ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು: ಜೊತೆಗಿರದ ಜೀವ ಎಂದಿಗೂ ಜೀವಂತ

-ಶಿವಕುಮಾರ್ ಎಂ.ವಿ. ಗ್ರಾಮಲೆಕ್ಕಿಗ, ಮಾದಳ್ಳಿ 

ತಂದೆ, ತಾಯಿಗೆ ಸಮಾನವಾದ ಪ್ರೀತಿ, ಗೌರವ ಪಡೆಯುವ ಯಾರಾದರೂ ಇದ್ದರೆ ಅದು ಶಿಕ್ಷಕರು. ಅದಕ್ಕಾಗಿಯೇ ಅವರನ್ನು ಗುರು ದೇವೋಭವ ಎನ್ನುವುದು.

ನನ್ನ ಪಾಲಿಗೆ ಡಿ. ವಿಜಯಶ್ರೀ (ಡಿವಿಎಸ್) ದೇವರಂತಹ ಗುರು. ಕಾಣುವ ಪ್ರತಿಭೆಯನ್ನು ಯಾರು ಬೇಕಾದರೂ ಗುರುತಿಸಬಹುದು. ಆದರೆ ವಿದ್ಯಾರ್ಥಿಯ ಒಳಗಿರುವ ಸುಪ್ತ ಪ್ರತಿಭೆಯನ್ನು ಪತ್ತೆ ಮಾಡಿದ ಅದಕ್ಕೆ ನೀರೆರೆದು ಪೋಷಿಸುವ ಗುಣ ಇರುವ ಶಿಕ್ಷಕರು ವಿರಳ. ಆದರೆ ನನ್ನ ಪಾಲಿಗೆ ಡಿವಿಎಸ್ ಮೇಡಂ ಬಹು ದೊಡ್ಡ ವರ.

ನನ್ನೊಳಗೆ ಇದ್ದ ಪ್ರತಿಭೆಯನ್ನು ಪ್ರತಿ ಹಂತದಲ್ಲಿಯೂ ಗುರುತಿಸಿದರು. ನಾನು ಭಾಷಣ, ಚರ್ಚಾ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆಯಲ್ಲಿ ರಾಜ್ಯ ಮಟ್ಟಕ್ಕೆ ಹೋಗಲು ಅವರ ಮಾತುಗಳೇ ಪ್ರೇರಣೆ.

ನಾನಾಗ ೮ನೇ ತರಗತಿಯಲ್ಲಿದ್ದೆ. ಅವರು ಆಗಷ್ಟೇ ಶಿಕ್ಷಕರಾಗಿ ಆಯ್ಕೆಯಾಗಿದ್ದರು. ಅವರಿಗೆ ನಮ್ಮದೇ ಮೊದಲ ಬ್ಯಾಚ್. ಸಹ ಶಿಕ್ಷರಾಗಿದ್ದ ಎಚ್‌ಎಂಎಲ್ ಅವರು ನಮ್ಮ ತರಗತಿಗೆ ಬಂದು ಡಿವಿಎಸ್ ಮೇಡಂ ಅವರನ್ನು ಪರಿಚಯಿಸಿದರು. ಅಲ್ಲಿಂದ ಶುರುವಾದ ನಮ್ಮ ಗುರು-ಶಿಷ್ಯರ ಸಂಬಂಧ ಇನ್ನೂ ಮುಂದುವರಿದಿದೆ. ಅವರೀಗ ನಮ್ಮೊಂದಿಗೆ ಇಲ್ಲದೇ ಇದ್ದರೂ.

ಹೌದು ಪ್ರೀತಿಯ ಡಿವಿಎಸ್ ಮೇಡಂ ಈಗ ನಮ್ಮೊಂದಿಗೆ ಇಲ್ಲ. ಅಕಾಲಿಕವಾಗಿ ಮೃತಪಟ್ಟರು. ಇದು ನನ್ನಂತಹ ಸಾವಿರಾರು ವಿದ್ಯಾರ್ಥಿಗಳಿಗೆ ಆದ ನಷ್ಟ. ಒಮ್ಮೆ ನನಗೆ ಭಾಷಣ ಸ್ಪರ್ಧೆಯಲ್ಲಿ ಬಹುಮಾನವಾಗಿ ಟಿಫನ್ ಬಾಕ್ಸ್ ಬಂದಿತ್ತು. ತೆರೆದು ನೋಡಿದರೆ ಅದರೊಳಗೆ ಕೇಸರಿ ಬಾತ್ ಇತ್ತು. ಅದನ್ನು ಕೊಟ್ಟಿದ್ದವರು ಡಿವಿಎಸ್ ಮೇಡಂ. ನನ್ನ ಅಚ್ಚರಿಯ ಮುಖ ನೋಡಿ ತಿನ್ನು ಎಂದಿದ್ದರು. ಆಗ ನನಗೆ ನನ್ನ ತಾಯಿಯೇ ನೆನಪಾಗಿದ್ದರು.

೧೦ನೇ ತರಗತಿ ಮುಗಿಸಿಕೊಂಡು ಹೈಸ್ಕೂಲ್‌ನಿಂದ ಹೊರ ಬಂದ ಬಳಿಕವೂ ಅವರ ಸಂಪರ್ಕ ಇತ್ತು. ಪ್ರತಿ ಹಂತದಲ್ಲಿಯೂ ಮಾರ್ಗದರ್ಶನ ನೀಡಿ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಕೆಲಸಕ್ಕೆ ಸೇರಲು, ಈಗ ಗ್ರಾಮಲೆಕ್ಕಿಗ ಹುದ್ದೆ ಅಲಂಕರಿಸಿರುವುದರ ಹಿಂದೆ ಅವರ ಮಾರ್ಗದರ್ಶನ ಇದೆ. ಅವರು ಕನ್ನಡದ ಬಗ್ಗೆ ಹೊಂದಿದ್ದ ಹಿಡಿತ, ವ್ಯಾಕರಣವನ್ನು ಸರಳವಾಗಿ ಹೇಳಿಕೊಡುತ್ತಿದ್ದ ರೀತಿ, ಅವರ ಕನ್ನಡ ಪಾಠ ಎಲ್ಲವೂ ಈಗಲೂ ಕಣ್ಣ ಮುಂದಿದೆ. ಮಿಸ್ ಯೂ ಡಿವಿಎಸ್ ಮೇಡಂ.

 

andolana

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

2 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

2 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

2 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

2 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

2 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

2 hours ago