ಆಂದೋಲನ ಪುರವಣಿ

ಯುವ ಡಾಟ್ ಕಾಂ : ಹಳೆಯ ಹಾಡು ಹಾಡು ಮತ್ತೆ

ವಿನುತ ಪುರುಷೋತ್ತಮ್

ಹಳೆಯ ಹಾಡು ಹಾಡು ಮತ್ತೆ

ಇಂದಿಗೆ ಹೊಸತು ನಾಳೆಗೆ ಹಳತು. ಆದರೆ ಅದು ನಿತ್ಯ ನೂತನವಾಗಬೇಕಾದರೆ ಅದರೊಳಗೊಂದು ಶಕ್ತಿ ಇರಬೇಕು, ಸ್ವಾದ ಬೇಕೇ ಬೇಕು.

ಹೀಗೊಂದು ಸ್ವಾದವನ್ನು ಬದುಕಿನ ಹಲವು ಘಟ್ಟಗಳಲ್ಲಿ ಹೀರಿಕೊಂಡಿರುತ್ತೇವೆ. ಆದರೆ ಮತ್ತೆ ಅದೇ ಸ್ವಾದ ಬೇಕು ಎಂದರೆ ಸಿಕ್ಕದು. ಸಿಕ್ಕಿದರೂ ಮೊದಲ ತೀವ್ರತೆ ಇರುವುದೇ ಎಂಬುದಕ್ಕೆ ನಿಖರ ಉತ್ತರ ಕಷ್ಟ.

ಗೆಳೆಯ, ಗೆಳತಿಯ ಕೈ ಹಿಡಿದು ಕಾಡಿನ ನಡುವಲ್ಲಿನ ಬೆಟ್ಟದ ಮೆಟ್ಟಿಲನ್ನು ಏರಿದ್ದ ಮೊದಲ ಫೀಲ್, ತಂದೆಯೊಟ್ಟಿಗೆ ಸುತ್ತಾಡಿದ ಪೇಟೆ ಬೀದಿಯ ನೆನಪು, ತಾಯಿ ಮಾಡಿಸುತ್ತಿದ್ದ ಮಜ್ಜನ, ಅಜ್ಜಿಯ ಬೆಚ್ಚಗಿನ ಪ್ರೀತಿ, ಅಚ್ಚನ ನೆನಪುಗಳೆಲ್ಲವೂ ಈಗಲೂ ಇದ್ದರೂ, ಅವೆಲ್ಲವೂ ಮತ್ತೆ ಪುನರಾವರ್ತನೆಯಾದರೂ ಮೊದ ಮೊದಲು ಸಿಕ್ಕ ಒಟ್ಟಂದ ಮತ್ತೆ ದೊರಕದು. ಅದಕ್ಕಾಗಿಯೇ ಅಲ್ಲವೇ ‘ಮೈ ಆಟೋಗ್ರಾಫ್’ ಚಿತ್ರದ ಸವಿ ಸವಿ ನೆನಪು ಸಾವಿರ ನೆನಪು ಹಾಡು ಅಷ್ಟೊಂದು ಹಿಟ್ ಆಗಿದ್ದು, ಎಲ್ಲರೂ ಗುನುಗಿ ತಮ್ಮ ನೆನಪುಗಳನ್ನು ಮೆಲುಕು ಹಾಕಿದ್ದು.

ಇದಕ್ಕಾಗಿಯೇ ಮೊದಲ ಅನುಭವಗಳ ಹಿತವಾದ ಸೆಳೆತ ಎಲ್ಲರ ಬಾಳಲ್ಲೂ ಇದ್ದೇ ಇರುತ್ತದೆ. ಅವುಗಳ ಹಂಗಿನಲ್ಲಿಯೇ ಹೊಸ ಸಂತೋಷಗಳನ್ನು ಮನುಷ್ಯ ಹುಡುಕಿ ಹೊರಡುತ್ತಾನೆ. ಇವುಗಳಿಂದಲೇ ಹೊಸ ಜೀವ ಸೆಲೆ ಸದಾ ಹರಿಯುವುದು. ಅದಕ್ಕಾಗಿಯೇ ಕವಿ ಜಿ.ಎಸ್.ಶಿವರುದ್ರಪ್ಪ ‘ಹಳೆಯ ಹಾಡು ಹಾಡು ಮತ್ತೆ ಅದನೇ ಕೇಳಿ ತಣಿಯುವೆ, ಹಳೆಯ ಹಾಡಿನಿಂದ ಹೊಸತು ಜೀವನವ ಕಟ್ಟುವೆ’ ಎಂದಿರುವುದು.

 

andolanait

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

1 hour ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

1 hour ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

4 hours ago