ಆಂದೋಲನ ಪುರವಣಿ

ಹಾಡುಪಾಡು | ಭೂಮಿ ಜೋರು ನಡುಗುವಾಗ ಮೆಲ್ಲನೆ ಕಂಪಿಸುವ ಕವಿತೆ

ಸ್ಮಿತಾ ಅಮೃತರಾಜ್ ಸಂಪಾಜೆ

ಒಂದು ಹಸಿ ಬೆಳಗು; ಹಾಗೇ ಆಲಾಪಿಸುತ್ತಾ ಸುರಿಯುವ ಮುಗಿಲು. ಕವಿತೆ ಸಣ್ಣಗೆ ಗುನುಗುತ್ತಾ ಎದೆಗಿಳಿಯುವ ಹೊತ್ತಿನ ನೀರವ ಮೌನವನ್ನು ಕಲಕಿ ಭೂಮಿ ಗುಡುಗಿ, ಗಡಗಡ ಅರೆಕ್ಷಣ ಅದುರಿದಾಗ ಇದು ಭೂಕಂಪನ ಅಂತ ಅಂದಾಜಿಸಿಕೊಳ್ಳಲು ಕ್ಷಣ ಕಾಲ ಹಿಡಿಯಿತು. ಎಲ್ಲವೂ ಸುಸ್ಥಿತಿಗೆ ಬಂದರೂ ಎದೆೊಂಳಗೊಂದು ಭೀತಿ ಹುಟ್ಟುಹಾಕಿ ಮತ್ತೆ ನಾನೇನೂ ಅಲುಗಿೆುೀಂ ಇಲ್ಲ ಅನ್ನುವಂತೆ ಭಯದ ಬಿತ್ತೊಂದು ಬಿತ್ತಿ, ಭೂಮಿ ಎಂದಿನಂತೆ ಮಗುಮ್ಮಾಗಿ ಕುಳಿತಿದೆ.

ಕವಿತೆೊಂಂದು ಎದೆಯ ಪಡಸಾಲೆಗೆ ಬಂದು ಮಳೆ ಹನಿ ನೋಡುತ್ತಾ ಪದ ಸಾಲಿನೊಳಗೆ ಕುಳಿತುಕೊಳ್ಳಲು ಹವಣಿಸುವ ಹೊತ್ತಿನಲ್ಲಿ ಇಂತಹ ಆತಂಕವೊಂದು ಸಂಭವಿಸಿದ ಮೇಲೆ ಕವಿತೆ ಬೆದರಿ ನಾಪತ್ತೆಯಾಗಿದೆ. ನಾನು ಕಂಗಾಲಾಗಿ ಕುಳಿತ್ತಿರುವೆ. ಕವಿತೆ ಇರದ ಜಾಗದಲ್ಲಿ ಬದುಕಲು ಸಾಧ್ಯವೇ?

ಕವಿತೆ ಎದೆಯ ದನಿಯಾದ ಹೊತ್ತಿನಿಂದ ಯಾವೊತ್ತೂ ಹೀಗೆ ಏಕಾಏಕಿ ಬಿಟ್ಟು ಹೋದ ನೆನಪೇ ಇಲ್ಲ. ಸಣ್ಣಗೆ ಮಳೆ ಹನಿಯುವಾಗ, ಹೂಬಿಸಿಲು ಟಿಸಿಲೊಡೆಯುವಾಗ ಅದಕೆ ಪದ ಹೊಸೆಯುವ ಹುಚ್ಚು ಆಸೆ. ಅಲ್ಲೆಲ್ಲೋ ಭೂಕುಸಿತ,ಭೂಕಂಪ,ಸುನಾಮಿ,ಜಲಸ್ಪೋಟ ಏನೇ ಸಂಭವಿಸಲಿ, ಪದ ಕಟ್ಟಿ ಸಾಂತ್ವಾನ ಹೇಳುತ್ತದೆ. ಭಯದ ಭಾವಕ್ಕೆ ಅಭಯ ನೀಡುವಂತೆ ಕವಿತೆ ಹೆಗಲ ತಬ್ಬುತ್ತದೆ. ಇಂತಿಪ್ಪ ಕವಿತೆ, ಭೂಮಿ ಕಂಪಿಸಿದ ಆ ಮುಂಜಾವಿನಿಂದ ತಪ್ಪಿಸಿಕೊಂಡು ಎತ್ತ ಹೋಗಿದೆ ಅಂತ ನಾನು ತಲೆಕೆಡಿಸಿಕೊಂಡು ಹೈರಾಣಾಗಿರುವೆ. ಈಗ ಪದೇ ಪದೇ ಭೂಮಿ ಕಂಪಿಸುವ ಸದ್ದು ಕೇಳಿಸುತ್ತಿದೆ. ಅಂತಹ ಅಪಾಯವೇನೂ ಇಲ್ಲ ಅಂತ ಭೂ ವಿಜ್ಞಾನಿಗಳು ಕಣಿ ಹೇಳಿದರೂ ಎದೆಯ ನಡುಕ ನಿಲ್ಲುತ್ತಿಲ್ಲ. ಭಯಪೀಡಿತರಾಗಿ ಜನರು ಸುರಕ್ಷಿತ ಸ್ಥಳಗಳಿಗೆ ಧಾವಿಸುತ್ತಿದ್ದಾರೆಯಂತೆ. ಗುರುತು ಪರಿಚಯದವರೆಲ್ಲಾ ಫೋನಾಯಿಸಿ ,ನಿಮ್ಮಲ್ಲಿ ಭೂಕಂಪನವಂತೆ,ನಮ್ಮೂರಿಗೆ ಬಂದು ಬಿಡಿ ಅಂತ ಕಾಳಜಿ ತೋರಿಸುತ್ತಿದ್ದಾರೆ. ಆಗ ನಿಜಕ್ಕೂ ಈ ತನಕ ಇಲ್ಲದ ಭಯ ಶುರುವಾಗಿ ,ಈ ನಶ್ವರ ಬದುಕಿಗೂ ಅದೆಷ್ಟು ವ್ಯಾಮೋಹ ಅನ್ನುವ ವೇದಾಂತ ಒಳ ಹೊಕ್ಕು ಮನಸು ಮ್ಲಾನವಾಗುತ್ತದೆ.
ಇನ್ನು ಕೆಲವರಂತೂ ಈ ಹೊತ್ತಿನಲ್ಲಿ ,ಅದೇನು ಬರೆದ್ರಿ? ನಿಮಗೆ ಕವಿತೆ ಬರೆಯಲು ಹೊಸತೊಂದು ವಸ್ತು ಸಿಕ್ಕಿತ್ತಲ್ಲ ಅಂತ ಹೇಳುವುದು ಯಾವ ಅರ್ಥದಲ್ಲಿ ಅಂತ ಅರ್ಥಕ್ಕೆ ದಕ್ಕದಿದ್ದಾಗ ಇಲ್ಲಿ ಎಲ್ಲವೂ ಅರ್ಥವಿಲ್ಲದ್ದು ಅಂತ ಅರ್ಥಕ್ಕೆ ದಕ್ಕದಿದ್ದಾಗ ಇಲ್ಲಿ ಎಲ್ಲವೂ ಅರ್ಥವಿಲ್ಲದ್ದು ಅಂತ ಅನ್ನಿಸೋಕೆ ಶುರುವಾಗಿ ಶೂನ್ಯ ಆವರಿಸಿಕೊಳ್ಖುತ್ತದೆ.

ಒಂದರ್ಥದಲ್ಲಿ ಅವರು ಹೇಳುವುದರಲ್ಲೂ ಹುರುಳಿದೆ ತಾನೇ? ಭೂಮಿ ಕಂಪಿಸಿತು ಅಂದ ಮಾತ್ರಕ್ಕೆ ನಾವೇನೂ ಊಟ ತಿಂಡಿ ಬಿಟ್ಟು ಕೂರುತ್ತೇವೆಯಾ? ಹೌದಲ್ಲವಾ! ನಾನೂ ಕವಿತೆ ಬರೆಯದೇ ಇರಬಲ್ಲೆನೇ? ಕವಿತೆ ಉಸುರುವ ಉಸಿರು ತಾನೇ? ಆದರೆ ನನ್ನೊಳಗಿನ ಕವಿತೆ ಕಾಣೆಯಾಗಿದೆ ಅಂತ ಹೇಗೆ ಹೇಳಲಿ?
ಮತ್ತೆ ಭೂಮಿ ಕಂಪಿಸುತ್ತಿದೆ. ನಡುರಾತ್ರೆ ಧಿಗ್ಗನೆದ್ದು ಕುಳಿತರೆ..ಪಕ್ಕಕ್ಕೆ ಕುಳಿತು ಕವಿತೆ ಸಮಾಧಾನಿಸುತ್ತಿದೆ. ಹೆದರದಿರು, ಕಂಪಿಸಿದ್ದು ಭೂಮಿಯಲ್ಲ, ನಿನ್ನ ಒಡಲು!
ನೋಡಿ..ಕವಿತೆಯ ಮಾತನ್ನ ವಿಜ್ಞಾನ ತಳ್ಳಿ ಹಾಕುತ್ತದೆ. ಬಿಡಿ, ಸತ್ಯ ಕವಿತೆಗಷ್ಟೇ ಗೊತ್ತಿರಲು ಸಾಧ್ಯ.

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

3 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

4 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

5 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago