ಮಲ್ಲೇಶ್ ಮೇಷ್ಟ್ರು
ಅದು ನಮ್ಮ ಪ್ರಾಥಮಿಕ ಶಾಲಾ ದಿನಗಳು ನಾನು 6ನೇ ತರಗತಿ ಓದುತ್ತಿದ್ದ ಸಂದರ್ಭ. ಆಗಷ್ಟೇ ತಮ್ಮ ಟಿಸಿಎಚ್ ಮುಗಿಸಿ ಶಿಕ್ಷಕರ ಹುದ್ದೆಯನ್ನು ಪಡೆದು ನಮ್ಮೂರ ಶಾಲೆಗೆ ಮೊದಲ ಬಾರಿಗೆ ಶಿಕ್ಷಕರಾಗಿ ಬಂದವರೇ ಮಲ್ಲೇಶ್ ಎಂಬ ನಮ್ಮೆಲ್ಲರ ನೆಚ್ಚಿನ ಮೇಷ್ಟ್ರು.
ಮಲ್ಲೇಶ್ ಸರ್ ಆಗಷ್ಟೇ ತರಬೇತಿ ಮುಗಿಸಿ ಬಂದು ಉತ್ಸಾಹದಲ್ಲಿದ್ದರು. ಅವರ ಬೋಧನಾ ಕ್ರಮ, ಶಿಸ್ತು ಬದ್ಧ ಕೆಲಸಗಳು, ಸಮಯ ಪ್ರಜ್ಞೆ, ಆದರ್ಶನೀಯವಾದ ಬದುಕು, ಅವರ ನಡೆ ನುಡಿ ನಮಗೆಲ್ಲ ಅತ್ಯಂತ ಆಕರ್ಷನೀಯವಾಗಿದ್ದವು.
ನಮಗೆ ಸಮಾಜ ವಿಜ್ಞಾನ ವಿಷಯ ಬೋಧಿಸುತ್ತಿದ್ದ ಅವರು ಅಂದಿನ ಕಾಲದಲ್ಲೇ ನಮ್ಮಲ್ಲಿ ಬಸವಣ್ಣ ಅವರ ಸಮ ಸಮಾಜದ ಕನಸನ್ನು ಬಿತ್ತಿದ್ದಂತವರು. ಜೊತೆಗೆ ಸಮಾಜದಲ್ಲಿ ಆದರ್ಶನೀಯವಾಗಿ ಹೇಗೆ ಬದುಕಬೇಕೆಂಬುದನ್ನು ತಿಳಿ ಹೇಳಿದಂತವರು.
ನಮ್ಮೂರಿನ ಸರ್ಕಾರಿ ಶಾಲೆಗೆ ಕೀರ್ತಿತಂದ ಪ್ರಮುಖ ಶಿಕ್ಷಕರಲ್ಲಿ ಇವರೂ ಒಬ್ಬರು. ವಿದ್ಯಾರ್ಥಿಗಳ ಮನದಾಳವನ್ನು ಅರಿತು ಬೋಧಿಸುತ್ತಿದ್ದ ಅಪರೂಪದ ಶಿಕ್ಷರಾಗಿದ್ದ ನಮ್ಮೆಲ್ಲರ ಮೆಚ್ಚಿನ ಈ ಮೇಷ್ಟ್ರು ನಾಟಕ ಪ್ರಿಯರಾಗಿದ್ದರು. ಅದು ನಮಗೆಲ್ಲ ಅಂದಿಗೆ ಸೋಜಿಗ…! ನಾಟಕವೆಂದರೆ ಅವರಿಗೆ ಅಷ್ಟೊಂದು ಅಕ್ಕರೆ. ಅದಕ್ಕೆ ನಿರ್ದಶನವೆಂಬಂತೆ ನಮ್ಮ ಮೇಷ್ಟ್ರು ಅವರ ಊರಿನಲ್ಲಿ ನಡೆಯುತ್ತಿದ್ದ ಸಾಮಾಜಿಕ ನಾಟಕಗಳಲ್ಲಿ ಭಾಗವಹಿಸಿ ಅದ್ಭುತವಾಗಿ ನಟಿಸುತ್ತಾ ಜನರ ಮನ ಗೆದ್ದಿದ್ದರು. ಅದ್ಭುತವಾಗಿ ಅಭಿನಯಿಸುತ್ತಿದ್ದ ಅವರ ಪ್ರತಿಭೆಯನ್ನು ಕಂಡು ನಾವೇ ರೋಮಾಂಚಿತರಾಗಿದ್ದೆವು.
ಇಂತಹ ಸಕಲಕಲಾ ವಲ್ಲಭರಂತಹ ಮಲ್ಲೇಶ್ ಮೇಷ್ಟ್ರನ್ನು ಪಡೆದ ನಾವೇ ಧನ್ಯರು. ನಾವು ಇಂದು ಏನಾದರೂ ಅಷ್ಟೋ ಇಷ್ಟೋ ಆದರ್ಶನೀಯವಾಗಿ ಬದುಕುತ್ತಿದ್ದೇವೆಂದರೆ ಇಂತಹ ಆದರ್ಶನೀಯವಾದ ಗುರುಗಳ ಒಡನಾಟ ಹಾಗೂ ಮಾರ್ಗದರ್ಶನವೇ ಕಾರಣ. ಥ್ಯಾಂಕ್ಯೂ ಡಿಯರ್ ಮಲ್ಲೇಶ್ ಸರ್.
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…
ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…