ಆಂದೋಲನ ಪುರವಣಿ

ಗರಿ ಬಿಚ್ಚಿಕೊಳ್ಳುತ್ತಿದೆ ಮೈಸೂರು

ರಾಮ್‌ಸನ್ಸ್ ದಸರಾ ಬೊಂಬೆ ಪ್ರದರ್ಶನಕ್ಕೆ ಚಾಲನೆ; ವರ್ಷ ಪೂರ್ತಿ ಪ್ರದರ್ಶನ, ಮಾರಾಟ

ದಸರಾ ಹತ್ತಿರವಾಗುತ್ತಿದ್ದಂತೆ ಮೈಸೂರು ಗರಿ ಬಿಚ್ಚಿಕೊಳ್ಳುತ್ತಿದೆ. ಎಲ್ಲ ಬಗೆಯ ಚಟುವಟಿಕೆಗಳು ಆರಂಭವಾಗುತ್ತಿದ್ದು, ಕಲಾ ರಸಿಕರು, ಪ್ರವಾಸಿಗರನ್ನು ತನ್ನತ್ತ ಸೆಳೆದುಕೊಳ್ಳುತ್ತಿವೆ. ಇದರ ಭಾಗವಾಗಿ ನಜರ್‌ಬಾದ್‌ನ ಆಮ್ರಪಾಲಿ ಮಳಿಗೆಯ ಮೇಲಿರುವ ರಾಮ್‌ಸನ್ಸ್ ಬೊಂಬೆ ಮನೆಯಲ್ಲಿ ದಸರಾ ಬೊಂಬೆ ಪ್ರದರ್ಶನಕ್ಕೆ ಚಾಲನೆ ಸಿಕ್ಕಿದ್ದು, ವರ್ಷ ಪೂರ್ತಿ ವೈವಿಧ್ಯಮಯ ಬೊಂಬೆಗಳ ಪ್ರದರ್ಶನ ಮತ್ತು ಮಾರಾಟ ಇರಲಿದೆ.

ಶರನ್ನವರಾತ್ರಿ ಆರಂಭಕ್ಕೆ ೧೮ ದಿನಗಳು ಇರುವಂತೆಯೇ ೧೮ನೇ ವರ್ಷದ ಬೊಂಬೆ ಪ್ರದರ್ಶನಕ್ಕೆ ಗುರುವಾರ ಚಾಲನೆ ಸಿಕ್ಕಿದ್ದು, ಕಲಾ ವೈವಿಧ್ಯವೇ ಇಲ್ಲಿ ಅನಾವರಣಗೊಳ್ಳಲಿದೆ. ಬೊಂಬೆಗಳ ನಗರಿ ಚೆನ್ನಪಟ್ಟಣ, ಕಿನ್ಹಾಳ, ಬೆಂಗಳೂರು, ಪಾಲಿಮಾರುಗಳಲ್ಲಿ ತಯಾರಾದ ಬೊಂಬೆಗಳ ಜೊತೆಗೆ ತಮಿಳುನಾಡು, ತೆಲಂಗಾಣ, ರಾಜಸ್ಥಾನ, ಆಂಧ್ರಪ್ರದೇಶ, ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಸೇರಿ ದೇಶಾದ್ಯಂತ ತಯಾರಾದ ಬೊಂಬೆಗಳಿಗೂ ಇಲ್ಲಿ ಸ್ಥಾನ ಇದ್ದು, ೫೦ ರೂ. ನಿಂದ ಆರಂಭವಾಗಿ ಲಕ್ಷ ರೂ. ವರೆಗೂ ಬೆಲೆ ಇರುವ ಬೊಂಬೆಗಳು ಇಲ್ಲಿರಲಿವೆ.

