ಆಂದೋಲನ ಪುರವಣಿ

ಹಾಡುಪಾಡು | ಭೂಮಿ ಜೋರು ನಡುಗುವಾಗ ಮೆಲ್ಲನೆ ಕಂಪಿಸುವ ಕವಿತೆ

ಸ್ಮಿತಾ ಅಮೃತರಾಜ್ ಸಂಪಾಜೆ

ಒಂದು ಹಸಿ ಬೆಳಗು; ಹಾಗೇ ಆಲಾಪಿಸುತ್ತಾ ಸುರಿಯುವ ಮುಗಿಲು. ಕವಿತೆ ಸಣ್ಣಗೆ ಗುನುಗುತ್ತಾ ಎದೆಗಿಳಿಯುವ ಹೊತ್ತಿನ ನೀರವ ಮೌನವನ್ನು ಕಲಕಿ ಭೂಮಿ ಗುಡುಗಿ, ಗಡಗಡ ಅರೆಕ್ಷಣ ಅದುರಿದಾಗ ಇದು ಭೂಕಂಪನ ಅಂತ ಅಂದಾಜಿಸಿಕೊಳ್ಳಲು ಕ್ಷಣ ಕಾಲ ಹಿಡಿಯಿತು. ಎಲ್ಲವೂ ಸುಸ್ಥಿತಿಗೆ ಬಂದರೂ ಎದೆೊಂಳಗೊಂದು ಭೀತಿ ಹುಟ್ಟುಹಾಕಿ ಮತ್ತೆ ನಾನೇನೂ ಅಲುಗಿೆುೀಂ ಇಲ್ಲ ಅನ್ನುವಂತೆ ಭಯದ ಬಿತ್ತೊಂದು ಬಿತ್ತಿ, ಭೂಮಿ ಎಂದಿನಂತೆ ಮಗುಮ್ಮಾಗಿ ಕುಳಿತಿದೆ.

ಕವಿತೆೊಂಂದು ಎದೆಯ ಪಡಸಾಲೆಗೆ ಬಂದು ಮಳೆ ಹನಿ ನೋಡುತ್ತಾ ಪದ ಸಾಲಿನೊಳಗೆ ಕುಳಿತುಕೊಳ್ಳಲು ಹವಣಿಸುವ ಹೊತ್ತಿನಲ್ಲಿ ಇಂತಹ ಆತಂಕವೊಂದು ಸಂಭವಿಸಿದ ಮೇಲೆ ಕವಿತೆ ಬೆದರಿ ನಾಪತ್ತೆಯಾಗಿದೆ. ನಾನು ಕಂಗಾಲಾಗಿ ಕುಳಿತ್ತಿರುವೆ. ಕವಿತೆ ಇರದ ಜಾಗದಲ್ಲಿ ಬದುಕಲು ಸಾಧ್ಯವೇ?

ಕವಿತೆ ಎದೆಯ ದನಿಯಾದ ಹೊತ್ತಿನಿಂದ ಯಾವೊತ್ತೂ ಹೀಗೆ ಏಕಾಏಕಿ ಬಿಟ್ಟು ಹೋದ ನೆನಪೇ ಇಲ್ಲ. ಸಣ್ಣಗೆ ಮಳೆ ಹನಿಯುವಾಗ, ಹೂಬಿಸಿಲು ಟಿಸಿಲೊಡೆಯುವಾಗ ಅದಕೆ ಪದ ಹೊಸೆಯುವ ಹುಚ್ಚು ಆಸೆ. ಅಲ್ಲೆಲ್ಲೋ ಭೂಕುಸಿತ,ಭೂಕಂಪ,ಸುನಾಮಿ,ಜಲಸ್ಪೋಟ ಏನೇ ಸಂಭವಿಸಲಿ, ಪದ ಕಟ್ಟಿ ಸಾಂತ್ವಾನ ಹೇಳುತ್ತದೆ. ಭಯದ ಭಾವಕ್ಕೆ ಅಭಯ ನೀಡುವಂತೆ ಕವಿತೆ ಹೆಗಲ ತಬ್ಬುತ್ತದೆ. ಇಂತಿಪ್ಪ ಕವಿತೆ, ಭೂಮಿ ಕಂಪಿಸಿದ ಆ ಮುಂಜಾವಿನಿಂದ ತಪ್ಪಿಸಿಕೊಂಡು ಎತ್ತ ಹೋಗಿದೆ ಅಂತ ನಾನು ತಲೆಕೆಡಿಸಿಕೊಂಡು ಹೈರಾಣಾಗಿರುವೆ. ಈಗ ಪದೇ ಪದೇ ಭೂಮಿ ಕಂಪಿಸುವ ಸದ್ದು ಕೇಳಿಸುತ್ತಿದೆ. ಅಂತಹ ಅಪಾಯವೇನೂ ಇಲ್ಲ ಅಂತ ಭೂ ವಿಜ್ಞಾನಿಗಳು ಕಣಿ ಹೇಳಿದರೂ ಎದೆಯ ನಡುಕ ನಿಲ್ಲುತ್ತಿಲ್ಲ. ಭಯಪೀಡಿತರಾಗಿ ಜನರು ಸುರಕ್ಷಿತ ಸ್ಥಳಗಳಿಗೆ ಧಾವಿಸುತ್ತಿದ್ದಾರೆಯಂತೆ. ಗುರುತು ಪರಿಚಯದವರೆಲ್ಲಾ ಫೋನಾಯಿಸಿ ,ನಿಮ್ಮಲ್ಲಿ ಭೂಕಂಪನವಂತೆ,ನಮ್ಮೂರಿಗೆ ಬಂದು ಬಿಡಿ ಅಂತ ಕಾಳಜಿ ತೋರಿಸುತ್ತಿದ್ದಾರೆ. ಆಗ ನಿಜಕ್ಕೂ ಈ ತನಕ ಇಲ್ಲದ ಭಯ ಶುರುವಾಗಿ ,ಈ ನಶ್ವರ ಬದುಕಿಗೂ ಅದೆಷ್ಟು ವ್ಯಾಮೋಹ ಅನ್ನುವ ವೇದಾಂತ ಒಳ ಹೊಕ್ಕು ಮನಸು ಮ್ಲಾನವಾಗುತ್ತದೆ.
ಇನ್ನು ಕೆಲವರಂತೂ ಈ ಹೊತ್ತಿನಲ್ಲಿ ,ಅದೇನು ಬರೆದ್ರಿ? ನಿಮಗೆ ಕವಿತೆ ಬರೆಯಲು ಹೊಸತೊಂದು ವಸ್ತು ಸಿಕ್ಕಿತ್ತಲ್ಲ ಅಂತ ಹೇಳುವುದು ಯಾವ ಅರ್ಥದಲ್ಲಿ ಅಂತ ಅರ್ಥಕ್ಕೆ ದಕ್ಕದಿದ್ದಾಗ ಇಲ್ಲಿ ಎಲ್ಲವೂ ಅರ್ಥವಿಲ್ಲದ್ದು ಅಂತ ಅರ್ಥಕ್ಕೆ ದಕ್ಕದಿದ್ದಾಗ ಇಲ್ಲಿ ಎಲ್ಲವೂ ಅರ್ಥವಿಲ್ಲದ್ದು ಅಂತ ಅನ್ನಿಸೋಕೆ ಶುರುವಾಗಿ ಶೂನ್ಯ ಆವರಿಸಿಕೊಳ್ಖುತ್ತದೆ.

ಒಂದರ್ಥದಲ್ಲಿ ಅವರು ಹೇಳುವುದರಲ್ಲೂ ಹುರುಳಿದೆ ತಾನೇ? ಭೂಮಿ ಕಂಪಿಸಿತು ಅಂದ ಮಾತ್ರಕ್ಕೆ ನಾವೇನೂ ಊಟ ತಿಂಡಿ ಬಿಟ್ಟು ಕೂರುತ್ತೇವೆಯಾ? ಹೌದಲ್ಲವಾ! ನಾನೂ ಕವಿತೆ ಬರೆಯದೇ ಇರಬಲ್ಲೆನೇ? ಕವಿತೆ ಉಸುರುವ ಉಸಿರು ತಾನೇ? ಆದರೆ ನನ್ನೊಳಗಿನ ಕವಿತೆ ಕಾಣೆಯಾಗಿದೆ ಅಂತ ಹೇಗೆ ಹೇಳಲಿ?
ಮತ್ತೆ ಭೂಮಿ ಕಂಪಿಸುತ್ತಿದೆ. ನಡುರಾತ್ರೆ ಧಿಗ್ಗನೆದ್ದು ಕುಳಿತರೆ..ಪಕ್ಕಕ್ಕೆ ಕುಳಿತು ಕವಿತೆ ಸಮಾಧಾನಿಸುತ್ತಿದೆ. ಹೆದರದಿರು, ಕಂಪಿಸಿದ್ದು ಭೂಮಿಯಲ್ಲ, ನಿನ್ನ ಒಡಲು!
ನೋಡಿ..ಕವಿತೆಯ ಮಾತನ್ನ ವಿಜ್ಞಾನ ತಳ್ಳಿ ಹಾಕುತ್ತದೆ. ಬಿಡಿ, ಸತ್ಯ ಕವಿತೆಗಷ್ಟೇ ಗೊತ್ತಿರಲು ಸಾಧ್ಯ.

andolanait

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…

33 mins ago

ದ್ವಿತೀಯ ಪಿಯುಸಿ: 5, 255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…

38 mins ago

ಬೇಬಿ ಬೆಟ್ಟದ ಜಾತ್ರೆಯಲ್ಲಿ ಹಳ್ಳಿಕಾರ್ ದರ್ಬಾರ್!

ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…

43 mins ago

ಹೀಗೊಂದು ಬೆಕ್ಕಾಯಣ

ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…

48 mins ago

ಜಾತಿಬೇಲಿಯ ಕಳಚಿಬಿಡುವ ಮಾರಿಹಬ್ಬಗಳು

ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…

54 mins ago

‘ಗಾಡ್ ಫಾದರ್’ ಇಲ್ಲದೇ ಬರೆಯಲಾಗುವುದಿಲ್ಲವೇ?

ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…

58 mins ago