ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು

ಇಂದು ಶಿಕ್ಷಕಿಯಾಗಲು ಅಂದು ಪ್ರೋತ್ಸಾಹಿಸಿದ ಮೇಷ್ಟ್ರು

ಹೇಗೆ ಬದುಕು ನಡೆಸಬೇಕು ಎಂದು ಹೇಳಿಕೊಡುತ್ತಿದ್ದಾರೆ.
ನನ್ನ ಪ್ರೀತಿಯ ಮೇಷ್ಟ್ರುಗಳು ಎಂದು ನೆನಪಿಸಿಕೊಂಡರೆ ಹೈಸ್ಕೂಲ್ ಗೆ ಮನಸ್ಸು ಹಾರುತ್ತದೆ. ಅಲ್ಲಿ ಇದ್ದ ಎಚ್.ಬಿ. ರಾಜೇಂದ್ರ ಸರ್, ಸವಿತ ಮೇಡಂ, ಆರ್.ಕೆ. ಸರ್, ಎಸ್.ಎನ್. ಸರ್, ಸುಬ್ಬಣ್ಣ ಸರ್, ಕೆರೂರು ಸರ್, ಕುಮಾರಸ್ವಾಮಿ ಸರ್, ಎಂ.ಆರ್. ಸರ್, ಪಿ.ಟಿ. ಮಹೇಶ್ ಸರ್ ಹೀಗೆ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ನಾನು ಶಿಕ್ಷಕಿಯಾಗಲು ಸ್ಫೂರ್ತಿ ಯಾದರು.
ಎಚ್.ಬಿ. ರಾಜೇಂದ್ರ ಸರ್ ಕನ್ನಡದಲ್ಲಿ 125ಕ್ಕೆ 120 ತೆಗೆಯಲು ನಿಮ್ಮಂದ ಆಗುತ್ತದೆ, ಪ್ರಯತ್ನಿಸಿ ಎಂದು ಪ್ರೋತ್ಸಾಹಿಸಿದರು. ಅವರ ಮಾರ್ಗದರ್ಶನದಲ್ಲಿ ಓದಿ 122 ಅಂಕ ಗಳಿಸಿ ಅತ್ಯುತ್ತಮ ದರ್ಜೆಯಲ್ಲಿ ಪಾಸ್ ಆದೆ. ಉತ್ತಮ ವಿದ್ಯಾರ್ಥಿ ಪ್ರಶಸ್ತಿಗೂ ಭಾಜನಳಾದೆ.
ಸವಿತ ಮೇಡಂ ಒಳ್ಳೆಯ ಸ್ನೇಹಿತೆ ರೀತಿ ನನ್ನನ್ನು ಕಂಡು ಎಲ್ಲ ಹಂತಗಳಲ್ಲೂ ಪ್ರೋತ್ಸಾಹ ನೀಡಿದರು. ನಾನು ಶಿಕ್ಷಕಿಯಾಗಲು ಅವರೂ ಸ್ಫೂರ್ತಿ.
ಆರ್.ಕೆ. ಸರ್ ಕಲಿಸಿದ ಹಿಂದಿ, ಅವರ ಪಾಠ ಎಲ್ಲವೂ ನನಗೆ ಈಗಲೂ ಹಿಂದಿ ಓದುವ ಮತ್ತು ಅರ್ಥಮಾಡಿಕೊಳ್ಳುವುದನ್ನು ಕಲಿಸಿದೆ.
ನಮ್ಮ ಗಣಿತ ವಿಷಯದ ಟ್ಯೂಷನ್ ಮೇಷ್ಟ್ರು ಸುಬ್ಬಣ್ಣ, ಎಲ್ಲ ವಿದ್ಯಾರ್ಥಿಗಳನ್ನು ಲೋ ಏನೋ ಎಂದೇ ಮಾತನಾಡಿಸುತ್ತಿದ್ದರು. ಹಾಗೆ ಎಲ್ಲರಿಗೂ ಪ್ರೋತ್ಸಾಹ ನೀಡುತ್ತಿದ್ದರು. ನನ್ನ ಕುರಿತಾಗಿ ನಿಮ್ಮ ತಂದೆ ಪ್ರಾಥಮಿಕ ಶಾಲೆಯಲ್ಲಿ ಪಾಠ ಮಾಡ್ತಾರೆ, ನೀನು ಮುಂದೆ ಪ್ರೌಢಶಾಲೆಯಲ್ಲಿ ಪಾಠ ಮಾಡಬೇಕು ಎಂದು ಹೇಳುತ್ತಿದ್ದರು. ಅವರ ಮಾತುಗಳ ಪ್ರೇರಣೆಯಿಂದಲೇ ನಾನಿಂದು ಹೈಸ್ಕೂಲ್ ಟೀಚರ್.
ಎಸ್.ಎನ್.ಸರ್ ಅವರು ಗಣಿತ ವಿಷಯವನ್ನೂ ಸುಲಭವಾಗಿ ಬೋಧನೆ ಮಾಡುತ್ತಿದ್ದರು. ಅವರ ಬೋಧನ ಕ್ರಮವೇ ನನಗೆ ಸಹಕಾರಿಯಾಯಿತು.
ಪಿಯುಸಿ ಮುಗಿಸಿದ ತಕ್ಷಣ ನನಗೆ ಮದುವೆ ಆಯಿತು. ಆದರೆ ನನ್ನ ಶಿಕ್ಷಕ ವೃತ್ತಿ ಬಗೆಗಿನ ಸೆಳೆತ ಗುರುತಿಸಿದ ನನ್ನ ಪತಿ ನನಗೆ ಮುಂದೆ ಓದಲು ಅವಕಾಶ ಒದಗಿಸಿದರು. ಬಿಎ, ಎಂಎ, ಬಿ.ಇಡ್ ಕರೆಸ್ಪಾಂಡೆನ್ಸ್ ನಲ್ಲಿ ಓದಿದೆ. ಅಲ್ಲಿ ಸಿಕ್ಕ ಕೆ.ಜಿ. ಮಹೇಶ್ ಸರ್, ಕೆ.ಕೆ.ಸರ್, ಆರ್.ಎಂ.ಸರ್, ವೀಣಾ ಮೇಡಂ, ರಮೇಶ್ ಸರ್, ಎಂ.ಎಂ.ಸರ್ ನನಗೆ ದಾರಿ ತೋರಿದರು.
ಇಂತಹ ಮಹಾನ್ ಗುರುಗಳ ಗರಡಿಯಲ್ಲಿ ಕಲಿತ ನನ್ನನ್ನು ಲಯನ್ಸ್ ಸಂಸ್ಥೆಯವರು ಭರವಸೆ ಇಟ್ಟು ಶಿಕ್ಷಕಿ ಜವಾಬ್ದಾರಿಯನ್ನು ನೀಡಿದ್ದಾರೆ. ಅದೇ ಗುರುಗಳ ರೀತಿ ಮಕ್ಕಳಿಗೆ ಚೆನ್ನಾಗಿ ಪಾಠ ಮಾಡುವ ಮಹದಾಸೆ ನನ್ನದು.

ಸುಮಾ ಕೃಷ್ಣ ಮೂರ್ತಿ, ಶಿಕ್ಷಕಿ

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

6 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

7 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

8 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

8 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

8 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

8 hours ago