ನಿರ್ಮಾಪಕಿಯಾದ ತಾರೆಯರು
ತಾರೆಯರು ನಿರ್ಮಾಪಕಿಯಾಗುತ್ತಿರುವುದು ಹೊಸದೇನೂ ಅಲ್ಲ. ಅದರಲ್ಲೂ ಜನಪ್ರಿಯ ನಟಿಯರು. ನಲವತ್ತರ ದಶಕದಲ್ಲಿ ಬಹುದೊಡ್ಡ ಹೆಸರಾಗಿದ್ದ ತಾರೆ ಎಂ.ವಿ.ರಾಜಮ್ಮ, ? ರಾಧಾರಮಣ’ ಚಿತ್ರದ ಮೂಲಕ ಮೊದಲ ನಿರ್ಮಾಪಕಿ ಎನಿಸಿಕೊಂಡರು. ನಂತರ ಹರಿಣಿ, ಪಂಢರಿಬಾಯಿ, ಜಯಮಾಲ, ಪ್ರಮೀಳಾ ಜೋಷಾಯಿ ಮೊದಲಾದವರು ಈ ಸಾಲಿಗೆ ಸೇರಿಕೊಂಡರು.
ಹೊಸ ಸಹಸ್ರಮಾನದ ಆರಂಭದಲ್ಲಿ ಬಂದು ಜನಪ್ರಿಯರಾದ ತಾರೆಯರಲ್ಲಿ ರಕ್ಷಿತಾ, ರಾಧಿಕಾ ಮತ್ತು ರಮ್ಯಾ ಮುಂದಿನ ಸಾಲಿನಲ್ಲಿದ್ದಾರೆ. ಪುನೀತ್ರಾಜಕುಮಾರ್ ಯುವನಟರಾಗಿ ಬಂದ ಮೊದಲ ಚಿತ್ರ ‘ಅಪ್ಪು’ ಮೂಲಕ ರಕ್ಷಿತಾ ಬೆಳ್ಳಿತೆರೆಗೆ ಕಾಲಿಟ್ಟರೆ, ಎರಡನೇ ಚಿತ್ರ ‘ಅಭಿ’ಯೊಂದಿಗೆ ರಮ್ಯಾ ಆಗಮನ. ಅದೇ ವೇಳೆ ಸೃಜನ್ ಲೋಕೇಶ್ ಅವರೊಂದಿಗೆ ನಟಿಸಿದ ‘ನೀಲಮೇಘಶ್ಯಾಮ’ ಚಿತ್ರಕ್ಕಾಗಿ ಮೊದಲು ಬಣ್ಣ ಹಚ್ಚಿದ್ದರೂ, ತಾರೆ ರಾಧಿಕಾ ನಟಿಸಿ ತೆರೆಕಂಡ ಮೊದಲ ಚಿತ್ರ ವಿಜಯರಾಘವೇಂದ್ರ ಅವರೊಂದಿಗೆ ನಟಿಸಿದ ‘ನಿನಗಾಗಿ’.
ರಕ್ಷಿತಾ, ರಾಧಿಕಾ, ರಮ್ಯ
ಈ ಮೂವರೂ ಪೈಪೋಟಿಯಲ್ಲೆಂಬಂತೆ ನಟಿಸಿದರು. ಜನಪ್ರೀತಿ ಗಳಿಸಿದರು. ಕನ್ನಡ ಮಾತ್ರವಲ್ಲದೆ, ಇತರ ಸೋದರ ಭಾಷೆಗಳಲ್ಲೂ ನಟಿಸಿದ ಈ ಮೂವರ ಚಿತ್ರಗಳ ಸಂಖ್ಯೆ ಮೂವತ್ತರ ಆಚೆ ಇದೆ. ಚಿತ್ರೋದ್ಯಮದಲ್ಲಿ ಆರೋಗ್ಯಕರ ಸ್ಪರ್ಧೆಯೊಂದಿಗೆ ಸಾಗಿದ ಇವರಲ್ಲಿ ರಕ್ಷಿತಾ ಮತ್ತು ರಾಧಿಕಾ ವಿವಾಹಾನಂತರ ನಟನೆಯ ಜೊತೆಗೆ ನಿರ್ಮಾಣದತ್ತಲೂ ಹೊರಳಿದರು. ರಾಧಿಕಾ ಮತ್ತು ರಮ್ಯಾ, ಕವಿತಾ ಲಂಕೇಶ್ ಅವರ ‘ತನನಂ, ತನನಂ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದರು. ರಾಧಿಕಾ ನಿರ್ಮಿಸಿದ ‘ಲಕ್ಕಿ’ ಚಿತ್ರದಲ್ಲಿ ರಮ್ಯಾ ನಟಿಸಿದರು, ಯಶ್ ಜೋಡಿಯಾಗಿ.
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ರಮ್ಯಾ, ನಂತರ ಬಣ್ಣದ ಬದುಕಿನಿಂದ ದೂರವಿದ್ದರು. ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದರೂ, ಅವರ ಅಭಿಮಾನಿಗಳು ‘ಮತ್ತೆ ಚಿತ್ರರಂಗಕ್ಕೆ ಯಾವಾಗ ಮರಳುತ್ತೀರಿ’ ಎನ್ನುವ ಪ್ರಶ್ನೆಗೆ ಮೊನ್ನೆ ಗಣೇಶ ಚತುರ್ಥಿಯಂದು ಉತ್ತರಿಸಿದ್ದಾರೆ. ಮತ್ತೆ ತಾವು ಚಿತ್ರರಂಗಕ್ಕೆ ಹಿಂತಿರುಗುವುದನ್ನು ಖಚಿತಪಡಿಸಿದ್ದಾರೆ. ಅವರು ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಮರಳಿ ಬರುತ್ತಿದ್ದಾರೆ. ಅದು ಅವರ ನಿರ್ಮಾಣ ಸಂಸ್ಥೆ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ. ಚಿತ್ರಗಳ ಜೊತೆ, ಒಟಿಟಿ ತಾಣಗಳಿಗಾಗಿ, ಸಿನಿಮಾ ಹಾಗೂ ವೆಬ್ ಸರಣಿಗಳನ್ನೂ ಈ ಸಂಸ್ಥೆ ನಿರ್ಮಿಸಲಿದೆಯಂತೆ. ಆಪಲ್ ಬಾಕ್ಸ್ನ ಜಾಲತಾಣದ ಮೂಲಕ ಚಿತ್ರದ ವಿವರಗಳನ್ನು ಮುಂದೆ ತಿಳಿಸುವುದಾಗಿ ಅವರು ಹೇಳಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…