ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು

ಇಂದು ಶಿಕ್ಷಕಿಯಾಗಲು ಅಂದು ಪ್ರೋತ್ಸಾಹಿಸಿದ ಮೇಷ್ಟ್ರು

ಹೇಗೆ ಬದುಕು ನಡೆಸಬೇಕು ಎಂದು ಹೇಳಿಕೊಡುತ್ತಿದ್ದಾರೆ.
ನನ್ನ ಪ್ರೀತಿಯ ಮೇಷ್ಟ್ರುಗಳು ಎಂದು ನೆನಪಿಸಿಕೊಂಡರೆ ಹೈಸ್ಕೂಲ್ ಗೆ ಮನಸ್ಸು ಹಾರುತ್ತದೆ. ಅಲ್ಲಿ ಇದ್ದ ಎಚ್.ಬಿ. ರಾಜೇಂದ್ರ ಸರ್, ಸವಿತ ಮೇಡಂ, ಆರ್.ಕೆ. ಸರ್, ಎಸ್.ಎನ್. ಸರ್, ಸುಬ್ಬಣ್ಣ ಸರ್, ಕೆರೂರು ಸರ್, ಕುಮಾರಸ್ವಾಮಿ ಸರ್, ಎಂ.ಆರ್. ಸರ್, ಪಿ.ಟಿ. ಮಹೇಶ್ ಸರ್ ಹೀಗೆ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ನಾನು ಶಿಕ್ಷಕಿಯಾಗಲು ಸ್ಫೂರ್ತಿ ಯಾದರು.
ಎಚ್.ಬಿ. ರಾಜೇಂದ್ರ ಸರ್ ಕನ್ನಡದಲ್ಲಿ 125ಕ್ಕೆ 120 ತೆಗೆಯಲು ನಿಮ್ಮಂದ ಆಗುತ್ತದೆ, ಪ್ರಯತ್ನಿಸಿ ಎಂದು ಪ್ರೋತ್ಸಾಹಿಸಿದರು. ಅವರ ಮಾರ್ಗದರ್ಶನದಲ್ಲಿ ಓದಿ 122 ಅಂಕ ಗಳಿಸಿ ಅತ್ಯುತ್ತಮ ದರ್ಜೆಯಲ್ಲಿ ಪಾಸ್ ಆದೆ. ಉತ್ತಮ ವಿದ್ಯಾರ್ಥಿ ಪ್ರಶಸ್ತಿಗೂ ಭಾಜನಳಾದೆ.
ಸವಿತ ಮೇಡಂ ಒಳ್ಳೆಯ ಸ್ನೇಹಿತೆ ರೀತಿ ನನ್ನನ್ನು ಕಂಡು ಎಲ್ಲ ಹಂತಗಳಲ್ಲೂ ಪ್ರೋತ್ಸಾಹ ನೀಡಿದರು. ನಾನು ಶಿಕ್ಷಕಿಯಾಗಲು ಅವರೂ ಸ್ಫೂರ್ತಿ.
ಆರ್.ಕೆ. ಸರ್ ಕಲಿಸಿದ ಹಿಂದಿ, ಅವರ ಪಾಠ ಎಲ್ಲವೂ ನನಗೆ ಈಗಲೂ ಹಿಂದಿ ಓದುವ ಮತ್ತು ಅರ್ಥಮಾಡಿಕೊಳ್ಳುವುದನ್ನು ಕಲಿಸಿದೆ.
ನಮ್ಮ ಗಣಿತ ವಿಷಯದ ಟ್ಯೂಷನ್ ಮೇಷ್ಟ್ರು ಸುಬ್ಬಣ್ಣ, ಎಲ್ಲ ವಿದ್ಯಾರ್ಥಿಗಳನ್ನು ಲೋ ಏನೋ ಎಂದೇ ಮಾತನಾಡಿಸುತ್ತಿದ್ದರು. ಹಾಗೆ ಎಲ್ಲರಿಗೂ ಪ್ರೋತ್ಸಾಹ ನೀಡುತ್ತಿದ್ದರು. ನನ್ನ ಕುರಿತಾಗಿ ನಿಮ್ಮ ತಂದೆ ಪ್ರಾಥಮಿಕ ಶಾಲೆಯಲ್ಲಿ ಪಾಠ ಮಾಡ್ತಾರೆ, ನೀನು ಮುಂದೆ ಪ್ರೌಢಶಾಲೆಯಲ್ಲಿ ಪಾಠ ಮಾಡಬೇಕು ಎಂದು ಹೇಳುತ್ತಿದ್ದರು. ಅವರ ಮಾತುಗಳ ಪ್ರೇರಣೆಯಿಂದಲೇ ನಾನಿಂದು ಹೈಸ್ಕೂಲ್ ಟೀಚರ್.
ಎಸ್.ಎನ್.ಸರ್ ಅವರು ಗಣಿತ ವಿಷಯವನ್ನೂ ಸುಲಭವಾಗಿ ಬೋಧನೆ ಮಾಡುತ್ತಿದ್ದರು. ಅವರ ಬೋಧನ ಕ್ರಮವೇ ನನಗೆ ಸಹಕಾರಿಯಾಯಿತು.
ಪಿಯುಸಿ ಮುಗಿಸಿದ ತಕ್ಷಣ ನನಗೆ ಮದುವೆ ಆಯಿತು. ಆದರೆ ನನ್ನ ಶಿಕ್ಷಕ ವೃತ್ತಿ ಬಗೆಗಿನ ಸೆಳೆತ ಗುರುತಿಸಿದ ನನ್ನ ಪತಿ ನನಗೆ ಮುಂದೆ ಓದಲು ಅವಕಾಶ ಒದಗಿಸಿದರು. ಬಿಎ, ಎಂಎ, ಬಿ.ಇಡ್ ಕರೆಸ್ಪಾಂಡೆನ್ಸ್ ನಲ್ಲಿ ಓದಿದೆ. ಅಲ್ಲಿ ಸಿಕ್ಕ ಕೆ.ಜಿ. ಮಹೇಶ್ ಸರ್, ಕೆ.ಕೆ.ಸರ್, ಆರ್.ಎಂ.ಸರ್, ವೀಣಾ ಮೇಡಂ, ರಮೇಶ್ ಸರ್, ಎಂ.ಎಂ.ಸರ್ ನನಗೆ ದಾರಿ ತೋರಿದರು.
ಇಂತಹ ಮಹಾನ್ ಗುರುಗಳ ಗರಡಿಯಲ್ಲಿ ಕಲಿತ ನನ್ನನ್ನು ಲಯನ್ಸ್ ಸಂಸ್ಥೆಯವರು ಭರವಸೆ ಇಟ್ಟು ಶಿಕ್ಷಕಿ ಜವಾಬ್ದಾರಿಯನ್ನು ನೀಡಿದ್ದಾರೆ. ಅದೇ ಗುರುಗಳ ರೀತಿ ಮಕ್ಕಳಿಗೆ ಚೆನ್ನಾಗಿ ಪಾಠ ಮಾಡುವ ಮಹದಾಸೆ ನನ್ನದು.

ಸುಮಾ ಕೃಷ್ಣ ಮೂರ್ತಿ, ಶಿಕ್ಷಕಿ

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

7 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

7 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

7 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

7 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

8 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

8 hours ago