ರಾಮಾಯಣ ದರ್ಶನ

ಈ ಬಾರಿ ೨೪ ಅಂಶಗಳನ್ನು ಆಧರಿಸಿದ ಬೊಂಬೆಗಳ ವಿಶೇಷತೆ ಇದ್ದು, ರಾಮಾಯಣ, ಮಹಾಭಾರತದ ವಿವಿಧ ಘಟ್ಟಗಳ ಕಥೆಗಳನ್ನು ಬೊಂಬೆಗಳ ಮೂಲಕವೇ ಹೇಳಲಾಗಿದೆ. ಪುತ್ರಕಾಮೇಷ್ಠಿ ಯಾಗ, ರಾಮ ಜನನ, ತಾಟಕಾ ಸಂಹಾರ, ಮಾರೀಚ-ಸುಬಾಹು ಪಲಾಯನ, ಅಹಲ್ಯ ಉದ್ಧಾರ, ಸೀತಾ ಸ್ವಯಂವರ, ಭರತನಿಗೆ ಪಾದುಕಾ ಪ್ರದಾನ, ವನವಾಸ, ಸೀತಾ ಅಗ್ನಿ ಪ್ರವೇಶ ಹೀಗೆ ೨೪ ವರ್ಗಗಳಲ್ಲಿ ಸಂಪೂರ್ಣ ರಾಮಾಯಣ ತಿಳಿಸುವ ಗೊಂಬೆಗಳು ಪ್ರಮುಖ ಆಕರ್ಷಣೆಯ ಕೇಂದ್ರವಾಗಿವೆ.

ದಸರಾ ದರ್ಶನ

ಬೊಂಬೆಗಳ ಮೂಲಕವೇ ದಸರಾ ಸಂದರ್ಭದಲ್ಲಿ ಮೈಸೂರಿನ ಅಂದವನ್ನು ಹೆಚ್ಚಿಸುವ ಚೆಂದದ ನೋಟಗಳು, ರಾಜ ಮನೆತನದ ಸೊಬಗು, ಅಂಬಾರಿ ಆನೆ, ಅರಮನೆ ಅಂದ ಹೀಗೆ ಎಲ್ಲ ಬಗೆಯ ನೋಟಗಳನ್ನು ಗೊಂಬೆಗಳ ಮೂಲಕವೇ ಒದಗಿಸಿಕೊಡುವ ಪ್ರಯತ್ನವನ್ನೂ ಇಲ್ಲಿ ಕಾಣಬಹುದಾಗಿದೆ.

ಇದರೊಂದಿಗೆ ಚಾಮುಂಡಿಯ ಉತ್ಸವ ಮೂರ್ತಿ, ಕೇರಳದ ಚಂಡೆಮೇಳ, ನಾಟ್ಯ ಮಯೂರಿ, ವಾದಿ ರಾಜ ತೀರ್ಥರು, ಶಿರಸಿ ಮಾರಿಕಾಂಬಾ, ಗುರುರಾಯ, ಸಾಯಿ ಬಾಬಾ ಅವರ ಜೀವನ ಚರಿತ್ರೆ, ಆನೆ, ಕುದುರೆ, ಸಿಂಹ, ಹುಲಿಗಳ ಬೊಂಬೆಗಳು ಆಕರ್ಷಣೆಯ ಕೇಂದ್ರವಾಗಿವೆ.

ಸೆ. 8ರಂದು ಉದ್ಘಾಟನೆಯಾಗಿರುವ ರಾಮ್‌ಸನ್ಸ್ ಬೊಂಬೆಗಳ ಪ್ರದರ್ಶನವು ಬೆಳಿಗ್ಗೆ 9 ರಿಂದ ಸಂಜೆ 7 ಗಂಟೆಯ ವರೆಗೆ ವರ್ಷ ಪೂರ್ತಿ ಇರಲಿದೆ.

ಹೆಚ್ಚಿನ ಮಾಹಿತಿಗಾಗಿ ರಘು ಧಮೇಂದ್ರ ದೂ. ಸಂ. 9880111625 ಅನ್ನು ಸಂಪರ್ಕಿಸಬಹುದು.

andolana

Recent Posts

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

11 mins ago

ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

22 mins ago

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…

58 mins ago

ಮಹಿಳೆಯರ ಮುಂದೆ ಮೂತ್ರ ವಿಸರ್ಜಿಸಿದ ಶಿಕ್ಷಕ: ಪ್ರಶ್ನಿಸಿದ ವ್ಯಕ್ತಿಗೆ ಚಾಕು ಇರಿತ

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ…

1 hour ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…

3 hours ago

ಓದುಗರ ಪತ್ರ: ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಲಿ

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…

3 hours ago