ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು: ಜೊತೆಗಿರದ ಜೀವ ಎಂದಿಗೂ ಜೀವಂತ

-ಶಿವಕುಮಾರ್ ಎಂ.ವಿ. ಗ್ರಾಮಲೆಕ್ಕಿಗ, ಮಾದಳ್ಳಿ 

ತಂದೆ, ತಾಯಿಗೆ ಸಮಾನವಾದ ಪ್ರೀತಿ, ಗೌರವ ಪಡೆಯುವ ಯಾರಾದರೂ ಇದ್ದರೆ ಅದು ಶಿಕ್ಷಕರು. ಅದಕ್ಕಾಗಿಯೇ ಅವರನ್ನು ಗುರು ದೇವೋಭವ ಎನ್ನುವುದು.

ನನ್ನ ಪಾಲಿಗೆ ಡಿ. ವಿಜಯಶ್ರೀ (ಡಿವಿಎಸ್) ದೇವರಂತಹ ಗುರು. ಕಾಣುವ ಪ್ರತಿಭೆಯನ್ನು ಯಾರು ಬೇಕಾದರೂ ಗುರುತಿಸಬಹುದು. ಆದರೆ ವಿದ್ಯಾರ್ಥಿಯ ಒಳಗಿರುವ ಸುಪ್ತ ಪ್ರತಿಭೆಯನ್ನು ಪತ್ತೆ ಮಾಡಿದ ಅದಕ್ಕೆ ನೀರೆರೆದು ಪೋಷಿಸುವ ಗುಣ ಇರುವ ಶಿಕ್ಷಕರು ವಿರಳ. ಆದರೆ ನನ್ನ ಪಾಲಿಗೆ ಡಿವಿಎಸ್ ಮೇಡಂ ಬಹು ದೊಡ್ಡ ವರ.

ನನ್ನೊಳಗೆ ಇದ್ದ ಪ್ರತಿಭೆಯನ್ನು ಪ್ರತಿ ಹಂತದಲ್ಲಿಯೂ ಗುರುತಿಸಿದರು. ನಾನು ಭಾಷಣ, ಚರ್ಚಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆಯಲ್ಲಿ ರಾಜ್ಯ ಮಟ್ಟಕ್ಕೆ ಹೋಗಲು ಅವರ ಮಾತುಗಳೇ ಪ್ರೇರಣೆ.

ನಾನಾಗ ೮ನೇ ತರಗತಿಯಲ್ಲಿದ್ದೆ. ಅವರು ಆಗಷ್ಟೇ ಶಿಕ್ಷಕರಾಗಿ ಆಯ್ಕೆಯಾಗಿದ್ದರು. ಅವರಿಗೆ ನಮ್ಮದೇ ಮೊದಲ ಬ್ಯಾಚ್. ಸಹ ಶಿಕ್ಷರಾಗಿದ್ದ ಎಚ್‌ಎಂಎಲ್ ಅವರು ನಮ್ಮ ತರಗತಿಗೆ ಬಂದು ಡಿವಿಎಸ್ ಮೇಡಂ ಅವರನ್ನು ಪರಿಚಯಿಸಿದರು. ಅಲ್ಲಿಂದ ಶುರುವಾದ ನಮ್ಮ ಗುರು-ಶಿಷ್ಯರ ಸಂಬಂಧ ಇನ್ನೂ ಮುಂದುವರಿದಿದೆ. ಅವರೀಗ ನಮ್ಮೊಂದಿಗೆ ಇಲ್ಲದೇ ಇದ್ದರೂ.

ಹೌದು ಪ್ರೀತಿಯ ಡಿವಿಎಸ್ ಮೇಡಂ ಈಗ ನಮ್ಮೊಂದಿಗೆ ಇಲ್ಲ. ಅಕಾಲಿಕವಾಗಿ ಮೃತಪಟ್ಟರು. ಇದು ನನ್ನಂತಹ ಸಾವಿರಾರು ವಿದ್ಯಾರ್ಥಿಗಳಿಗೆ ಆದ ನಷ್ಟ. ಒಮ್ಮೆ ನನಗೆ ಭಾಷಣ ಸ್ಪರ್ಧೆಯಲ್ಲಿ ಬಹುಮಾನವಾಗಿ ಟಿಫನ್ ಬಾಕ್ಸ್ ಬಂದಿತ್ತು. ತೆರೆದು ನೋಡಿದರೆ ಅದರೊಳಗೆ ಕೇಸರಿ ಬಾತ್ ಇತ್ತು. ಅದನ್ನು ಕೊಟ್ಟಿದ್ದವರು ಡಿವಿಎಸ್ ಮೇಡಂ. ನನ್ನ ಅಚ್ಚರಿಯ ಮುಖ ನೋಡಿ ತಿನ್ನು ಎಂದಿದ್ದರು. ಆಗ ನನಗೆ ನನ್ನ ತಾಯಿಯೇ ನೆನಪಾಗಿದ್ದರು.

೧೦ನೇ ತರಗತಿ ಮುಗಿಸಿಕೊಂಡು ಹೈಸ್ಕೂಲ್‌ನಿಂದ ಹೊರ ಬಂದ ಬಳಿಕವೂ ಅವರ ಸಂಪರ್ಕ ಇತ್ತು. ಪ್ರತಿ ಹಂತದಲ್ಲಿಯೂ ಮಾರ್ಗದರ್ಶನ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಕೆಲಸಕ್ಕೆ ಸೇರಲು, ಈಗ ಗ್ರಾಮಲೆಕ್ಕಿಗ ಹುದ್ದೆ ಅಲಂಕರಿಸಿರುವುದರ ಹಿಂದೆ ಅವರ ಮಾರ್ಗದರ್ಶನ ಇದೆ. ಅವರು ಕನ್ನಡದ ಬಗ್ಗೆ ಹೊಂದಿದ್ದ ಹಿಡಿತ, ವ್ಯಾಕರಣವನ್ನು ಸರಳವಾಗಿ ಹೇಳಿಕೊಡುತ್ತಿದ್ದ ರೀತಿ, ಅವರ ಕನ್ನಡ ಪಾಠ ಎಲ್ಲವೂ ಈಗಲೂ ಕಣ್ಣ ಮುಂದಿದೆ. ಮಿಸ್ ಯೂ ಡಿವಿಎಸ್ ಮೇಡಂ.

 

andolana

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

19 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

32 mins ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

42 mins ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

1 hour ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

1 hour ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago