ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು: ಜೊತೆಗಿರದ ಜೀವ ಎಂದಿಗೂ ಜೀವಂತ

-ಶಿವಕುಮಾರ್ ಎಂ.ವಿ. ಗ್ರಾಮಲೆಕ್ಕಿಗ, ಮಾದಳ್ಳಿ 

ತಂದೆ, ತಾಯಿಗೆ ಸಮಾನವಾದ ಪ್ರೀತಿ, ಗೌರವ ಪಡೆಯುವ ಯಾರಾದರೂ ಇದ್ದರೆ ಅದು ಶಿಕ್ಷಕರು. ಅದಕ್ಕಾಗಿಯೇ ಅವರನ್ನು ಗುರು ದೇವೋಭವ ಎನ್ನುವುದು.

ನನ್ನ ಪಾಲಿಗೆ ಡಿ. ವಿಜಯಶ್ರೀ (ಡಿವಿಎಸ್) ದೇವರಂತಹ ಗುರು. ಕಾಣುವ ಪ್ರತಿಭೆಯನ್ನು ಯಾರು ಬೇಕಾದರೂ ಗುರುತಿಸಬಹುದು. ಆದರೆ ವಿದ್ಯಾರ್ಥಿಯ ಒಳಗಿರುವ ಸುಪ್ತ ಪ್ರತಿಭೆಯನ್ನು ಪತ್ತೆ ಮಾಡಿದ ಅದಕ್ಕೆ ನೀರೆರೆದು ಪೋಷಿಸುವ ಗುಣ ಇರುವ ಶಿಕ್ಷಕರು ವಿರಳ. ಆದರೆ ನನ್ನ ಪಾಲಿಗೆ ಡಿವಿಎಸ್ ಮೇಡಂ ಬಹು ದೊಡ್ಡ ವರ.

ನನ್ನೊಳಗೆ ಇದ್ದ ಪ್ರತಿಭೆಯನ್ನು ಪ್ರತಿ ಹಂತದಲ್ಲಿಯೂ ಗುರುತಿಸಿದರು. ನಾನು ಭಾಷಣ, ಚರ್ಚಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆಯಲ್ಲಿ ರಾಜ್ಯ ಮಟ್ಟಕ್ಕೆ ಹೋಗಲು ಅವರ ಮಾತುಗಳೇ ಪ್ರೇರಣೆ.

ನಾನಾಗ ೮ನೇ ತರಗತಿಯಲ್ಲಿದ್ದೆ. ಅವರು ಆಗಷ್ಟೇ ಶಿಕ್ಷಕರಾಗಿ ಆಯ್ಕೆಯಾಗಿದ್ದರು. ಅವರಿಗೆ ನಮ್ಮದೇ ಮೊದಲ ಬ್ಯಾಚ್. ಸಹ ಶಿಕ್ಷರಾಗಿದ್ದ ಎಚ್‌ಎಂಎಲ್ ಅವರು ನಮ್ಮ ತರಗತಿಗೆ ಬಂದು ಡಿವಿಎಸ್ ಮೇಡಂ ಅವರನ್ನು ಪರಿಚಯಿಸಿದರು. ಅಲ್ಲಿಂದ ಶುರುವಾದ ನಮ್ಮ ಗುರು-ಶಿಷ್ಯರ ಸಂಬಂಧ ಇನ್ನೂ ಮುಂದುವರಿದಿದೆ. ಅವರೀಗ ನಮ್ಮೊಂದಿಗೆ ಇಲ್ಲದೇ ಇದ್ದರೂ.

ಹೌದು ಪ್ರೀತಿಯ ಡಿವಿಎಸ್ ಮೇಡಂ ಈಗ ನಮ್ಮೊಂದಿಗೆ ಇಲ್ಲ. ಅಕಾಲಿಕವಾಗಿ ಮೃತಪಟ್ಟರು. ಇದು ನನ್ನಂತಹ ಸಾವಿರಾರು ವಿದ್ಯಾರ್ಥಿಗಳಿಗೆ ಆದ ನಷ್ಟ. ಒಮ್ಮೆ ನನಗೆ ಭಾಷಣ ಸ್ಪರ್ಧೆಯಲ್ಲಿ ಬಹುಮಾನವಾಗಿ ಟಿಫನ್ ಬಾಕ್ಸ್ ಬಂದಿತ್ತು. ತೆರೆದು ನೋಡಿದರೆ ಅದರೊಳಗೆ ಕೇಸರಿ ಬಾತ್ ಇತ್ತು. ಅದನ್ನು ಕೊಟ್ಟಿದ್ದವರು ಡಿವಿಎಸ್ ಮೇಡಂ. ನನ್ನ ಅಚ್ಚರಿಯ ಮುಖ ನೋಡಿ ತಿನ್ನು ಎಂದಿದ್ದರು. ಆಗ ನನಗೆ ನನ್ನ ತಾಯಿಯೇ ನೆನಪಾಗಿದ್ದರು.

೧೦ನೇ ತರಗತಿ ಮುಗಿಸಿಕೊಂಡು ಹೈಸ್ಕೂಲ್‌ನಿಂದ ಹೊರ ಬಂದ ಬಳಿಕವೂ ಅವರ ಸಂಪರ್ಕ ಇತ್ತು. ಪ್ರತಿ ಹಂತದಲ್ಲಿಯೂ ಮಾರ್ಗದರ್ಶನ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಕೆಲಸಕ್ಕೆ ಸೇರಲು, ಈಗ ಗ್ರಾಮಲೆಕ್ಕಿಗ ಹುದ್ದೆ ಅಲಂಕರಿಸಿರುವುದರ ಹಿಂದೆ ಅವರ ಮಾರ್ಗದರ್ಶನ ಇದೆ. ಅವರು ಕನ್ನಡದ ಬಗ್ಗೆ ಹೊಂದಿದ್ದ ಹಿಡಿತ, ವ್ಯಾಕರಣವನ್ನು ಸರಳವಾಗಿ ಹೇಳಿಕೊಡುತ್ತಿದ್ದ ರೀತಿ, ಅವರ ಕನ್ನಡ ಪಾಠ ಎಲ್ಲವೂ ಈಗಲೂ ಕಣ್ಣ ಮುಂದಿದೆ. ಮಿಸ್ ಯೂ ಡಿವಿಎಸ್ ಮೇಡಂ.

 

andolana

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

8 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

8 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

9 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

10 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

10 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

11 hours ago