ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು: ಜೊತೆಗಿರದ ಜೀವ ಎಂದಿಗೂ ಜೀವಂತ

-ಶಿವಕುಮಾರ್ ಎಂ.ವಿ. ಗ್ರಾಮಲೆಕ್ಕಿಗ, ಮಾದಳ್ಳಿ 

ತಂದೆ, ತಾಯಿಗೆ ಸಮಾನವಾದ ಪ್ರೀತಿ, ಗೌರವ ಪಡೆಯುವ ಯಾರಾದರೂ ಇದ್ದರೆ ಅದು ಶಿಕ್ಷಕರು. ಅದಕ್ಕಾಗಿಯೇ ಅವರನ್ನು ಗುರು ದೇವೋಭವ ಎನ್ನುವುದು.

ನನ್ನ ಪಾಲಿಗೆ ಡಿ. ವಿಜಯಶ್ರೀ (ಡಿವಿಎಸ್) ದೇವರಂತಹ ಗುರು. ಕಾಣುವ ಪ್ರತಿಭೆಯನ್ನು ಯಾರು ಬೇಕಾದರೂ ಗುರುತಿಸಬಹುದು. ಆದರೆ ವಿದ್ಯಾರ್ಥಿಯ ಒಳಗಿರುವ ಸುಪ್ತ ಪ್ರತಿಭೆಯನ್ನು ಪತ್ತೆ ಮಾಡಿದ ಅದಕ್ಕೆ ನೀರೆರೆದು ಪೋಷಿಸುವ ಗುಣ ಇರುವ ಶಿಕ್ಷಕರು ವಿರಳ. ಆದರೆ ನನ್ನ ಪಾಲಿಗೆ ಡಿವಿಎಸ್ ಮೇಡಂ ಬಹು ದೊಡ್ಡ ವರ.

ನನ್ನೊಳಗೆ ಇದ್ದ ಪ್ರತಿಭೆಯನ್ನು ಪ್ರತಿ ಹಂತದಲ್ಲಿಯೂ ಗುರುತಿಸಿದರು. ನಾನು ಭಾಷಣ, ಚರ್ಚಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆಯಲ್ಲಿ ರಾಜ್ಯ ಮಟ್ಟಕ್ಕೆ ಹೋಗಲು ಅವರ ಮಾತುಗಳೇ ಪ್ರೇರಣೆ.

ನಾನಾಗ ೮ನೇ ತರಗತಿಯಲ್ಲಿದ್ದೆ. ಅವರು ಆಗಷ್ಟೇ ಶಿಕ್ಷಕರಾಗಿ ಆಯ್ಕೆಯಾಗಿದ್ದರು. ಅವರಿಗೆ ನಮ್ಮದೇ ಮೊದಲ ಬ್ಯಾಚ್. ಸಹ ಶಿಕ್ಷರಾಗಿದ್ದ ಎಚ್‌ಎಂಎಲ್ ಅವರು ನಮ್ಮ ತರಗತಿಗೆ ಬಂದು ಡಿವಿಎಸ್ ಮೇಡಂ ಅವರನ್ನು ಪರಿಚಯಿಸಿದರು. ಅಲ್ಲಿಂದ ಶುರುವಾದ ನಮ್ಮ ಗುರು-ಶಿಷ್ಯರ ಸಂಬಂಧ ಇನ್ನೂ ಮುಂದುವರಿದಿದೆ. ಅವರೀಗ ನಮ್ಮೊಂದಿಗೆ ಇಲ್ಲದೇ ಇದ್ದರೂ.

ಹೌದು ಪ್ರೀತಿಯ ಡಿವಿಎಸ್ ಮೇಡಂ ಈಗ ನಮ್ಮೊಂದಿಗೆ ಇಲ್ಲ. ಅಕಾಲಿಕವಾಗಿ ಮೃತಪಟ್ಟರು. ಇದು ನನ್ನಂತಹ ಸಾವಿರಾರು ವಿದ್ಯಾರ್ಥಿಗಳಿಗೆ ಆದ ನಷ್ಟ. ಒಮ್ಮೆ ನನಗೆ ಭಾಷಣ ಸ್ಪರ್ಧೆಯಲ್ಲಿ ಬಹುಮಾನವಾಗಿ ಟಿಫನ್ ಬಾಕ್ಸ್ ಬಂದಿತ್ತು. ತೆರೆದು ನೋಡಿದರೆ ಅದರೊಳಗೆ ಕೇಸರಿ ಬಾತ್ ಇತ್ತು. ಅದನ್ನು ಕೊಟ್ಟಿದ್ದವರು ಡಿವಿಎಸ್ ಮೇಡಂ. ನನ್ನ ಅಚ್ಚರಿಯ ಮುಖ ನೋಡಿ ತಿನ್ನು ಎಂದಿದ್ದರು. ಆಗ ನನಗೆ ನನ್ನ ತಾಯಿಯೇ ನೆನಪಾಗಿದ್ದರು.

೧೦ನೇ ತರಗತಿ ಮುಗಿಸಿಕೊಂಡು ಹೈಸ್ಕೂಲ್‌ನಿಂದ ಹೊರ ಬಂದ ಬಳಿಕವೂ ಅವರ ಸಂಪರ್ಕ ಇತ್ತು. ಪ್ರತಿ ಹಂತದಲ್ಲಿಯೂ ಮಾರ್ಗದರ್ಶನ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಕೆಲಸಕ್ಕೆ ಸೇರಲು, ಈಗ ಗ್ರಾಮಲೆಕ್ಕಿಗ ಹುದ್ದೆ ಅಲಂಕರಿಸಿರುವುದರ ಹಿಂದೆ ಅವರ ಮಾರ್ಗದರ್ಶನ ಇದೆ. ಅವರು ಕನ್ನಡದ ಬಗ್ಗೆ ಹೊಂದಿದ್ದ ಹಿಡಿತ, ವ್ಯಾಕರಣವನ್ನು ಸರಳವಾಗಿ ಹೇಳಿಕೊಡುತ್ತಿದ್ದ ರೀತಿ, ಅವರ ಕನ್ನಡ ಪಾಠ ಎಲ್ಲವೂ ಈಗಲೂ ಕಣ್ಣ ಮುಂದಿದೆ. ಮಿಸ್ ಯೂ ಡಿವಿಎಸ್ ಮೇಡಂ.

 

andolana

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

41 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

48 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

53 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

58 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

1 hour ago