ಆಂದೋಲನ ಪುರವಣಿ

‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು : ಕನ್ನಡ ಚಿತ್ರರಂಗದ ನಟ ದಿವಂಗತ  ಪುನೀತ್ ರಾಜ್ ಕುಮಾರ್  ರವರ ಕುರಿತು ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಬರೆದಿರುವ ‘ನೀನೇ ರಾಜಕುಮಾರ’ ಬಯೋಗ್ರಫಿಯು ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದ್ದು ಇದನ್ನು ಇಂದು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್  ಅವರು ಬಿಡುಗಡೆ ಮಾಡಿದರು.

ಬೆಂಗಳೂರಿನ ಪಿ.ಆರ್.ಕೆ ಕಚೇರಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು. ಪುಸ್ತಕದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಡಾ.ಶರಣು ಹುಲ್ಲೂರು, ಪ್ರಕಾಶಕ ಜಮೀಲ್ ಸಾವಣ್ಣ ಮತ್ತು ಪಿ.ಆರ್.ಕೆಯ ಸತೀಶ್ ಅವರು ಕೂಡ ಹಾಜರಿದ್ದರು.
15 ಮಾರ್ಚ್ 2022ರಂದು ಮೊದಲ ಬಾರಿಗೆ ಈ ಪುಸ್ತಕವನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದರು. ಆನಂತರ ಈ ಪುಸ್ತಕವು ಅಮೆಜಾನ್, ಸಪ್ನಾ ಸೇರಿದಂತೆ ಹಲವು ಕಡೆ ಟಾಪ್ ಪಟ್ಟಿಯಲ್ಲಿ ದಾಖಲಾಗಿತ್ತು. ಅಲ್ಲಿಂದ ಈವರೆಗೂ ಸತತ ನಾಲ್ಕು ಮುದ್ರಣಗಳನ್ನು ಕಂಡು ಇನ್ನೂ ದಾಖಲೆ ರೀತಿಯಲ್ಲೇ ಮಾರಾಟವಾಗುತ್ತಿದೆ. ಅಲ್ಲದೇ, ಈ ಪುಸ್ತಕದೊಂದಿಗೆ ಪುನೀತ್ ಅವರ ಸಹಿ ಇರುವಂತಹ ಫೋಟೋ ಮತ್ತು ಬುಕ್ ಮಾರ್ಕ್ ಕೂಡ ಉಚಿತವಾಗಿ ಕೊಡಲಾಗುತ್ತಿದೆ.
ಈ ವರ್ಷದಲ್ಲಿ ಕನ್ನಡದಲ್ಲಿ ಬಂದ ಬಯೋಗ್ರಫಿಯಲ್ಲಿ ಹೆಚ್ಚು ಮಾರಾಟಕಂಡ ಪುಸ್ತಕ ಎನ್ನುವ ಹೆಗ್ಗಳಿಕೆ ‘ನೀನೇ ರಾಜಕುಮಾರ್’ ಪುಸ್ತಕದ್ದು. ಪುನೀತ್ ಅವರ ಬಾಲ್ಯದಿಂದ ಅವರ ನಿಧನದವರೆಗೂ ಅವರ ಬದುಕನ್ನು ಲೇಖಕರು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಪುನೀತ್ ಅವರ ಸಿನಿಮಾ, ಅವರ ಸಮಾಜಸೇವೆ, ಅವರ ಜೀವನದಲ್ಲಿ ನಡೆದ ಘಟನೆಗಳು ಮತ್ತು ಪುನೀತ್ ಅವರ ಜೀವನದ ಜೊತೆಗೆ ಕನ್ನಡ ಸಿನಿಮಾ ರಂಗದ ಸಂಕ್ಷಿಪ್ತ ಚರಿತ್ರೆ ಕೂಡ ಈ ಪುಸ್ತಕದಲ್ಲಿದೆ. ಅಲ್ಲದೇ, ಅಪರೂಪದ ಫೋಟೋಗಳನ್ನು ನೋಡಬಹುದಾಗಿದೆ.
ಪುನೀತ್ ಅವರ ಸಾಕಷ್ಟು ಸಂದರ್ಶನಗಳನ್ನು ಮಾಡಿದ್ದ ಪತ್ರಕರ್ತ ಶರಣು ಹುಲ್ಲೂರು, ಪುನೀತ್ ಅವರ ಕುರಿತಾಗಿ ಅನೇಕ ಅಪರೂಪದ ಸಂಗತಿಗಳನ್ನು ಈ ಪುಸ್ತಕದಲ್ಲಿ ಬರೆಯುತ್ತಾ ಹೋಗಿದ್ದಾರೆ. ಖ್ಯಾತ ಪತ್ರಕರ್ತರಾದ ಮುರಳಿಧರ ಖಜಾನೆ ಅವರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರೆ, ಜೋಗಿ ಅವರು ಹಿನ್ನುಡಿ ಬರೆದಿದ್ದಾರೆ

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

9 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

10 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

11 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

12 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

12 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

13 hours ago