ವಿನುತ ಪುರುಷೋತ್ತಮ್
ಹಳೆಯ ಹಾಡು ಹಾಡು ಮತ್ತೆ
ಇಂದಿಗೆ ಹೊಸತು ನಾಳೆಗೆ ಹಳತು. ಆದರೆ ಅದು ನಿತ್ಯ ನೂತನವಾಗಬೇಕಾದರೆ ಅದರೊಳಗೊಂದು ಶಕ್ತಿ ಇರಬೇಕು, ಸ್ವಾದ ಬೇಕೇ ಬೇಕು.
ಹೀಗೊಂದು ಸ್ವಾದವನ್ನು ಬದುಕಿನ ಹಲವು ಘಟ್ಟಗಳಲ್ಲಿ ಹೀರಿಕೊಂಡಿರುತ್ತೇವೆ. ಆದರೆ ಮತ್ತೆ ಅದೇ ಸ್ವಾದ ಬೇಕು ಎಂದರೆ ಸಿಕ್ಕದು. ಸಿಕ್ಕಿದರೂ ಮೊದಲ ತೀವ್ರತೆ ಇರುವುದೇ ಎಂಬುದಕ್ಕೆ ನಿಖರ ಉತ್ತರ ಕಷ್ಟ.
ಗೆಳೆಯ, ಗೆಳತಿಯ ಕೈ ಹಿಡಿದು ಕಾಡಿನ ನಡುವಲ್ಲಿನ ಬೆಟ್ಟದ ಮೆಟ್ಟಿಲನ್ನು ಏರಿದ್ದ ಮೊದಲ ಫೀಲ್, ತಂದೆಯೊಟ್ಟಿಗೆ ಸುತ್ತಾಡಿದ ಪೇಟೆ ಬೀದಿಯ ನೆನಪು, ತಾಯಿ ಮಾಡಿಸುತ್ತಿದ್ದ ಮಜ್ಜನ, ಅಜ್ಜಿಯ ಬೆಚ್ಚಗಿನ ಪ್ರೀತಿ, ಅಚ್ಚನ ನೆನಪುಗಳೆಲ್ಲವೂ ಈಗಲೂ ಇದ್ದರೂ, ಅವೆಲ್ಲವೂ ಮತ್ತೆ ಪುನರಾವರ್ತನೆಯಾದರೂ ಮೊದ ಮೊದಲು ಸಿಕ್ಕ ಒಟ್ಟಂದ ಮತ್ತೆ ದೊರಕದು. ಅದಕ್ಕಾಗಿಯೇ ಅಲ್ಲವೇ ‘ಮೈ ಆಟೋಗ್ರಾಫ್’ ಚಿತ್ರದ ಸವಿ ಸವಿ ನೆನಪು ಸಾವಿರ ನೆನಪು ಹಾಡು ಅಷ್ಟೊಂದು ಹಿಟ್ ಆಗಿದ್ದು, ಎಲ್ಲರೂ ಗುನುಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ್ದು.
ಇದಕ್ಕಾಗಿಯೇ ಮೊದಲ ಅನುಭವಗಳ ಹಿತವಾದ ಸೆಳೆತ ಎಲ್ಲರ ಬಾಳಲ್ಲೂ ಇದ್ದೇ ಇರುತ್ತದೆ. ಅವುಗಳ ಹಂಗಿನಲ್ಲಿಯೇ ಹೊಸ ಸಂತೋಷಗಳನ್ನು ಮನುಷ್ಯ ಹುಡುಕಿ ಹೊರಡುತ್ತಾನೆ. ಇವುಗಳಿಂದಲೇ ಹೊಸ ಜೀವ ಸೆಲೆ ಸದಾ ಹರಿಯುವುದು. ಅದಕ್ಕಾಗಿಯೇ ಕವಿ ಜಿ.ಎಸ್.ಶಿವರುದ್ರಪ್ಪ ‘ಹಳೆಯ ಹಾಡು ಹಾಡು ಮತ್ತೆ ಅದನೇ ಕೇಳಿ ತಣಿಯುವೆ, ಹಳೆಯ ಹಾಡಿನಿಂದ ಹೊಸತು ಜೀವನವ ಕಟ್ಟುವೆ’ ಎಂದಿರುವುದು.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…