ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು: ನಮಗೆಲ್ಲಾ ಆದರ್ಶ ನಮ್ಮ ಮಲ್ಲೇಶ್ ಮೇಷ್ಟ್ರು

ರಾಜೇಂದ್ರ ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ ತಾ, ಚಾಮರಾಜನಗರ

ಅದು ನಮ್ಮ ಪ್ರಾಥಮಿಕ ಶಾಲಾ ದಿನಗಳು ನಾನು 6ನೇ ತರಗತಿ ಓದುತ್ತಿದ್ದ ಸಂದರ್ಭ. ಆಗಷ್ಟೇ ತಮ್ಮ ಟಿಸಿಎಚ್ ಮುಗಿಸಿ ಶಿಕ್ಷಕರ ಹುದ್ದೆಯನ್ನು ಪಡೆದು ನಮ್ಮೂರ ಶಾಲೆಗೆ ಮೊದಲ ಬಾರಿಗೆ ಶಿಕ್ಷಕರಾಗಿ ಬಂದವರೇ ಮಲ್ಲೇಶ್ ಎಂಬ ನಮ್ಮೆಲ್ಲರ ನೆಚ್ಚಿನ ಮೇಷ್ಟ್ರು.

ಮಲ್ಲೇಶ್ ಸರ್ ಆಗಷ್ಟೇ ತರಬೇತಿ ಮುಗಿಸಿ ಬಂದು ಉತ್ಸಾಹದಲ್ಲಿದ್ದರು. ಅವರ ಬೋಧನಾ ಕ್ರಮ, ಶಿಸ್ತು ಬದ್ಧ ಕೆಲಸಗಳು, ಸಮಯ ಪ್ರಜ್ಞೆ, ಆದರ್ಶನೀಯವಾದ ಬದುಕು, ಅವರ ನಡೆ ನುಡಿ ನಮಗೆಲ್ಲ ಅತ್ಯಂತ ಆಕರ್ಷನೀಯವಾಗಿದ್ದವು.

ನಮಗೆ ಸಮಾಜ ವಿಜ್ಞಾನ ವಿಷಯ ಬೋಧಿಸುತ್ತಿದ್ದ ಅವರು ಅಂದಿನ ಕಾಲದಲ್ಲೇ ನಮ್ಮಲ್ಲಿ ಬಸವಣ್ಣ ಅವರ ಸಮ ಸಮಾಜದ ಕನಸನ್ನು ಬಿತ್ತಿದ್ದಂತವರು. ಜೊತೆಗೆ ಸಮಾಜದಲ್ಲಿ ಆದರ್ಶನೀಯವಾಗಿ ಹೇಗೆ ಬದುಕಬೇಕೆಂಬುದನ್ನು ತಿಳಿ ಹೇಳಿದಂತವರು.

ನಮ್ಮೂರಿನ ಸರ್ಕಾರಿ ಶಾಲೆಗೆ ಕೀರ್ತಿತಂದ ಪ್ರಮುಖ ಶಿಕ್ಷಕರಲ್ಲಿ ಇವರೂ ಒಬ್ಬರು. ವಿದ್ಯಾರ್ಥಿಗಳ ಮನದಾಳವನ್ನು ಅರಿತು ಬೋಧಿಸುತ್ತಿದ್ದ ಅಪರೂಪದ ಶಿಕ್ಷರಾಗಿದ್ದ ನಮ್ಮೆಲ್ಲರ ಮೆಚ್ಚಿನ ಈ ಮೇಷ್ಟ್ರು ನಾಟಕ ಪ್ರಿಯರಾಗಿದ್ದರು. ಅದು ನಮಗೆಲ್ಲ ಅಂದಿಗೆ ಸೋಜಿಗ…! ನಾಟಕವೆಂದರೆ ಅವರಿಗೆ ಅಷ್ಟೊಂದು ಅಕ್ಕರೆ. ಅದಕ್ಕೆ ನಿರ್ದಶನವೆಂಬಂತೆ ನಮ್ಮ ಮೇಷ್ಟ್ರು ಅವರ ಊರಿನಲ್ಲಿ ನಡೆಯುತ್ತಿದ್ದ ಸಾಮಾಜಿಕ ನಾಟಕಗಳಲ್ಲಿ ಭಾಗವಹಿಸಿ ಅದ್ಭುತವಾಗಿ ನಟಿಸುತ್ತಾ ಜನರ ಮನ ಗೆದ್ದಿದ್ದರು. ಅದ್ಭುತವಾಗಿ ಅಭಿನಯಿಸುತ್ತಿದ್ದ ಅವರ ಪ್ರತಿಭೆಯನ್ನು ಕಂಡು ನಾವೇ ರೋಮಾಂಚಿತರಾಗಿದ್ದೆವು.

ಇಂತಹ ಸಕಲಕಲಾ ವಲ್ಲಭರಂತಹ ಮಲ್ಲೇಶ್ ಮೇಷ್ಟ್ರನ್ನು ಪಡೆದ ನಾವೇ ಧನ್ಯರು. ನಾವು ಇಂದು ಏನಾದರೂ ಅಷ್ಟೋ ಇಷ್ಟೋ ಆದರ್ಶನೀಯವಾಗಿ ಬದುಕುತ್ತಿದ್ದೇವೆಂದರೆ ಇಂತಹ ಆದರ್ಶನೀಯವಾದ ಗುರುಗಳ ಒಡನಾಟ ಹಾಗೂ ಮಾರ್ಗದರ್ಶನವೇ ಕಾರಣ. ಥ್ಯಾಂಕ್ಯೂ ಡಿಯರ್ ಮಲ್ಲೇಶ್ ಸರ್.

 

andolana

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

10 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago