ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು: ನಮಗೆಲ್ಲಾ ಆದರ್ಶ ನಮ್ಮ ಮಲ್ಲೇಶ್ ಮೇಷ್ಟ್ರು

ರಾಜೇಂದ್ರ ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ ತಾ, ಚಾಮರಾಜನಗರ

ಅದು ನಮ್ಮ ಪ್ರಾಥಮಿಕ ಶಾಲಾ ದಿನಗಳು ನಾನು 6ನೇ ತರಗತಿ ಓದುತ್ತಿದ್ದ ಸಂದರ್ಭ. ಆಗಷ್ಟೇ ತಮ್ಮ ಟಿಸಿಎಚ್ ಮುಗಿಸಿ ಶಿಕ್ಷಕರ ಹುದ್ದೆಯನ್ನು ಪಡೆದು ನಮ್ಮೂರ ಶಾಲೆಗೆ ಮೊದಲ ಬಾರಿಗೆ ಶಿಕ್ಷಕರಾಗಿ ಬಂದವರೇ ಮಲ್ಲೇಶ್ ಎಂಬ ನಮ್ಮೆಲ್ಲರ ನೆಚ್ಚಿನ ಮೇಷ್ಟ್ರು.

ಮಲ್ಲೇಶ್ ಸರ್ ಆಗಷ್ಟೇ ತರಬೇತಿ ಮುಗಿಸಿ ಬಂದು ಉತ್ಸಾಹದಲ್ಲಿದ್ದರು. ಅವರ ಬೋಧನಾ ಕ್ರಮ, ಶಿಸ್ತು ಬದ್ಧ ಕೆಲಸಗಳು, ಸಮಯ ಪ್ರಜ್ಞೆ, ಆದರ್ಶನೀಯವಾದ ಬದುಕು, ಅವರ ನಡೆ ನುಡಿ ನಮಗೆಲ್ಲ ಅತ್ಯಂತ ಆಕರ್ಷನೀಯವಾಗಿದ್ದವು.

ನಮಗೆ ಸಮಾಜ ವಿಜ್ಞಾನ ವಿಷಯ ಬೋಧಿಸುತ್ತಿದ್ದ ಅವರು ಅಂದಿನ ಕಾಲದಲ್ಲೇ ನಮ್ಮಲ್ಲಿ ಬಸವಣ್ಣ ಅವರ ಸಮ ಸಮಾಜದ ಕನಸನ್ನು ಬಿತ್ತಿದ್ದಂತವರು. ಜೊತೆಗೆ ಸಮಾಜದಲ್ಲಿ ಆದರ್ಶನೀಯವಾಗಿ ಹೇಗೆ ಬದುಕಬೇಕೆಂಬುದನ್ನು ತಿಳಿ ಹೇಳಿದಂತವರು.

ನಮ್ಮೂರಿನ ಸರ್ಕಾರಿ ಶಾಲೆಗೆ ಕೀರ್ತಿತಂದ ಪ್ರಮುಖ ಶಿಕ್ಷಕರಲ್ಲಿ ಇವರೂ ಒಬ್ಬರು. ವಿದ್ಯಾರ್ಥಿಗಳ ಮನದಾಳವನ್ನು ಅರಿತು ಬೋಧಿಸುತ್ತಿದ್ದ ಅಪರೂಪದ ಶಿಕ್ಷರಾಗಿದ್ದ ನಮ್ಮೆಲ್ಲರ ಮೆಚ್ಚಿನ ಈ ಮೇಷ್ಟ್ರು ನಾಟಕ ಪ್ರಿಯರಾಗಿದ್ದರು. ಅದು ನಮಗೆಲ್ಲ ಅಂದಿಗೆ ಸೋಜಿಗ…! ನಾಟಕವೆಂದರೆ ಅವರಿಗೆ ಅಷ್ಟೊಂದು ಅಕ್ಕರೆ. ಅದಕ್ಕೆ ನಿರ್ದಶನವೆಂಬಂತೆ ನಮ್ಮ ಮೇಷ್ಟ್ರು ಅವರ ಊರಿನಲ್ಲಿ ನಡೆಯುತ್ತಿದ್ದ ಸಾಮಾಜಿಕ ನಾಟಕಗಳಲ್ಲಿ ಭಾಗವಹಿಸಿ ಅದ್ಭುತವಾಗಿ ನಟಿಸುತ್ತಾ ಜನರ ಮನ ಗೆದ್ದಿದ್ದರು. ಅದ್ಭುತವಾಗಿ ಅಭಿನಯಿಸುತ್ತಿದ್ದ ಅವರ ಪ್ರತಿಭೆಯನ್ನು ಕಂಡು ನಾವೇ ರೋಮಾಂಚಿತರಾಗಿದ್ದೆವು.

ಇಂತಹ ಸಕಲಕಲಾ ವಲ್ಲಭರಂತಹ ಮಲ್ಲೇಶ್ ಮೇಷ್ಟ್ರನ್ನು ಪಡೆದ ನಾವೇ ಧನ್ಯರು. ನಾವು ಇಂದು ಏನಾದರೂ ಅಷ್ಟೋ ಇಷ್ಟೋ ಆದರ್ಶನೀಯವಾಗಿ ಬದುಕುತ್ತಿದ್ದೇವೆಂದರೆ ಇಂತಹ ಆದರ್ಶನೀಯವಾದ ಗುರುಗಳ ಒಡನಾಟ ಹಾಗೂ ಮಾರ್ಗದರ್ಶನವೇ ಕಾರಣ. ಥ್ಯಾಂಕ್ಯೂ ಡಿಯರ್ ಮಲ್ಲೇಶ್ ಸರ್.

 

andolana

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

2 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

2 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

2 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

3 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

3 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

3 hours ago