ಆಂದೋಲನ ಪುರವಣಿ

ಸಿನಿಮಾ ಉತ್ತರಕಾಂಡದ ಮೂಲಕ ರಮ್ಯಾ ಕಂಬ್ಯಾಕ್

ತಮ್ಮ ಹೊಸ ಚಿತ್ರ, ತಂಡದ ಕುರಿತು ನಿರ್ದೇಶಕ ರೋಹಿತ್ ಪದಕಿ ಮಾತುಕತೆ

-ಬಿ.ಎನ್.ಧನಂಜಯಗೌಡ

‘ರತ್ನನ್‌ಪ್ರಪಂಚ’ ಮೂಲಕ ಭರವಸೆ ಮೂಡಿಸಿರುವ ನಿರ್ದೇಶಕ ರೋಹಿತ್ ಪದಕಿ ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ ‘ಉತ್ತರಕಾಂಡ’ದ ನಾಯಕತ್ವ ವಹಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಿನಿಮಾದ ಮೂಲಕ ‘ಸ್ಯಾಂಡಲ್‌ವುಡ್ ಕ್ವೀನ್’ ರಮ್ಯಾ ಬೆಳ್ಳಿತೆರೆಗೆ ಕಮ್ ಬ್ಯಾಕ್ ಆಗುತ್ತಿರುವುದು. ನಟ ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ ಚಿತ್ರದ ಮಹೂರ್ತ ಭಾನುವಾರ ನೆರವೇರಿದ್ದು, ಸಿನಿಮಾ ಬಗ್ಗೆ ನಿರ್ದೇಶಕ ರೋಹಿತ್ ಪದಕಿ ಅವರು ಮಾತನಾಡಿದ್ದಾರೆ.

 ರಮ್ಯಾ ಅವರನ್ನು ಬೆಳ್ಳಿತೆರೆಗೆ ವಾಪಸ್ ಕರೆತರವಲ್ಲಿ ಹಿಂತಿರುಗಿಸುವಲ್ಲಿ ಯಶಸ್ವಿಯಾಗಿದ್ದೀರಿ, ಇದರ ಹಿಂದಿನ ಗುಟ್ಟೇನು?
‘ರತ್ನನ್ ಪ್ರಪಂಚ’ ಚಿತ್ರಕ್ಕೆ ನಾಯಕಿಯಾಗಲು ರಮ್ಯಾ ಅವರನ್ನು ಕೇಳಲಾಗಿತ್ತು. ಆದರೆ ಕೆಲವಾರು ಕಾರಣಗಳಿಂದ ಅವರು ಆಗ ಒಪ್ಪಿರಲಿಲ್ಲ. ಈಗ ಅವರು ಬೆಳ್ಳಿತೆರೆಗೆ ಹಿಂತಿರುಗಲು ಮನಸ್ಸು ಮಾಡಿದ್ದರು. ಅಲ್ಲದೇ, ಸಿನಿಮಾದ ಕಥೆ ಮತ್ತು ಅದರಲ್ಲಿನ ಅವರ ಪಾತ್ರ ಕೇಳಿ ನಟನೆಗೆ ಒಪ್ಪಿಕೊಂಡರು. ಈ ವಿಷಯವಾಗಿ ನನಗಂತೂ ತುಂಬಾ ಖುಷಿಯಾಗಿದೆ.

ಎಸ್.ಎಲ್. ಭೈರಪ್ಪ ಅವರ ‘ನಿರಾಕರಣೆ’ ಪ್ರೇರಣೆಯಿಂದ ರತ್ನನ್ ಪ್ರಪಂಚ ಆಯ್ತು, ‘ಉತ್ತರಕಾಂಡ’ವೂ ಅವರದ್ದೇ ಕಥೆಯಾ?
ಹೆಸರಷ್ಟೇ ‘ಉತ್ತರಕಾಂಡ’. ಕಥೆ ಮಾತ್ರ ಬೇರೆಯದ್ದು. ಉತ್ತರ ಕರ್ನಾಟಕದ ಅದ್ಬುತ ಬದುಕಿನ ನಡುವೆ ನಡೆಯುವ ಕಥೆ. ಹಾಗಾಗಿ, ‘ಉತ್ತರಕಾಂಡ’ ಎಂಬ ಹೆಸರು ಇಡಲಾಗಿದೆ. ಇದೊಂದು ಮಾಸ್ ಮನರಂಜನೆಯ ಸಿನಿಮಾ ಆಗಲಿದೆ. ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಲ್ಲಿ, ಆ ಭಾಷೆಯಲ್ಲಿಯೇ ಇರಲಿದೆ. ಆ ಭಾಗದಲ್ಲಿಯೇ ಚಿತ್ರೀಕರಣವಾಗಲಿದೆ.

