ಆಂದೋಲನ ಪುರವಣಿ

ಯುವ ಡಾಟ್‌ ಕಾಮ್‌: ಹೊಸ ಕೋರ್ಸ್ ಆರಂಭಿಸಿದ ಮೈಸೂರು ವಿವಿ

ಪಿಯುಸಿ ನಂತರ ಬಿಎಸ್‌ಡಬ್ಲ್ಯು ಮತ್ತೊಂದು ಹೊಸ ಆಯ್ಕೆ

ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮುಗಿಯುತ್ತಿದ್ದಂತೆ ಪ್ರತಿ ಹಂತಗಳಲ್ಲಿಯೂ ಮುಂದೇನು? ಎನ್ನುವ ಪ್ರಶ್ನೆ ಕಾಡುತ್ತದೆ. ಇದರಲ್ಲಿ ಪೋಷಕರದ್ದೂ ಹೆಚ್ಚಿನ ಪಾಲಿರುತ್ತದೆ. ಈಗ ಇರುವ ಆಯ್ಕೆಗಳು, ಹೊಸ ಬಗೆಯ ಕೋರ್ಸ್‌ಗಳಿಂದ ಗೊಂದಲ ಹೆಚ್ಚಾದರೂ ಅದಕ್ಕೆ ತಕ್ಕಂತೆ ಅವಕಾಶ ವೈವಿಧ್ಯ ಇದೆ ಎನ್ನುವುದು ಸಂತೋಷ.

ಇದೀಗ ಮೈಸೂರು ವಿವಿ ಬಿಎಸ್‌ಡಬ್ಲ್ಯು (ಬ್ಯಾಚುಲರ್ ಆಫ್ ಸೋಷಿಯಲ್ ವರ್ಕ್) ಎಂಬ ಹೊಸ ಕೋರ್ಸ್‌ಅನ್ನು ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಆರಂಭಿಸಿದ್ದು, ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶದ ಬಾಗಿಲು ತೆರೆದಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮೈಸೂರಿನ ಸೆಂಟ್ ಫಿಲೋಮಿನಾ ಹಾಗೂ ಕೆ.ಆರ್.ಪೇಟೆ ಸರ್ಕಾರಿ ಕಾಲೇಜುಗಳಲ್ಲಿ ಈ ಕೋರ್ಸ್ ಆರಂಭವಾಗಿದೆ. ಇದೀಗ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ಕೋರ್ಸ್ ಆರಂಭವಾಗಿದ್ದು, 16 ಮಂದಿ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಅದರಲ್ಲಿ ವಿದ್ಯಾರ್ಥಿನಿಯರ ಸಂಖ್ಯೆಯೇ ಹೆಚ್ಚು ಎನ್ನುತ್ತಾರೆ ಸಮಾಜ ಕಾರ್ಯ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಡಾ. ಎಚ್.ಪಿ.ಜ್ಯೋತಿ ಅವರು.

ಕೋರ್ಸ್ ವಿಶೇಷತೆಗಳು

* ಬಿಎಸ್‌ಡಬ್ಲ್ಯು ಸಮಗ್ರ ಕೌಶಲಾಧಾರಿತ ಕೋರ್ಸ್

* ಪಿಯುಸಿ ನಂತರ ಕೋರ್ಸ್‌ಗೆ ಪ್ರವೇಶ ಪಡೆಯಲು ಅವಕಾಶ

* 4 ವರ್ಷಗಳ ಕೋರ್ಸ್, ಸಮಾಜ ಕಾರ್ಯ ಬಗ್ಗೆ ಅಧ್ಯಯನ

* ಒಂದು ವರ್ಷ ಕೋರ್ಸ್ ಮುಗಿಸಿದರೆ ಸರ್ಟಿಫಿಕೇಟ್

* ಎರಡು ವರ್ಷ ಪೂರ್ಣಗೊಳಿಸಿದರೆ ಡಿಪ್ಲೊಮಾ ಇನ್ ಸೋಷಿಯಲ್ ಸ್ಟಡೀಸ್

* ಮೂರು ವರ್ಷ ಪೂರ್ಣಗೊಳಿಸಿದರೆ ಪದವಿ ಸರ್ಟಿಫಿಕೇಟ್

* 4 ವರ್ಷದ ಕೋರ್ಸ್ ಪೂರ್ಣಗೊಳಿಸಿದರೆ ಬಿಎಸ್‌ಡಬ್ಲ್ಯು ಆನರ್ಸ್

* ಕೋರ್ಸ್ ನಂತರ ಎನ್‌ಇಟಿ, ಕೆ-ಸೆಟ್ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವಕಾಶ

