ಆಂದೋಲನ ಪುರವಣಿ

ಟಗರು ಪಲ್ಯ ಮೂಲಕ ಪ್ರೇಮ್ ಮಗಳು ಬೆಳ್ಳಿತೆರೆಗೆ

ನಟ ಡಾಲಿ ಧನಂಜಯ್‌ ನಿರ್ಮಾಣದ ಹೊಸ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಮುಖ್ಯಪಾತ್ರ ನಿರ್ವಹಿಸಲಿದ್ದಾರೆ. ಆ ಮೂಲಕ ಅಮೃತಾ ಬೆಳ್ಳಿತೆರೆಗೆ ದೊಡ್ಡ ಪ್ರೊಡಕ್ಷನ್ ಹೌಸ್ ಮೂಲಕ ಎಂಟ್ರಿ ತೆಗೆದುಕೊಳ್ಳುತ್ತಿದ್ದಾರೆ.

ಚಿತ್ರದ ಮುಹೂರ್ತ ಈಗಾಗಲೇ ನಡೆದಿದ್ದು, ಇದರ ಬಗ್ಗೆ ಪ್ರೇಮ್ ಮಾತನಾಡಿದ್ದು, ಮೊದಲು ನಟನೆಗೆ ನೊ ಎನ್ನುತ್ತಿದ್ದ ಮಗಳು ಅಮೃತ ಒಮ್ಮೆಗೆ ಯಸ್ ಎಂದಳು. ಹೀಗಾಗಿ ಕತೆ ಓದಿ ಇಬ್ಬರಿಗೂ ಇಷ್ಟವಾಯ್ತು. ಡಾಲಿ ಚಿತ್ರ ನಿರ್ಮಿಸುತ್ತಿದ್ದಾನೆ ಎಂದು ಗೊತ್ತಾಗಿ ತುಂಬಾ ಖುಷಿ ಆಯ್ತು. ಇಲ್ಲಿಯವರೆಗೆ ನಮಗೆ ನೀಡಿದಂತೆ ನನ್ನ ಮಗಳಿಗೂ ಪ್ರೋತ್ಸಾಹ ನೀಡಿ ಎಂದು ಕೋರಿಕೊಂಡಿದ್ದಾರೆ.

ಟಗರು ಪಲ್ಯ
ಅಮೃತಾ ಅಭಿನಯಿಸಲಿರುವ ಮೊದಲ ಚಿತ್ರದ ಹೆಸರು ‘ಟಗರು ಪಲ್ಯ’. ಚಿತ್ರವನ್ನು ಉಮೇಶ್ ಕೆ. ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಸೆಟ್ ಬಾಯ್ ಆಗಿ ಕೆಲಸ ಆರಂಭಿಸಿ, ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿ ಈಗ ನಿರ್ದೇಶಕರಾಗಿ ಭಡ್ತಿ ಪಡೆದಿರುವುದು ಅವರ ವಿಶೇಷತೆ.

ನಾಗಭೂಷಣ್ ನಾಯಕ

‘ಇಕ್ಕಟ್’ ಖ್ಯಾತಿಯ ನಾಗಭೂಷಣ್ ಚಿತ್ರದಲ್ಲಿ ನಾಯಕರಾಗಿ ನಟಿಸಲಿದ್ದಾರೆ. ಅವರ ಊರಿನ ಹೆಸರು ಟಗರುಪುರ ಆಗಿರುವುದಕ್ಕೂ ಚಿತ್ರದ ಹೆಸರಿಗೂ ಸಂಬಂಧವಿಲ್ಲ. ಇದು ಮಂಡ್ಯದ ಹಳ್ಳಿಯಲ್ಲಿ ನಡೆಯುವ ಆಚರಣೆ ಸುತ್ತ ನಡೆಯುವ ಕಥೆ ಇದಾಗಿದೆ.

ವಾಸುಕಿ ವೈಭವ್ ಸಂಗೀತ ಸಂಯೋಜನೆ, ಎಸ್.ಕೆ. ರಾವ್ ಛಾಯಾಗ್ರಹಣ, ವಿನೋದ್ ಮಾಸ್ಟರ್ ಸಾಹಸ ಸಂಯೋಜನೆ ಚಿತ್ರಕ್ಕಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ತಾರಾ ಬಳಗದಲ್ಲಿದ್ದಾರೆ.

andolana

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

8 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

8 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

8 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

8 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

9 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

9 hours ago