ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು : ನಾನು ಮೇಷ್ಟ್ರಾದರೂ ನನ್ನ ಮೇಷ್ಟ್ರಿಗೆ ವಿದ್ಯಾರ್ಥಿಯೇ

ದೇವರ ಸ್ವರೂಪ ನಮ್ಮ ಶಿವಪ್ಪ ಸರ್

ಎಲ್ಲ ವಿದ್ಯಾರ್ಥಿಗಳಿಗೂ ಎಲ್ಲ ಶಿಕ್ಷಕರೂ ಇಷ್ಟವಾಗುವುದಿಲ್ಲ. ಒಬ್ಬ ವಿದ್ಯಾರ್ಥಿ ಒಬ್ಬ ಶಿಕ್ಷಕನ್ನು ತನ್ನ ಅಚ್ಚುಮೆಚ್ಚಿನ ಶಿಕ್ಷಕರಾಗಿ ಸ್ವೀಕರಿಸುತ್ತಾನೆ ಎಂದರೆ ಅಲ್ಲೇನೋ ವಿಶೇಷ ಇದ್ದೇ ಇರುತ್ತದೆ.

ಶ್ರೀರಾಂಪುರ 2ನೇ ಹಂತದಲ್ಲಿ ಇರುವ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಓದಿದ ನನಗೆ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಶಿವಪ್ಪ ಸರ್ ಎಂದರೆ ಅಪಾರ ಪ್ರೀತಿ, ಗೌರವ. ನಾನು ಶಾಲೆಗೆ ಸೇರುವ ವೇಳೆಗಾಗಾಲೇ ಶಿವಪ್ಪ ಸರ್ ನಿವೃತ್ತರಾಗಿದ್ದರು. ಆದರೂ ಸ್ವಯಂ ಆಸಕ್ತಿಯಿಂದ ಬೋಧನೆ ಮುಂದುವರಿಸಿದ್ದರು. ಗಣಿತ ಪಾಠ ಮಾಡುತ್ತಿದ್ದ ಅವರು ಅದರ ಜೊತೆಗೆ ಜೀವನದ ಲೆಕ್ಕಾಚಾರಗಳನ್ನೂ ತಿಳಿಸುತ್ತಿದ್ದರು.

ನಾವೆಲ್ಲ ಬೆಳಿಗ್ಗೆ ಶಾಲೆಗೆ ಹೋದ ತಕ್ಷಣ ಬ್ಯಾಟ್ ಹಿಡಿದು ಮೈದಾನಕ್ಕಿಳಿಯುತ್ತಿದ್ದೆವು. ದೂರದಲ್ಲಿ ಎಕ್ಸ್ ಎಲ್ ಸೂಪರ್ ಸ್ಕೂಟರ್ ಸದ್ದಾದ ತಕ್ಷಣ ನಾವೆಲ್ಲ ಕ್ಲಾಸ್‌ಗೆ ಓಡುತ್ತಿದ್ದೆವು. ಆ ಸ್ಕೂಟರ್ ಸದ್ದಾದರೆ ನಮಗೆ ಶಿವಪ್ಪ ಸರ್ ಬಂದ್ರು ಎಂಬುದರ ಸಂದೇಶವಾಗಿತ್ತು.

ನಾನು ಎಂಟನೇ ತರಗತಿಯಲ್ಲಿದ್ದಾಗ ಸರಳರೇಖೆ ಎಂದರೇನು? ಎಂಬ ಪ್ರಶ್ನೆಯನ್ನು ಶಿವಪ್ಪ ಸರ್ ಕೇಳಿದ್ದರು. ಯಾರೊಬ್ಬರೂ ಉತ್ತರಿಸಿರಲಿಲ್ಲ. ಕಡೆಯ ಬೆಂಚಿನಲ್ಲಿ ಕೂತಿದ್ದ ನಾನು ಉತ್ತರ ನೀಡಿದ್ದೆ. ಆಗ ನನ್ನಲ್ಲಿ ಇರುವ ಶಕ್ತಿಯನ್ನು ಅಂದೇ ಗುರುತಿಸಿ ಕ್ಲಾಸ್ ಲೀಡರ್ ಮಾಡಿದ್ದರು. ಅದರಿಂದ ಉತ್ತೇಜಿತನಾದ ನಾನು ಸತತ ೩ ವರ್ಷಗಳ ತನಕ ತರಗತಿಯ ನಾಯಕನಾಗಿದ್ದೆ. ನನ್ನಲ್ಲಿ ಆತ್ಮ ವಿಶ್ವಾಸವನ್ನು ತುಂಬಿದ ಮೊದಲಿಗರು ನನ್ನ ಶಿವಪ್ಪ ಸರ್.

ಅವರ ಪ್ರೀತಿಯಿಂದಲೋ ಏನೋ ಇಂದಿಗೂ ಗುರುಗಳೊಂದಿಗೆ ಸಂಪರ್ಕದಲ್ಲಿ ಇದ್ದನೆ. ಆ. ೧೩ ಕ್ಕೆ ಅವರಿಗೆ ೮೨ ವರ್ಷಗಳು ತುಂಬಿವೆ. ಪ್ರತಿ ವರ್ಷವು ನಾನು ಅವರ ಹುಟ್ಟುಹಬ್ಬದ ದಿನ ಅವರ ಮನೆಗೆ ಹೋಗಿ ಭೇಟಿಯಾಗಿ ಬರುತ್ತೇನೆ. ಅವರೇ ನನಗೆ ತಿಂಡಿಗಳನ್ನು ಕೊಟ್ಟು ಕಳಿಸುತ್ತಾರೆ. ಅವರ ಪಾಲಿಗೆ ನಾವಿನ್ನೂ ಮಕ್ಕಳೇ ಆಗಿದ್ದೇವೆ.

ಅವರ ಆಶೀರ್ವಾದ, ಪ್ರೋತ್ಸಾಹದಿಂದ ಇಂದು ನಾನು ಶಿಕ್ಷಕನಾಗಿದ್ದೇನೆ. ಅವರು ಹಾಕಿಕೊಟ್ಟ, ತೋರಿದ ಹಾದಿಯಲ್ಲೇ ಸಾಗುವ ಬಯಕೆ ನನ್ನದು. – ರಾಜೇಂದ್ರ ಎಸ್., ಮಹದೇವಪುರ

andolana

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

5 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

6 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

7 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

7 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

8 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

9 hours ago