* ಕೋರ್ಸ್ ಮುಗಿಸಿ ಪಿಎಚ್.ಡಿ ಮಾಡಲು ಅವಕಾಶ

ಉದ್ಯೋಗಾವಕಾಶಗಳು

* ಬಿಎಸ್‌ಡಬ್ಲ್ಯು ಮಾಡಿದರೆ ಎನ್‌ಜಿಒ ಗಳಲ್ಲಿ ಕೆಲಸ

* ಸಮುದಾಯ ಸಂಘಟಕ, ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್‌ನಲ್ಲೂ ಅವಕಾಶ

* ಸ್ವಯಂ ಎನ್‌ಜಿಒ, ಕೈಗಾರಿಕೆಗಳಲ್ಲಿ ವೆಲ್ಫೇರ್ ಆಫೀಸರ್ ಆಗಬಹುದು.

* ಆಸ್ಪತ್ರೆಗಳಲ್ಲಿ, ಕಾರ್ಪೋರೇಟ್ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ

* ಕಾರ್ಮಿಕ, ಕೈಗಾರಿಕಾ ಇಲಾಖೆಗಳಲ್ಲಿ ವಿವಿಧ ಹುದ್ದೆಗಳು

* ಪದವಿ ಮುಗಿಸಿ ಪಡೆಯಬಹುದಾದ ಎಲ್ಲ ಹುದ್ದೆಗಳಲ್ಲೂ ಅವಕಾಶ

ಅರ್ಜಿ ಸಲ್ಲಿಕೆಗೆ ಇನ್ನೂ ಇದೆ ಅವಕಾಶ

ಪಿಯುಸಿ ಉತ್ತೀರ್ಣರಾಗಿರುವವರು ಸಮಗ್ರ ವಿಶ್ವ ವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆ. 15 ಕಡೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂ. ಸಂ. 9480363407, 85488004509.

ಶುಲ್ಕ: ಒಟ್ಟು 50 ಮಂದಿ ವಿದ್ಯಾರ್ಥಿಗಳಿಗೆ ಪ್ರವೇಶ ಅವಕಾಶವಿದ್ದು, 35ಮಂದಿ ಮೆರಿಟ್ ಕೋಟಾದಲ್ಲಿ, 15ಮಂದಿ ಹಣಕಾಸು ಕೋಟಾದಲ್ಲಿ ಪ್ರವೇಶ ಪಡೆಯಬಹುದು. ಮೆರಿಟ್ ಕೋಟಾದಡಿ 15 ಸಾವಿರ ರೂ, ಹಣಕಾಸು ಕೋಟಾದಡಿ 30ಸಾವಿರ ರೂ. ಪ್ರವೇಶ ಶುಲ್ಕ ಇರಲಿದೆ.

ಬಿಎಸ್‌ಡಬ್ಲ್ಯು ಕೋರ್ಸ್ ಮಾಡಿದ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶಗಳಿವೆ. ಇದು ವೃತ್ತಿ ಆಧಾರಿತ ಕೋರ್ಸ್ ಆಗಿರುವುದರಿಂದ ಹೆಚ್ಚಿನ ಬೇಡಿಕೆಯೂ ಇದೆ. ಕೊಡಗಿನ ಬುಡಕಟ್ಟು ಸಮುದಾಯದ ವಿದ್ಯಾರ್ಥಿಗಳೂ ಸೇರಿ ಈಗಾಗಲೇ ಒಟ್ಟು ೨೦ ಮಂದಿ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದಾರೆ. – ಡಾ. ಎಚ್.ಪಿ.ಜ್ಯೋತಿ, ಮುಖ್ಯಸ್ಥರು, ಸಮಾಜ ಕಾರ್ಯ ಅಧ್ಯಯನ ಸಂಸ್ಥೆ, ಮಾನಸ ಗಂಗೋತ್ರಿ

andolana

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

10 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

11 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago