ಆಂದೋಲನ ಪುರವಣಿ

ಟಗರು ಪಲ್ಯ ಮೂಲಕ ಪ್ರೇಮ್ ಮಗಳು ಬೆಳ್ಳಿತೆರೆಗೆ

ನಟ ಡಾಲಿ ಧನಂಜಯ್‌ ನಿರ್ಮಾಣದ ಹೊಸ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಮುಖ್ಯಪಾತ್ರ ನಿರ್ವಹಿಸಲಿದ್ದಾರೆ. ಆ ಮೂಲಕ ಅಮೃತಾ ಬೆಳ್ಳಿತೆರೆಗೆ ದೊಡ್ಡ ಪ್ರೊಡಕ್ಷನ್ ಹೌಸ್ ಮೂಲಕ ಎಂಟ್ರಿ ತೆಗೆದುಕೊಳ್ಳುತ್ತಿದ್ದಾರೆ.

ಚಿತ್ರದ ಮುಹೂರ್ತ ಈಗಾಗಲೇ ನಡೆದಿದ್ದು, ಇದರ ಬಗ್ಗೆ ಪ್ರೇಮ್ ಮಾತನಾಡಿದ್ದು, ಮೊದಲು ನಟನೆಗೆ ನೊ ಎನ್ನುತ್ತಿದ್ದ ಮಗಳು ಅಮೃತ ಒಮ್ಮೆಗೆ ಯಸ್ ಎಂದಳು. ಹೀಗಾಗಿ ಕತೆ ಓದಿ ಇಬ್ಬರಿಗೂ ಇಷ್ಟವಾಯ್ತು. ಡಾಲಿ ಚಿತ್ರ ನಿರ್ಮಿಸುತ್ತಿದ್ದಾನೆ ಎಂದು ಗೊತ್ತಾಗಿ ತುಂಬಾ ಖುಷಿ ಆಯ್ತು. ಇಲ್ಲಿಯವರೆಗೆ ನಮಗೆ ನೀಡಿದಂತೆ ನನ್ನ ಮಗಳಿಗೂ ಪ್ರೋತ್ಸಾಹ ನೀಡಿ ಎಂದು ಕೋರಿಕೊಂಡಿದ್ದಾರೆ.

ಟಗರು ಪಲ್ಯ
ಅಮೃತಾ ಅಭಿನಯಿಸಲಿರುವ ಮೊದಲ ಚಿತ್ರದ ಹೆಸರು ‘ಟಗರು ಪಲ್ಯ’. ಚಿತ್ರವನ್ನು ಉಮೇಶ್ ಕೆ. ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಸೆಟ್ ಬಾಯ್ ಆಗಿ ಕೆಲಸ ಆರಂಭಿಸಿ, ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿ ಈಗ ನಿರ್ದೇಶಕರಾಗಿ ಭಡ್ತಿ ಪಡೆದಿರುವುದು ಅವರ ವಿಶೇಷತೆ.

ನಾಗಭೂಷಣ್ ನಾಯಕ

‘ಇಕ್ಕಟ್’ ಖ್ಯಾತಿಯ ನಾಗಭೂಷಣ್ ಚಿತ್ರದಲ್ಲಿ ನಾಯಕರಾಗಿ ನಟಿಸಲಿದ್ದಾರೆ. ಅವರ ಊರಿನ ಹೆಸರು ಟಗರುಪುರ ಆಗಿರುವುದಕ್ಕೂ ಚಿತ್ರದ ಹೆಸರಿಗೂ ಸಂಬಂಧವಿಲ್ಲ. ಇದು ಮಂಡ್ಯದ ಹಳ್ಳಿಯಲ್ಲಿ ನಡೆಯುವ ಆಚರಣೆ ಸುತ್ತ ನಡೆಯುವ ಕಥೆ ಇದಾಗಿದೆ.

ವಾಸುಕಿ ವೈಭವ್ ಸಂಗೀತ ಸಂಯೋಜನೆ, ಎಸ್.ಕೆ. ರಾವ್ ಛಾಯಾಗ್ರಹಣ, ವಿನೋದ್ ಮಾಸ್ಟರ್ ಸಾಹಸ ಸಂಯೋಜನೆ ಚಿತ್ರಕ್ಕಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ತಾರಾ ಬಳಗದಲ್ಲಿದ್ದಾರೆ.

andolana

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

23 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

28 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

38 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago