ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟು: ಪರಶುರಾಮ್ ಮತ್ತು ಸ್ಟ್ಯಾನ್ಲಿ ಎಂಬ ಅಣ್ಣಂದಿರ ಗರಡಿ

೧೮ ವರ್ಷಗಳಿಂದ ಒಡನಾಡಿಯ ಒಡನಾಟ ನನ್ನದು. ಅಲ್ಲಿ ಕಲಿದದ್ದು ಬೆಟ್ಟದಷ್ಟು. ಅಣ್ಣಂದಿರ ರೀತಿ, ಗುರುಗಳ ರೀತಿ ಇರುವ ಸ್ಟ್ಯಾನ್ಲಿ ಮತ್ತು ಪರಶುರಾಮ್ ಸರ್ ನನಗೆ ಮತ್ತು ನನ್ನಂಥವರಿಗೆ ಬೆಳಕು.

ಕಲೆ, ಸೇವೆ, ಕ್ರೀಡೆ, ಸಾಹಿತ್ಯ ಹೀಗೆ ಬದುಕಿನ ಎಲ್ಲ ಮಗ್ಗಲುಗಳನ್ನು ಒಡನಾಡಿಯಲ್ಲಿ ಕಲಿಯಲು ಅವಕಾಶ ಇದೆ. ಜೀವನವನ್ನು ಸಮಾಜಮುಖಿಯಾಗಿ ಹೇಗೆ ರೂಪಿಸಿಕೊಳ್ಳಬೇಕು ಎಂಬುದರ ಬಗ್ಗೆ ನನ್ನಿಬ್ಬರು ಗುರು ಸಮಾನರಾದ ಈ ಅಣ್ಣಂದಿರು ಪ್ರತಿ ಹಂತದಲ್ಲಿಯೂ ಹೇಳಿಕೊಡುತ್ತಿರುತ್ತಾರೆ.

ನಾನು ೫ನೇ ತರಗತಿಯಲ್ಲಿ ಇರಬೇಕಾದರೆ ಒಡನಾಡಿಯ ಒಡಲು ಸೇರಿದೆ. ಅದಾದ ಮೇಲೆ ಅಲ್ಲಿಂದಲೇ ಕಲಿತು ಈಗ ಅಲ್ಲಿಯೇ ಮಕ್ಕಳಿಗೆ ಕರಾಟೆ ಮತ್ತು ಯೋಗ ಕ್ಲಾಸ್ ಮಾಡುತ್ತಿದ್ದೇನೆ. ಇದಕ್ಕೆಲ್ಲವೂ ಈ ಇಬ್ಬರು ಅಣ್ಣಂದಿರೇ ಕಾರಣ.

ಒಡನಾಡಿಗೆ ಯಾರೇ ಹೊಸಬರು ಬಂದರೂ ಅವರನ್ನು ಮೋಟಿವೇಟ್ ಮಾಡುತ್ತಾರೆ. ಬದುಕು ಎಂದರೆ ಇಷ್ಟೆನಾ ಎಂದುಕೊಂಡವರಿಗೆ ಜೀವನ ಇಷ್ಟೊಂದು ಸುಂದರವಾಗಿದೆ ಎನ್ನುವಂತೆ ಮಾಡುತ್ತಾರೆ. ಅದು ಅವರ ಶಕ್ತಿ. ನಾನು ಅವರ ಕೆಲಸಗಳನ್ನು ಹತ್ತಿರದಿಂದ ನೋಡಿದ್ದೇನೆ. ಅವರ ಮಾತುಗಳನ್ನು ಕೇಳಿ ಬೆಳೆದಿದ್ದೇನೆ. ಇದೀಗ ಅವರ ಹಾದಿಯನ್ನೇ ಹಿಡಿದಿದ್ದೇನೆ. ಇದು ನನ್ನ ಪಾಲಿನ ಅತಿ ದೊಡ್ಡ ಹೆಮ್ಮೆ.

ಪರಶುರಾಮ್, ಸ್ಟ್ಯಾನ್ಲಿ ಎನ್ನುವ ಹೆಸರುಗಳನ್ನು ನೆನೆದರೆ ನನಗೆ ಉತ್ಸಾಹ ಹೆಚ್ಚಾಗುತ್ತದೆ. ಸೋತು ನಿಂತೆ ಎನ್ನುವಾಗ ಅವರ ಹೆಸರನ್ನು, ಅವರ ಮಾತುಗಳನ್ನು ನೆನೆದುಕೊಂಡರೆ ಸಾಕು ಶಕ್ತಿ ಬಂದಂತಾಗುತ್ತದೆ. ಅಷ್ಟರ ಮಟ್ಟಿಗೆ ಅವರು ನನ್ನ ಪಾಲಿಗೆ ಯಶಸ್ವಿ ಗುರುಗಳು.

ಈಗ ನಾನು ಒಡನಾಡಿಯಲ್ಲಿ ಇಲ್ಲ. ಒಂದು ರೀತಿಯಲ್ಲಿ ಸಬಲೆಯಾಗಿ ನನ್ನ ತಾಯಿಯೊಂದಿಗೆ ಬದುಕುತ್ತಿದ್ದೇನೆ. ಈ ಸಬಲತೆಯ ಹಿಂದಿನ ಶಕ್ತಿ ನನ್ನ ಅಣ್ಣಂದಿರು.

ನನಗೆ ವಿಜ್ಞಾನದ ಬಗ್ಗೆ ಆಸಕ್ತಿ ಇತ್ತು. ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಅಂಕ ಗಳಿಸಿಲ್ಲ ಎಂದು ನನಗೆ ಕಾಲೇಜಿನಲ್ಲಿ ಸೈನ್ಸ್‌ಗೆ ಸೀಟ್ ಸಿಗಲಿಲ್ಲ. ನಿರಾಶಳಾಗಿ ಕುಳಿತಿದ್ದಾಗ ನನಗೆ ಕಾಮರ್ಸ್ ತೆಗೆದುಕೋ ಎಂದು ಮಾರ್ಗದರ್ಶನ ಮಾಡಿ, ಅದರಲ್ಲಿಯೇ ಯಶ ಕಾಣುವಂತೆ ಮಾಡಿದವರು ಈ ಗುರು ದ್ವಯರು. ಅದೇ ರೀತಿ ಮಹಾಜನ ಕಾಲೇಜಿನಲ್ಲಿ ಸಿಕ್ಕ ನನ್ನ ಗುರು ಸುಮನಾ ಮೇಂಡ. ಅವರ ಸಲಹೆ, ಮಾರ್ಗದರ್ಶನವೂ ನನ್ನ ಪಾಲಿಗೆ ಅತಿ ಮುಖ್ಯವಾಗಿದೆ.

– ವರ್ಷ ಸರಸ್ವತಿ, ಚಾಮರಾಜನಗರ

andolana

Recent Posts

ಯುಜಿಡಿ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ

ಕೆ.ಬಿ.ರಮೇಶ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಹಲವು ಯೋಜನೆಗಳನ್ನು ಪ್ರಸ್ತಾಪಿಸಿದ ಡಿಸಿ ಮೈಸೂರು: ಬೆಂಗಳೂರು ಬಳಿಕ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ…

19 seconds ago

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

9 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

9 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

9 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

10 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

10 hours ago