ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು

ಇಂದು ಶಿಕ್ಷಕಿಯಾಗಲು ಅಂದು ಪ್ರೋತ್ಸಾಹಿಸಿದ ಮೇಷ್ಟ್ರು

ಹೇಗೆ ಬದುಕು ನಡೆಸಬೇಕು ಎಂದು ಹೇಳಿಕೊಡುತ್ತಿದ್ದಾರೆ.
ನನ್ನ ಪ್ರೀತಿಯ ಮೇಷ್ಟ್ರುಗಳು ಎಂದು ನೆನಪಿಸಿಕೊಂಡರೆ ಹೈಸ್ಕೂಲ್ ಗೆ ಮನಸ್ಸು ಹಾರುತ್ತದೆ. ಅಲ್ಲಿ ಇದ್ದ ಎಚ್.ಬಿ. ರಾಜೇಂದ್ರ ಸರ್, ಸವಿತ ಮೇಡಂ, ಆರ್.ಕೆ. ಸರ್, ಎಸ್.ಎನ್. ಸರ್, ಸುಬ್ಬಣ್ಣ ಸರ್, ಕೆರೂರು ಸರ್, ಕುಮಾರಸ್ವಾಮಿ ಸರ್, ಎಂ.ಆರ್. ಸರ್, ಪಿ.ಟಿ. ಮಹೇಶ್ ಸರ್ ಹೀಗೆ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ನಾನು ಶಿಕ್ಷಕಿಯಾಗಲು ಸ್ಫೂರ್ತಿ ಯಾದರು.
ಎಚ್.ಬಿ. ರಾಜೇಂದ್ರ ಸರ್ ಕನ್ನಡದಲ್ಲಿ 125ಕ್ಕೆ 120 ತೆಗೆಯಲು ನಿಮ್ಮಂದ ಆಗುತ್ತದೆ, ಪ್ರಯತ್ನಿಸಿ ಎಂದು ಪ್ರೋತ್ಸಾಹಿಸಿದರು. ಅವರ ಮಾರ್ಗದರ್ಶನದಲ್ಲಿ ಓದಿ 122 ಅಂಕ ಗಳಿಸಿ ಅತ್ಯುತ್ತಮ ದರ್ಜೆಯಲ್ಲಿ ಪಾಸ್ ಆದೆ. ಉತ್ತಮ ವಿದ್ಯಾರ್ಥಿ ಪ್ರಶಸ್ತಿಗೂ ಭಾಜನಳಾದೆ.
ಸವಿತ ಮೇಡಂ ಒಳ್ಳೆಯ ಸ್ನೇಹಿತೆ ರೀತಿ ನನ್ನನ್ನು ಕಂಡು ಎಲ್ಲ ಹಂತಗಳಲ್ಲೂ ಪ್ರೋತ್ಸಾಹ ನೀಡಿದರು. ನಾನು ಶಿಕ್ಷಕಿಯಾಗಲು ಅವರೂ ಸ್ಫೂರ್ತಿ.
ಆರ್.ಕೆ. ಸರ್ ಕಲಿಸಿದ ಹಿಂದಿ, ಅವರ ಪಾಠ ಎಲ್ಲವೂ ನನಗೆ ಈಗಲೂ ಹಿಂದಿ ಓದುವ ಮತ್ತು ಅರ್ಥಮಾಡಿಕೊಳ್ಳುವುದನ್ನು ಕಲಿಸಿದೆ.
ನಮ್ಮ ಗಣಿತ ವಿಷಯದ ಟ್ಯೂಷನ್ ಮೇಷ್ಟ್ರು ಸುಬ್ಬಣ್ಣ, ಎಲ್ಲ ವಿದ್ಯಾರ್ಥಿಗಳನ್ನು ಲೋ ಏನೋ ಎಂದೇ ಮಾತನಾಡಿಸುತ್ತಿದ್ದರು. ಹಾಗೆ ಎಲ್ಲರಿಗೂ ಪ್ರೋತ್ಸಾಹ ನೀಡುತ್ತಿದ್ದರು. ನನ್ನ ಕುರಿತಾಗಿ ನಿಮ್ಮ ತಂದೆ ಪ್ರಾಥಮಿಕ ಶಾಲೆಯಲ್ಲಿ ಪಾಠ ಮಾಡ್ತಾರೆ, ನೀನು ಮುಂದೆ ಪ್ರೌಢಶಾಲೆಯಲ್ಲಿ ಪಾಠ ಮಾಡಬೇಕು ಎಂದು ಹೇಳುತ್ತಿದ್ದರು. ಅವರ ಮಾತುಗಳ ಪ್ರೇರಣೆಯಿಂದಲೇ ನಾನಿಂದು ಹೈಸ್ಕೂಲ್ ಟೀಚರ್.
ಎಸ್.ಎನ್.ಸರ್ ಅವರು ಗಣಿತ ವಿಷಯವನ್ನೂ ಸುಲಭವಾಗಿ ಬೋಧನೆ ಮಾಡುತ್ತಿದ್ದರು. ಅವರ ಬೋಧನ ಕ್ರಮವೇ ನನಗೆ ಸಹಕಾರಿಯಾಯಿತು.
ಪಿಯುಸಿ ಮುಗಿಸಿದ ತಕ್ಷಣ ನನಗೆ ಮದುವೆ ಆಯಿತು. ಆದರೆ ನನ್ನ ಶಿಕ್ಷಕ ವೃತ್ತಿ ಬಗೆಗಿನ ಸೆಳೆತ ಗುರುತಿಸಿದ ನನ್ನ ಪತಿ ನನಗೆ ಮುಂದೆ ಓದಲು ಅವಕಾಶ ಒದಗಿಸಿದರು. ಬಿಎ, ಎಂಎ, ಬಿ.ಇಡ್ ಕರೆಸ್ಪಾಂಡೆನ್ಸ್ ನಲ್ಲಿ ಓದಿದೆ. ಅಲ್ಲಿ ಸಿಕ್ಕ ಕೆ.ಜಿ. ಮಹೇಶ್ ಸರ್, ಕೆ.ಕೆ.ಸರ್, ಆರ್.ಎಂ.ಸರ್, ವೀಣಾ ಮೇಡಂ, ರಮೇಶ್ ಸರ್, ಎಂ.ಎಂ.ಸರ್ ನನಗೆ ದಾರಿ ತೋರಿದರು.
ಇಂತಹ ಮಹಾನ್ ಗುರುಗಳ ಗರಡಿಯಲ್ಲಿ ಕಲಿತ ನನ್ನನ್ನು ಲಯನ್ಸ್ ಸಂಸ್ಥೆಯವರು ಭರವಸೆ ಇಟ್ಟು ಶಿಕ್ಷಕಿ ಜವಾಬ್ದಾರಿಯನ್ನು ನೀಡಿದ್ದಾರೆ. ಅದೇ ಗುರುಗಳ ರೀತಿ ಮಕ್ಕಳಿಗೆ ಚೆನ್ನಾಗಿ ಪಾಠ ಮಾಡುವ ಮಹದಾಸೆ ನನ್ನದು.

ಸುಮಾ ಕೃಷ್ಣ ಮೂರ್ತಿ, ಶಿಕ್ಷಕಿ

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

5 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

6 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

7 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

7 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

8 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

9 hours ago