮತ್ತೆ ತಿಳಿದದ್ದು, ಗಾಳಿಪಟ ಹಾರುವುದಕ್ಕೆ ಹಗುರಾಗುವ ಅರ್ಹತೆಯಿರಬೇಕು ಎಂದು. ಮುಂದಿನ ಪ್ರಯತ್ನ ನಮ್ಮದು; ಸಹಕಾರ ಎದುರು ಮನೆಯವರದ್ದು. ಆದರೂ ನಾವೇ ಕೂತು ಮಾಡಿಸಿಕೊಂಡ ಕಾರಣಕ್ಕೆ ನಮ್ಮ ಹೆಸರಿಟ್ಟು ದಾರ ಕಟ್ಟಿ ಹಾರಿಸಿದ್ದೆವು. ಹಗುರಾಗಿ ಮೇಲಕ್ಕೆ ಥೇಟ್ ಹಕ್ಕಿಯಾಗಿ ಹಾರಾಡಿದ್ದ ಗಾಳಿಪಟವನ್ನು ಕಾಣುವಾಗ ಬೀಸಿದ್ದ ಚಪ್ಪಾಳೆ, ಖುಷಿಯಲ್ಲವು ಎಂಟು ಸಾಲಿನ ಪುಟ್ಟ ಕವಿತೆಯಾಗಿತ್ತು.

ಹಾಸ್ಟೆಲ್‌ನ ಏಕತಾನತೆಯ ಬದುಕಿನಲ್ಲಿ ಮನೆಯವರ ಫೋನ್‌ಗಾಗಿ ಕಾಯುವುದು ಕೂಡ ಸೇರಿಹೋಗಿತ್ತು. ಮನೆಯಿಂದ ಮತ್ತೆ ಹಾಸ್ಟೆಲ್ ಸೇರಿದ ದಿನ ವಿಪರೀತ ವೈರಾಗ್ಯ ತಾಳಿದ ಕವಿತೆ, ರುಚಿಗಟ್ಟಾದ ಅಡುಗೆಯು ಕವಿತೆ, ಬೆಳಗಿನ ಸೂರ್ಯೋದಯ ಮತ್ತು ರಾತ್ರಿಯ ಚಂದ್ರನ ಕುರಿತು ಹೀಗೆ ಹಲವು ಕವಿತೆಗಳನ್ನು ಸುಮ್ಮನೆ ಬರೆಯುತ್ತಿದ್ದೆನಷ್ಟೆ. ಅಡುಗೆ ಕವಿತೆ ಎಷ್ಟು ಯಶಸ್ವಿಯಾಯಿತೆಂದರೆ, ಕೇಳಿದ ತಕ್ಷಣವೆ ಮೆಸ್ ಆಂಟಿಯರೆಲ್ಲ ಮನೆಗೆ ಫೋನ್ ಮಾಡಿಕೊಡುತ್ತಿದ್ದರು. ಕವಿತೆಯ ಪ್ರೋಂಜನವೆಂದು ಈಗ ನಕ್ಕು ಸುಮ್ಮನಾಗುವುದು.
(ಲೇಖಕಿ ಮಾನಸಗಂಗೋತ್ರಿಯಲ್ಲಿ ಇದೀಗ ತಾನೇ ಕನ್ನಡ ಎಂ.ಎ. ವ್ಯಾಸಂಗ ಮುಗಿಸಿದ್ದಾರೆ)

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

17 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

20 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

20 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

20 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

21 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

21 hours ago