ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು: ಜೊತೆಗಿರದ ಜೀವ ಎಂದಿಗೂ ಜೀವಂತ

-ಶಿವಕುಮಾರ್ ಎಂ.ವಿ. ಗ್ರಾಮಲೆಕ್ಕಿಗ, ಮಾದಳ್ಳಿ 

ತಂದೆ, ತಾಯಿಗೆ ಸಮಾನವಾದ ಪ್ರೀತಿ, ಗೌರವ ಪಡೆಯುವ ಯಾರಾದರೂ ಇದ್ದರೆ ಅದು ಶಿಕ್ಷಕರು. ಅದಕ್ಕಾಗಿಯೇ ಅವರನ್ನು ಗುರು ದೇವೋಭವ ಎನ್ನುವುದು.

ನನ್ನ ಪಾಲಿಗೆ ಡಿ. ವಿಜಯಶ್ರೀ (ಡಿವಿಎಸ್) ದೇವರಂತಹ ಗುರು. ಕಾಣುವ ಪ್ರತಿಭೆಯನ್ನು ಯಾರು ಬೇಕಾದರೂ ಗುರುತಿಸಬಹುದು. ಆದರೆ ವಿದ್ಯಾರ್ಥಿಯ ಒಳಗಿರುವ ಸುಪ್ತ ಪ್ರತಿಭೆಯನ್ನು ಪತ್ತೆ ಮಾಡಿದ ಅದಕ್ಕೆ ನೀರೆರೆದು ಪೋಷಿಸುವ ಗುಣ ಇರುವ ಶಿಕ್ಷಕರು ವಿರಳ. ಆದರೆ ನನ್ನ ಪಾಲಿಗೆ ಡಿವಿಎಸ್ ಮೇಡಂ ಬಹು ದೊಡ್ಡ ವರ.

ನನ್ನೊಳಗೆ ಇದ್ದ ಪ್ರತಿಭೆಯನ್ನು ಪ್ರತಿ ಹಂತದಲ್ಲಿಯೂ ಗುರುತಿಸಿದರು. ನಾನು ಭಾಷಣ, ಚರ್ಚಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆಯಲ್ಲಿ ರಾಜ್ಯ ಮಟ್ಟಕ್ಕೆ ಹೋಗಲು ಅವರ ಮಾತುಗಳೇ ಪ್ರೇರಣೆ.

ನಾನಾಗ ೮ನೇ ತರಗತಿಯಲ್ಲಿದ್ದೆ. ಅವರು ಆಗಷ್ಟೇ ಶಿಕ್ಷಕರಾಗಿ ಆಯ್ಕೆಯಾಗಿದ್ದರು. ಅವರಿಗೆ ನಮ್ಮದೇ ಮೊದಲ ಬ್ಯಾಚ್. ಸಹ ಶಿಕ್ಷರಾಗಿದ್ದ ಎಚ್‌ಎಂಎಲ್ ಅವರು ನಮ್ಮ ತರಗತಿಗೆ ಬಂದು ಡಿವಿಎಸ್ ಮೇಡಂ ಅವರನ್ನು ಪರಿಚಯಿಸಿದರು. ಅಲ್ಲಿಂದ ಶುರುವಾದ ನಮ್ಮ ಗುರು-ಶಿಷ್ಯರ ಸಂಬಂಧ ಇನ್ನೂ ಮುಂದುವರಿದಿದೆ. ಅವರೀಗ ನಮ್ಮೊಂದಿಗೆ ಇಲ್ಲದೇ ಇದ್ದರೂ.

ಹೌದು ಪ್ರೀತಿಯ ಡಿವಿಎಸ್ ಮೇಡಂ ಈಗ ನಮ್ಮೊಂದಿಗೆ ಇಲ್ಲ. ಅಕಾಲಿಕವಾಗಿ ಮೃತಪಟ್ಟರು. ಇದು ನನ್ನಂತಹ ಸಾವಿರಾರು ವಿದ್ಯಾರ್ಥಿಗಳಿಗೆ ಆದ ನಷ್ಟ. ಒಮ್ಮೆ ನನಗೆ ಭಾಷಣ ಸ್ಪರ್ಧೆಯಲ್ಲಿ ಬಹುಮಾನವಾಗಿ ಟಿಫನ್ ಬಾಕ್ಸ್ ಬಂದಿತ್ತು. ತೆರೆದು ನೋಡಿದರೆ ಅದರೊಳಗೆ ಕೇಸರಿ ಬಾತ್ ಇತ್ತು. ಅದನ್ನು ಕೊಟ್ಟಿದ್ದವರು ಡಿವಿಎಸ್ ಮೇಡಂ. ನನ್ನ ಅಚ್ಚರಿಯ ಮುಖ ನೋಡಿ ತಿನ್ನು ಎಂದಿದ್ದರು. ಆಗ ನನಗೆ ನನ್ನ ತಾಯಿಯೇ ನೆನಪಾಗಿದ್ದರು.

೧೦ನೇ ತರಗತಿ ಮುಗಿಸಿಕೊಂಡು ಹೈಸ್ಕೂಲ್‌ನಿಂದ ಹೊರ ಬಂದ ಬಳಿಕವೂ ಅವರ ಸಂಪರ್ಕ ಇತ್ತು. ಪ್ರತಿ ಹಂತದಲ್ಲಿಯೂ ಮಾರ್ಗದರ್ಶನ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಕೆಲಸಕ್ಕೆ ಸೇರಲು, ಈಗ ಗ್ರಾಮಲೆಕ್ಕಿಗ ಹುದ್ದೆ ಅಲಂಕರಿಸಿರುವುದರ ಹಿಂದೆ ಅವರ ಮಾರ್ಗದರ್ಶನ ಇದೆ. ಅವರು ಕನ್ನಡದ ಬಗ್ಗೆ ಹೊಂದಿದ್ದ ಹಿಡಿತ, ವ್ಯಾಕರಣವನ್ನು ಸರಳವಾಗಿ ಹೇಳಿಕೊಡುತ್ತಿದ್ದ ರೀತಿ, ಅವರ ಕನ್ನಡ ಪಾಠ ಎಲ್ಲವೂ ಈಗಲೂ ಕಣ್ಣ ಮುಂದಿದೆ. ಮಿಸ್ ಯೂ ಡಿವಿಎಸ್ ಮೇಡಂ.

 

andolana

Recent Posts

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…

6 mins ago

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

1 hour ago

ಓದುಗರ ಪತ್ರ: ಐಪಿಎಲ್‌ನಲ್ಲಿ ಭಾರತೀಯ ಆಟಗಾರರೇ ಆಡಲಿ

೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’  (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ.  ಐಪಿಎಲ್ ತಂಡಗಳಲ್ಲಿ …

1 hour ago

ಓದುಗರ ಪತ್ರ: ಮೆಟ್ರೋ ಪ್ರಯಾಣ ದರ ಏರಿಕೆ ಸಲ್ಲದು

ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …

1 hour ago

ಓದುಗರ ಪತ್ರ: ರಾಮಕೃಷ್ಣನಗರದ ಮುಖ್ಯ ರಸ್ತೆಗೆ ಡಾಂಬರ್ ಹಾಕಿ

ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ  ಪೈಪ್‌ಗಳನ್ನು  ಅಳವಡಿಸಲು ರಸ್ತೆಯನ್ನು  ಅಗೆಯಲಾಗಿತ್ತು. ಪೈಪ್‌ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸಂಸತ್ತಿನೊಳಗೆ ಪ್ರಧಾನಿಗೆ ‘ಬೆದರಿಕೆಯ ಗುಮ್ಮ

ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ…

1 hour ago