ಆಂದೋಲನ ಪುರವಣಿ

ಯುವ ಡಾಟ್ ಕಾಂ : ಹಳೆಯ ಹಾಡು ಹಾಡು ಮತ್ತೆ

ವಿನುತ ಪುರುಷೋತ್ತಮ್

ಹಳೆಯ ಹಾಡು ಹಾಡು ಮತ್ತೆ

ಇಂದಿಗೆ ಹೊಸತು ನಾಳೆಗೆ ಹಳತು. ಆದರೆ ಅದು ನಿತ್ಯ ನೂತನವಾಗಬೇಕಾದರೆ ಅದರೊಳಗೊಂದು ಶಕ್ತಿ ಇರಬೇಕು, ಸ್ವಾದ ಬೇಕೇ ಬೇಕು.

ಹೀಗೊಂದು ಸ್ವಾದವನ್ನು ಬದುಕಿನ ಹಲವು ಘಟ್ಟಗಳಲ್ಲಿ ಹೀರಿಕೊಂಡಿರುತ್ತೇವೆ. ಆದರೆ ಮತ್ತೆ ಅದೇ ಸ್ವಾದ ಬೇಕು ಎಂದರೆ ಸಿಕ್ಕದು. ಸಿಕ್ಕಿದರೂ ಮೊದಲ ತೀವ್ರತೆ ಇರುವುದೇ ಎಂಬುದಕ್ಕೆ ನಿಖರ ಉತ್ತರ ಕಷ್ಟ.

ಗೆಳೆಯ, ಗೆಳತಿಯ ಕೈ ಹಿಡಿದು ಕಾಡಿನ ನಡುವಲ್ಲಿನ ಬೆಟ್ಟದ ಮೆಟ್ಟಿಲನ್ನು ಏರಿದ್ದ ಮೊದಲ ಫೀಲ್, ತಂದೆಯೊಟ್ಟಿಗೆ ಸುತ್ತಾಡಿದ ಪೇಟೆ ಬೀದಿಯ ನೆನಪು, ತಾಯಿ ಮಾಡಿಸುತ್ತಿದ್ದ ಮಜ್ಜನ, ಅಜ್ಜಿಯ ಬೆಚ್ಚಗಿನ ಪ್ರೀತಿ, ಅಚ್ಚನ ನೆನಪುಗಳೆಲ್ಲವೂ ಈಗಲೂ ಇದ್ದರೂ, ಅವೆಲ್ಲವೂ ಮತ್ತೆ ಪುನರಾವರ್ತನೆಯಾದರೂ ಮೊದ ಮೊದಲು ಸಿಕ್ಕ ಒಟ್ಟಂದ ಮತ್ತೆ ದೊರಕದು. ಅದಕ್ಕಾಗಿಯೇ ಅಲ್ಲವೇ ‘ಮೈ ಆಟೋಗ್ರಾಫ್’ ಚಿತ್ರದ ಸವಿ ಸವಿ ನೆನಪು ಸಾವಿರ ನೆನಪು ಹಾಡು ಅಷ್ಟೊಂದು ಹಿಟ್ ಆಗಿದ್ದು, ಎಲ್ಲರೂ ಗುನುಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ್ದು.

ಇದಕ್ಕಾಗಿಯೇ ಮೊದಲ ಅನುಭವಗಳ ಹಿತವಾದ ಸೆಳೆತ ಎಲ್ಲರ ಬಾಳಲ್ಲೂ ಇದ್ದೇ ಇರುತ್ತದೆ. ಅವುಗಳ ಹಂಗಿನಲ್ಲಿಯೇ ಹೊಸ ಸಂತೋಷಗಳನ್ನು ಮನುಷ್ಯ ಹುಡುಕಿ ಹೊರಡುತ್ತಾನೆ. ಇವುಗಳಿಂದಲೇ ಹೊಸ ಜೀವ ಸೆಲೆ ಸದಾ ಹರಿಯುವುದು. ಅದಕ್ಕಾಗಿಯೇ ಕವಿ ಜಿ.ಎಸ್.ಶಿವರುದ್ರಪ್ಪ ‘ಹಳೆಯ ಹಾಡು ಹಾಡು ಮತ್ತೆ ಅದನೇ ಕೇಳಿ ತಣಿಯುವೆ, ಹಳೆಯ ಹಾಡಿನಿಂದ ಹೊಸತು ಜೀವನವ ಕಟ್ಟುವೆ’ ಎಂದಿರುವುದು.

 

andolanait

Recent Posts

ಟಿ20 ವಿಶ್ವಕಪ್‌ : ಇಟಲಿ ವಿರುದ್ಧ ವೆಸ್ಟ್‌ ಇಂಡೀಸ್‌ಗೆ ಸುಲಭ ಜಯ

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…

1 hour ago

ಟಿ20 ವಿಶ್ವಕಪ್ | ಭರ್ಜರಿ ಜಯ ; ಶ್ರೀಲಂಕಾ ಸೋಲಿಸಿ ಸೂಪರ್ 8ಗೆ ಲಗ್ಗೆ ಇಟ್ಟ ಜಿಂಬಾಬ್ವೆ

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…

1 hour ago

ದ್ವಿತೀಯ ಪಿಯುಸಿ | ಮೈಸೂರು ಟಾಪ್‌ 10ರೊಳಗೆ ಸ್ಥಾನ ಪಡೆಯಲು ಶ್ರಮಿಸಿ

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…

2 hours ago

ಎಐ ಭಾರತದ ಭವಿಷ್ಯ ; ನಿಯಂತ್ರಣ ನಮ್ಮ ಕೈಯಲ್ಲಿರಲಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…

2 hours ago

ಬಂಡೀಪುರ ಸಫಾರಿ ಪರ-ವಿರೋಧ ಜಟಾಪಟಿ ; ರೈತರು, ಸಫಾರಿ ಬೆಂಬಲಿತರು ಪೊಲೀಸರ ವಶಕ್ಕೆ.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…

3 hours ago

ಬೂದನೂರು ಉತ್ಸವ : ನಾಳೆಯಿಂದ ಹೆಲಿ ಟೂರಿಸಂ

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…

3 hours ago