ಆಂದೋಲನ ಪುರವಣಿ

‘ನೀನೇ ರಾಜಕುಮಾರ’ 4ನೇ ಆವೃತ್ತಿ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

ಬೆಂಗಳೂರು : ಕನ್ನಡ ಚಿತ್ರರಂಗದ ನಟ ದಿವಂಗತ  ಪುನೀತ್ ರಾಜ್ ಕುಮಾರ್  ರವರ ಕುರಿತು ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಬರೆದಿರುವ ‘ನೀನೇ ರಾಜಕುಮಾರ’ ಬಯೋಗ್ರಫಿಯು ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದ್ದು ಇದನ್ನು ಇಂದು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್  ಅವರು ಬಿಡುಗಡೆ ಮಾಡಿದರು.

ಬೆಂಗಳೂರಿನ ಪಿ.ಆರ್.ಕೆ ಕಚೇರಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಅವರು. ಪುಸ್ತಕದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಡಾ.ಶರಣು ಹುಲ್ಲೂರು, ಪ್ರಕಾಶಕ ಜಮೀಲ್ ಸಾವಣ್ಣ ಮತ್ತು ಪಿ.ಆರ್.ಕೆಯ ಸತೀಶ್ ಅವರು ಕೂಡ ಹಾಜರಿದ್ದರು.
15 ಮಾರ್ಚ್ 2022ರಂದು ಮೊದಲ ಬಾರಿಗೆ ಈ ಪುಸ್ತಕವನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದರು. ಆನಂತರ ಈ ಪುಸ್ತಕವು ಅಮೆಜಾನ್, ಸಪ್ನಾ ಸೇರಿದಂತೆ ಹಲವು ಕಡೆ ಟಾಪ್ ಪಟ್ಟಿಯಲ್ಲಿ ದಾಖಲಾಗಿತ್ತು. ಅಲ್ಲಿಂದ ಈವರೆಗೂ ಸತತ ನಾಲ್ಕು ಮುದ್ರಣಗಳನ್ನು ಕಂಡು ಇನ್ನೂ ದಾಖಲೆ ರೀತಿಯಲ್ಲೇ ಮಾರಾಟವಾಗುತ್ತಿದೆ. ಅಲ್ಲದೇ, ಈ ಪುಸ್ತಕದೊಂದಿಗೆ ಪುನೀತ್ ಅವರ ಸಹಿ ಇರುವಂತಹ ಫೋಟೋ ಮತ್ತು ಬುಕ್ ಮಾರ್ಕ್ ಕೂಡ ಉಚಿತವಾಗಿ ಕೊಡಲಾಗುತ್ತಿದೆ.
ಈ ವರ್ಷದಲ್ಲಿ ಕನ್ನಡದಲ್ಲಿ ಬಂದ ಬಯೋಗ್ರಫಿಯಲ್ಲಿ ಹೆಚ್ಚು ಮಾರಾಟಕಂಡ ಪುಸ್ತಕ ಎನ್ನುವ ಹೆಗ್ಗಳಿಕೆ ‘ನೀನೇ ರಾಜಕುಮಾರ್’ ಪುಸ್ತಕದ್ದು. ಪುನೀತ್ ಅವರ ಬಾಲ್ಯದಿಂದ ಅವರ ನಿಧನದವರೆಗೂ ಅವರ ಬದುಕನ್ನು ಲೇಖಕರು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಪುನೀತ್ ಅವರ ಸಿನಿಮಾ, ಅವರ ಸಮಾಜಸೇವೆ, ಅವರ ಜೀವನದಲ್ಲಿ ನಡೆದ ಘಟನೆಗಳು ಮತ್ತು ಪುನೀತ್ ಅವರ ಜೀವನದ ಜೊತೆಗೆ ಕನ್ನಡ ಸಿನಿಮಾ ರಂಗದ ಸಂಕ್ಷಿಪ್ತ ಚರಿತ್ರೆ ಕೂಡ ಈ ಪುಸ್ತಕದಲ್ಲಿದೆ. ಅಲ್ಲದೇ, ಅಪರೂಪದ ಫೋಟೋಗಳನ್ನು ನೋಡಬಹುದಾಗಿದೆ.
ಪುನೀತ್ ಅವರ ಸಾಕಷ್ಟು ಸಂದರ್ಶನಗಳನ್ನು ಮಾಡಿದ್ದ ಪತ್ರಕರ್ತ ಶರಣು ಹುಲ್ಲೂರು, ಪುನೀತ್ ಅವರ ಕುರಿತಾಗಿ ಅನೇಕ ಅಪರೂಪದ ಸಂಗತಿಗಳನ್ನು ಈ ಪುಸ್ತಕದಲ್ಲಿ ಬರೆಯುತ್ತಾ ಹೋಗಿದ್ದಾರೆ. ಖ್ಯಾತ ಪತ್ರಕರ್ತರಾದ ಮುರಳಿಧರ ಖಜಾನೆ ಅವರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರೆ, ಜೋಗಿ ಅವರು ಹಿನ್ನುಡಿ ಬರೆದಿದ್ದಾರೆ

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

4 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

5 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago