ಆಂದೋಲನ ಪುರವಣಿ

ನನ್ನ ಪ್ರೀತಿಯ ಮೇಷ್ಟ್ರು : ಗಣಿತ ಮೇಷ್ಟ್ರ ಹುಲಿ ಮುದ್ದು

ಗಣಿತ ಮೇಷ್ಟ್ರ ಹುಲಿ ಮುದ್ದು

ಬೀರಿಹುಂಡಿ ಶಾಲೆಯ ಶಿವಶಂಕರ್ ಸರ್ ಎಂದರೆ ಅಚ್ಚುಮೆಚ್ಚು ನನ್ನ ಪ್ರೀತಿಯ ಮೇಷ್ಟ್ರು

ಸಮಾಜ ಎಲ್ಲರನ್ನೂ ಗೌರವಿಸುತ್ತದೆ. ಅದರಲ್ಲಿ ಮೊದಲ ಸಾಲಿನಲ್ಲಿ ನಿಲ್ಲುವವರು ಶಿಕ್ಷಕರು. ಅದರಲ್ಲಿಯೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಂತದಲ್ಲಿ ದೊರಕುವ ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳಿಗೆ ಎಲ್ಲಿಲ್ಲದ ಪ್ರೀತಿ, ಗೌರವ. ನನ್ನ ಪಾಲಿಗೆ ಬೀರಿಹುಂಡಿಯ ಸರ್ಕಾರಿ ಪ್ರೌಢಶಾಲೆಯ ಲೆಕ್ಕದ ಮೇಷ್ಟ್ರಾಗಿದ್ದ ಶಿವಶಂಕರ್ (ಸಿಎಸ್) ಎಂದರೆ ಲೆಕ್ಕಕ್ಕೆ ಇಡಲಾಗದಷ್ಟು ಪ್ರೀತಿ, ಆದರ.

ಶಿವಶಂಕರ್ ಸರ್ ನಡಿಗೆಯಲ್ಲಿದ್ದ ಗಾಂಭೀರ್ಯ, ಮಾತಿನಲ್ಲಿದ್ದ ಗೈರತ್ತು ಯಾರನ್ನೂ ನಡುಗಿಸುವಂತದ್ದು. ವಿದ್ಯಾರ್ಥಿಗಳಾಗಿದ್ದ ನಮಗೆ ಅವರ ಬಗ್ಗೆ ಕೇಳಿಯೇ ಭಯ. ಮೊದಲೇ ಗಣಿತದ ಮೇಷ್ಟ್ರು, ಅರ್ಥವಾಗದ ವಿಚಾರದಲ್ಲಿ ಎಷ್ಟು ಪೆಟ್ಟು ತಿನ್ನಬೇಕೋ ಎನ್ನುವ ಭಯ.

ಕಲಿಯುವ ಆಸಕ್ತಿ ಇದ್ದ ಎಲ್ಲರಿಗೂ ಸಿಎಸ್ ಎಂದರೆ ಪ್ರೀತಿ. ಅವರು ಗದರುತ್ತಿದ್ದರು, ಬೆತ್ತದ ರುಚಿ ತೋರಿಸುತ್ತಿದ್ದರು. ಆದರೆ ಅದರ ಹಿಂದಿದ್ದ ಪ್ರೀತಿ ಇಂದಿಗೂ ನನ್ನ ಮತ್ತು ನಮ್ಮಂತವರ ಅಂತರಾಳದಲ್ಲಿ ಶಾಶ್ವತ ಸ್ಥಾನ ಪಡೆದಿದೆ.

ಹಿಂದೆಲ್ಲಾ ಸ್ಪರ್ಧೆಗಳಿಗೆ ಒಡ್ಡಿಕೊಳ್ಳದೇ ಇದ್ದ ನನ್ನನ್ನು ಒಮ್ಮೆ ಮೂರು ಕಾಲಿನ ಓಟದ ಸ್ಪರ್ಧೆಯಲ್ಲಿ ಭಾಗವಹಿಸು ಎಂದು ಸ್ನೇಹಿತನೊಂದಿಗೆ ಎಳೆದು ಮೈದಾನಕ್ಕೆ ಬಿಟ್ಟರು. ಸ್ಪರ್ಧೆಯಲ್ಲಿ ಗೆದ್ದೆ, ಬಹುಮಾನವನ್ನು ಪಡೆದೆ. ಅದೇ ನಾನು ಪಡೆದ ಮೊದಲ ಬಹುಮಾನ. ಅದು ಕೊಟ್ಟ ಸಂತೋಷಕ್ಕೆ ಮಿತಿ ಇಲ್ಲ.

ಪ್ರೌಢಶಾಲೆ ಮುಗಿಸಿ ಹೊರಬಿದ್ದ ಮೇಲೆ ಅವರೂ ಬೇರೆ ಬೇರೆ ಶಾಲೆಗಳಿಗೆ ವರ್ಗವಾದರು. ಹಲವಾರು ಬಾರಿ ಭೇಟಿಯಾಗಬೇಕು ಎಂದು ಅನ್ನಿಸಿದರೂ ನನ್ನ ವಯೋಮಿತಿ, ಪರಿಮಿತಿಗಳ ಕಾರಣದಿಂದ ಅದು ಸಾಧ್ಯವಾಗಲಿಲ್ಲ. ಇಂದಿನಂತೆ ಅಂದು ಸಂಪರ್ಕ ಸುಲಭ ಸಾಧ್ಯವಾಗಿರಲಿಲ್ಲವಲ್ಲಾ? ಹೀಗಿದ್ದರೂ ಒಂದೆರಡು ಬಾರಿ ಅವರ ಆಕಸ್ಮಿಕ ಭೇಟಿಯಾಗಿದೆ. ಅದೇ ಪ್ರೀತಿಯಿಂದ ನನ್ನನ್ನು ಮಾತನಾಡಿಸಿದ್ದಾರೆ. ಅವರ ಹುಲಿ ಮುದ್ದು ನನ್ನಲ್ಲಿ ಈಗಲೂ ಬೆಚ್ಚಗಿದೆ.

ಜಗತ್ತಿನಲ್ಲಿ ಇರುವ ದೊಡ್ಡ ಶಿಕ್ಷಕರ ಬಳಗದಲ್ಲಿ ನೀವೊಬ್ಬರ ಸಾಮಾನ್ಯ ಶಿಕ್ಷಕರು ಎನ್ನಿಸಿಕೊಂಡಿರಬಹುದು ಸಿಎಸ್ ಸರ್, ಆದರೆ ನನ್ನಂಥವರ ಪಾಲಿಗೆ ನೀವು ದೊಡ್ಡ ನಕ್ಷತ್ರ. ಬೆಲೆ ಕಟ್ಟಲಾಗದ ಮೇರು ಪರ್ವತ.

ಅವಿನಾಶ್ ಎಂ. ಜಿ.ಬಿ. ಸರಗೂರು

 

andolanait

Recent Posts

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

1 hour ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

2 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

2 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

2 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

2 hours ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

2 hours ago