ಕಥೆ ಬಗ್ಗೆ ಏನಾದ್ರೂ ಹೇಳ್ಬಹುದಾ? ರಮ್ಯಾ ಪಾತ್ರದ ವಿಶೇಷವೇನು?
ಇದೊಂದು ಗ್ಯಾಂಗ್‌ಸ್ಟರ್ ಡ್ರಾಮಾ. ಈ ಚಿತ್ರ ಮನುಷ್ಯನ ವಿಲಕ್ಷಣ ಮನಸ್ಸಿನ ಹೋರಾಟವನ್ನು ತೆರೆದಿಡುತ್ತದೆ. ಸರಿ-ತಪ್ಪುಗಳ ಸಿದ್ಧಾಂತ, ಅಹಂಕಾರಗಳ ಗುದ್ದಾಟ ಹೀಗೆ… ವಿಭಿನ್ನ ಮತ್ತು ಪ್ರಯೋಗಾತ್ಮಕವಾಗಿ ಸಿನಿಮಾ ಮಾಡಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ರಮ್ಯಾ ಕಾಣಿಸಿಕೊಳ್ಳಲಿದ್ದಾರೆ ಇದಕ್ಕಾಗಿ, ಭಾಷೆ, ಉಡುಗೆ-ತೊಡುಗೆ ಎಲ್ಲದರ ಮೇಲೆ ಗಂಭೀರವಾಗಿ ರಮ್ಯಾ ಅವರು ಕಸರತ್ತು ನಡೆಸುತ್ತಿದ್ದಾರೆ.

ಕಥೆಯ ತಯಾರಿ ಹೇಗಿತ್ತು? ಚಿತ್ರೀಕರಣ ಸಿದ್ಧತೆ ಹೇಗಿರಲಿದೆ?
‘ರತ್ನನ್ ಪ್ರಪಂಚ’ ಸಿನಿಮಾದ ನಂತರ ‘ಉತ್ತರಕಾಂಡ’ ಕಥೆ ತಯಾರಿಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದೆ. ಉತ್ತರ ಕರ್ನಾಟಕದ ಬದುಕಿನ ಕಥೆ ಹೇಳುತ್ತಿರುವುದು ನನಗೆ ದೊಡ್ಡ ಸವಾಲು. ಈಗಾಗಲೇ ಚಿತ್ರದ ಮೂಹೂರ್ತವಾಗಿದ್ದು, ಜನವರಿಯಿಂದ ಚಿತ್ರೀಕರಣ ಆರಂಭವಾಗಲಿದೆ.

‘ಉತ್ತರಕಾಂಡ’ ತಂಡ, ತಾರಾಬಳಗದಲ್ಲಿ ಯಾರೆಲ್ಲ ಇದ್ದಾರೆ?
ಡಾಲಿ ಧನಂಜಯ ಸಕ್ಕತ್ ಸುಕ್ಕಾ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಇದೊಂದು ಮಲ್ಟಿಸ್ಟಾರ್ ಸಿನಿಮಾ ಆಗುತ್ತಿರುವುದರಿಂದ ಉಳಿದ ಕಲಾವಿದರ ಬಗ್ಗೆ ಸದ್ಯಕ್ಕೆ ಹೇಳುವುದಿಲ್ಲ. ದೊಡ್ಡ ತಾರಾಬಳಗ ಮತ್ತು ದೊಡ್ಡ ಬಜೆಟ್ ಸಿನಿಮಾ ಇದಾಗಿದೆ. ಈ ಚಿತ್ರವನ್ನು ವಿಜಯ್ ಕಿರಂಗದೂರು ಅರ್ಪಿಸುತ್ತಿದ್ದು, ಕೆ.ಆರ್.ಜಿ ಸಂಸ್ಥೆ ಯಡಿ ಕಾರ್ತಿಕ್ ಮತ್ತು ಯೋಗಿ ಜಿ.ರಾಜ್ ನಿರ್ಮಿಸುತ್ತಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ, ಅರವಿಂದ ಕಶ್ಯಪ್ ಕ್ಯಾಮರಾ ನಿರ್ವಹಣೆ ಇರಲಿದೆ.

andolana

Recent Posts

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

23 mins ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

38 mins ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

52 mins ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

2 hours ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

2 hours ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

2 hours ago