ವಿನುತ ಪುರುಷೋತ್ತಮ್
ಹಳೆಯ ಹಾಡು ಹಾಡು ಮತ್ತೆ
ಇಂದಿಗೆ ಹೊಸತು ನಾಳೆಗೆ ಹಳತು. ಆದರೆ ಅದು ನಿತ್ಯ ನೂತನವಾಗಬೇಕಾದರೆ ಅದರೊಳಗೊಂದು ಶಕ್ತಿ ಇರಬೇಕು, ಸ್ವಾದ ಬೇಕೇ ಬೇಕು.
ಹೀಗೊಂದು ಸ್ವಾದವನ್ನು ಬದುಕಿನ ಹಲವು ಘಟ್ಟಗಳಲ್ಲಿ ಹೀರಿಕೊಂಡಿರುತ್ತೇವೆ. ಆದರೆ ಮತ್ತೆ ಅದೇ ಸ್ವಾದ ಬೇಕು ಎಂದರೆ ಸಿಕ್ಕದು. ಸಿಕ್ಕಿದರೂ ಮೊದಲ ತೀವ್ರತೆ ಇರುವುದೇ ಎಂಬುದಕ್ಕೆ ನಿಖರ ಉತ್ತರ ಕಷ್ಟ.
ಗೆಳೆಯ, ಗೆಳತಿಯ ಕೈ ಹಿಡಿದು ಕಾಡಿನ ನಡುವಲ್ಲಿನ ಬೆಟ್ಟದ ಮೆಟ್ಟಿಲನ್ನು ಏರಿದ್ದ ಮೊದಲ ಫೀಲ್, ತಂದೆಯೊಟ್ಟಿಗೆ ಸುತ್ತಾಡಿದ ಪೇಟೆ ಬೀದಿಯ ನೆನಪು, ತಾಯಿ ಮಾಡಿಸುತ್ತಿದ್ದ ಮಜ್ಜನ, ಅಜ್ಜಿಯ ಬೆಚ್ಚಗಿನ ಪ್ರೀತಿ, ಅಚ್ಚನ ನೆನಪುಗಳೆಲ್ಲವೂ ಈಗಲೂ ಇದ್ದರೂ, ಅವೆಲ್ಲವೂ ಮತ್ತೆ ಪುನರಾವರ್ತನೆಯಾದರೂ ಮೊದ ಮೊದಲು ಸಿಕ್ಕ ಒಟ್ಟಂದ ಮತ್ತೆ ದೊರಕದು. ಅದಕ್ಕಾಗಿಯೇ ಅಲ್ಲವೇ ‘ಮೈ ಆಟೋಗ್ರಾಫ್’ ಚಿತ್ರದ ಸವಿ ಸವಿ ನೆನಪು ಸಾವಿರ ನೆನಪು ಹಾಡು ಅಷ್ಟೊಂದು ಹಿಟ್ ಆಗಿದ್ದು, ಎಲ್ಲರೂ ಗುನುಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ್ದು.
ಇದಕ್ಕಾಗಿಯೇ ಮೊದಲ ಅನುಭವಗಳ ಹಿತವಾದ ಸೆಳೆತ ಎಲ್ಲರ ಬಾಳಲ್ಲೂ ಇದ್ದೇ ಇರುತ್ತದೆ. ಅವುಗಳ ಹಂಗಿನಲ್ಲಿಯೇ ಹೊಸ ಸಂತೋಷಗಳನ್ನು ಮನುಷ್ಯ ಹುಡುಕಿ ಹೊರಡುತ್ತಾನೆ. ಇವುಗಳಿಂದಲೇ ಹೊಸ ಜೀವ ಸೆಲೆ ಸದಾ ಹರಿಯುವುದು. ಅದಕ್ಕಾಗಿಯೇ ಕವಿ ಜಿ.ಎಸ್.ಶಿವರುದ್ರಪ್ಪ ‘ಹಳೆಯ ಹಾಡು ಹಾಡು ಮತ್ತೆ ಅದನೇ ಕೇಳಿ ತಣಿಯುವೆ, ಹಳೆಯ ಹಾಡಿನಿಂದ ಹೊಸತು ಜೀವನವ ಕಟ್ಟುವೆ’ ಎಂದಿರುವುದು.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…