ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು: ನಮಗೆಲ್ಲಾ ಆದರ್ಶ ನಮ್ಮ ಮಲ್ಲೇಶ್ ಮೇಷ್ಟ್ರು

ರಾಜೇಂದ್ರ ಅಪುರಾ, ಅಗತಗೌಡನಹಳ್ಳಿ, ಗುಂಡ್ಲುಪೇಟೆ ತಾ, ಚಾಮರಾಜನಗರ

ಅದು ನಮ್ಮ ಪ್ರಾಥಮಿಕ ಶಾಲಾ ದಿನಗಳು ನಾನು 6ನೇ ತರಗತಿ ಓದುತ್ತಿದ್ದ ಸಂದರ್ಭ. ಆಗಷ್ಟೇ ತಮ್ಮ ಟಿಸಿಎಚ್ ಮುಗಿಸಿ ಶಿಕ್ಷಕರ ಹುದ್ದೆಯನ್ನು ಪಡೆದು ನಮ್ಮೂರ ಶಾಲೆಗೆ ಮೊದಲ ಬಾರಿಗೆ ಶಿಕ್ಷಕರಾಗಿ ಬಂದವರೇ ಮಲ್ಲೇಶ್ ಎಂಬ ನಮ್ಮೆಲ್ಲರ ನೆಚ್ಚಿನ ಮೇಷ್ಟ್ರು.

ಮಲ್ಲೇಶ್ ಸರ್ ಆಗಷ್ಟೇ ತರಬೇತಿ ಮುಗಿಸಿ ಬಂದು ಉತ್ಸಾಹದಲ್ಲಿದ್ದರು. ಅವರ ಬೋಧನಾ ಕ್ರಮ, ಶಿಸ್ತು ಬದ್ಧ ಕೆಲಸಗಳು, ಸಮಯ ಪ್ರಜ್ಞೆ, ಆದರ್ಶನೀಯವಾದ ಬದುಕು, ಅವರ ನಡೆ ನುಡಿ ನಮಗೆಲ್ಲ ಅತ್ಯಂತ ಆಕರ್ಷನೀಯವಾಗಿದ್ದವು.

ನಮಗೆ ಸಮಾಜ ವಿಜ್ಞಾನ ವಿಷಯ ಬೋಧಿಸುತ್ತಿದ್ದ ಅವರು ಅಂದಿನ ಕಾಲದಲ್ಲೇ ನಮ್ಮಲ್ಲಿ ಬಸವಣ್ಣ ಅವರ ಸಮ ಸಮಾಜದ ಕನಸನ್ನು ಬಿತ್ತಿದ್ದಂತವರು. ಜೊತೆಗೆ ಸಮಾಜದಲ್ಲಿ ಆದರ್ಶನೀಯವಾಗಿ ಹೇಗೆ ಬದುಕಬೇಕೆಂಬುದನ್ನು ತಿಳಿ ಹೇಳಿದಂತವರು.

ನಮ್ಮೂರಿನ ಸರ್ಕಾರಿ ಶಾಲೆಗೆ ಕೀರ್ತಿತಂದ ಪ್ರಮುಖ ಶಿಕ್ಷಕರಲ್ಲಿ ಇವರೂ ಒಬ್ಬರು. ವಿದ್ಯಾರ್ಥಿಗಳ ಮನದಾಳವನ್ನು ಅರಿತು ಬೋಧಿಸುತ್ತಿದ್ದ ಅಪರೂಪದ ಶಿಕ್ಷರಾಗಿದ್ದ ನಮ್ಮೆಲ್ಲರ ಮೆಚ್ಚಿನ ಈ ಮೇಷ್ಟ್ರು ನಾಟಕ ಪ್ರಿಯರಾಗಿದ್ದರು. ಅದು ನಮಗೆಲ್ಲ ಅಂದಿಗೆ ಸೋಜಿಗ…! ನಾಟಕವೆಂದರೆ ಅವರಿಗೆ ಅಷ್ಟೊಂದು ಅಕ್ಕರೆ. ಅದಕ್ಕೆ ನಿರ್ದಶನವೆಂಬಂತೆ ನಮ್ಮ ಮೇಷ್ಟ್ರು ಅವರ ಊರಿನಲ್ಲಿ ನಡೆಯುತ್ತಿದ್ದ ಸಾಮಾಜಿಕ ನಾಟಕಗಳಲ್ಲಿ ಭಾಗವಹಿಸಿ ಅದ್ಭುತವಾಗಿ ನಟಿಸುತ್ತಾ ಜನರ ಮನ ಗೆದ್ದಿದ್ದರು. ಅದ್ಭುತವಾಗಿ ಅಭಿನಯಿಸುತ್ತಿದ್ದ ಅವರ ಪ್ರತಿಭೆಯನ್ನು ಕಂಡು ನಾವೇ ರೋಮಾಂಚಿತರಾಗಿದ್ದೆವು.

ಇಂತಹ ಸಕಲಕಲಾ ವಲ್ಲಭರಂತಹ ಮಲ್ಲೇಶ್ ಮೇಷ್ಟ್ರನ್ನು ಪಡೆದ ನಾವೇ ಧನ್ಯರು. ನಾವು ಇಂದು ಏನಾದರೂ ಅಷ್ಟೋ ಇಷ್ಟೋ ಆದರ್ಶನೀಯವಾಗಿ ಬದುಕುತ್ತಿದ್ದೇವೆಂದರೆ ಇಂತಹ ಆದರ್ಶನೀಯವಾದ ಗುರುಗಳ ಒಡನಾಟ ಹಾಗೂ ಮಾರ್ಗದರ್ಶನವೇ ಕಾರಣ. ಥ್ಯಾಂಕ್ಯೂ ಡಿಯರ್ ಮಲ್ಲೇಶ್ ಸರ್.

 

andolana

Recent Posts

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

7 mins ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

3 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

4 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

5 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

6 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

6 hours ago