ಆಂದೋಲನ ಪುರವಣಿ

ಟಗರು ಪಲ್ಯ ಮೂಲಕ ಪ್ರೇಮ್ ಮಗಳು ಬೆಳ್ಳಿತೆರೆಗೆ

ನಟ ಡಾಲಿ ಧನಂಜಯ್‌ ನಿರ್ಮಾಣದ ಹೊಸ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಮುಖ್ಯಪಾತ್ರ ನಿರ್ವಹಿಸಲಿದ್ದಾರೆ. ಆ ಮೂಲಕ ಅಮೃತಾ ಬೆಳ್ಳಿತೆರೆಗೆ ದೊಡ್ಡ ಪ್ರೊಡಕ್ಷನ್ ಹೌಸ್ ಮೂಲಕ ಎಂಟ್ರಿ ತೆಗೆದುಕೊಳ್ಳುತ್ತಿದ್ದಾರೆ.

ಚಿತ್ರದ ಮುಹೂರ್ತ ಈಗಾಗಲೇ ನಡೆದಿದ್ದು, ಇದರ ಬಗ್ಗೆ ಪ್ರೇಮ್ ಮಾತನಾಡಿದ್ದು, ಮೊದಲು ನಟನೆಗೆ ನೊ ಎನ್ನುತ್ತಿದ್ದ ಮಗಳು ಅಮೃತ ಒಮ್ಮೆಗೆ ಯಸ್ ಎಂದಳು. ಹೀಗಾಗಿ ಕತೆ ಓದಿ ಇಬ್ಬರಿಗೂ ಇಷ್ಟವಾಯ್ತು. ಡಾಲಿ ಚಿತ್ರ ನಿರ್ಮಿಸುತ್ತಿದ್ದಾನೆ ಎಂದು ಗೊತ್ತಾಗಿ ತುಂಬಾ ಖುಷಿ ಆಯ್ತು. ಇಲ್ಲಿಯವರೆಗೆ ನಮಗೆ ನೀಡಿದಂತೆ ನನ್ನ ಮಗಳಿಗೂ ಪ್ರೋತ್ಸಾಹ ನೀಡಿ ಎಂದು ಕೋರಿಕೊಂಡಿದ್ದಾರೆ.

ಟಗರು ಪಲ್ಯ
ಅಮೃತಾ ಅಭಿನಯಿಸಲಿರುವ ಮೊದಲ ಚಿತ್ರದ ಹೆಸರು ‘ಟಗರು ಪಲ್ಯ’. ಚಿತ್ರವನ್ನು ಉಮೇಶ್ ಕೆ. ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಸೆಟ್ ಬಾಯ್ ಆಗಿ ಕೆಲಸ ಆರಂಭಿಸಿ, ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿ ಈಗ ನಿರ್ದೇಶಕರಾಗಿ ಭಡ್ತಿ ಪಡೆದಿರುವುದು ಅವರ ವಿಶೇಷತೆ.

ನಾಗಭೂಷಣ್ ನಾಯಕ

‘ಇಕ್ಕಟ್’ ಖ್ಯಾತಿಯ ನಾಗಭೂಷಣ್ ಚಿತ್ರದಲ್ಲಿ ನಾಯಕರಾಗಿ ನಟಿಸಲಿದ್ದಾರೆ. ಅವರ ಊರಿನ ಹೆಸರು ಟಗರುಪುರ ಆಗಿರುವುದಕ್ಕೂ ಚಿತ್ರದ ಹೆಸರಿಗೂ ಸಂಬಂಧವಿಲ್ಲ. ಇದು ಮಂಡ್ಯದ ಹಳ್ಳಿಯಲ್ಲಿ ನಡೆಯುವ ಆಚರಣೆ ಸುತ್ತ ನಡೆಯುವ ಕಥೆ ಇದಾಗಿದೆ.

ವಾಸುಕಿ ವೈಭವ್ ಸಂಗೀತ ಸಂಯೋಜನೆ, ಎಸ್.ಕೆ. ರಾವ್ ಛಾಯಾಗ್ರಹಣ, ವಿನೋದ್ ಮಾಸ್ಟರ್ ಸಾಹಸ ಸಂಯೋಜನೆ ಚಿತ್ರಕ್ಕಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ತಾರಾ ಬಳಗದಲ್ಲಿದ್ದಾರೆ.

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

36 mins ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

38 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

41 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

42 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

47 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

52 mins ago