ಆಂದೋಲನ ಪುರವಣಿ

ಈ ವಾರ ಮೂರು ಚಿತ್ರಗಳ ಮೆರವಣಿಗೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್, ಅದ್ದೂರಿ ನಿರ್ಮಾಣದ, ಹೊಸ ಪ್ರತಿಭೆಯನ್ನು ಪರಿಚಯಿಸಲಿರುವ ‘ರೇಮೋ’, ನೈಜ ಘಟನೆ ಆಧರಿಸಿದ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎನ್ನುವ ಮೂರು ಚಿತ್ರಗಳು ತೆರೆಗೆ ಬರಲು ಸಜ್ಜಾಗಿವೆ.

ತ್ರಿಬಲ್ ರೈಡಿಂಗ್
ಕೃಪಾಳು ಎಂಟರ್‌ಟೈನರ್ಸ್ ಲಾಂಛನದಲ್ಲಿ ರಾಮಗೋಪಾಲ್ ವೈ.ಎಂ. ನಿರ್ಮಿಸಿರುವ ಚಿತ್ರ ‘ತ್ರಿಬಲ್ ರೈಡಿಂಗ್’. ಮಹೇಶ್ ಗೌಡ ನಿರ್ದೇಶನದ ಈ ಚಿತ್ರದ ಪ್ರಧಾನ ಪಾತ್ರದಲ್ಲಿ ಗಣೇಶ್ ಅವರಿದ್ದು, ಅವರೊಂದಿಗೆ ಅದಿತಿ ಪ್ರಭುದೇವ, ಮೇಘ ಶೆಟ್ಟಿ ಮತ್ತು ರಚನಾ ಇಂದರ್ ತ್ರಿಬಲ್ ರೈಡಿಂಗ್ ಹೊರಟಿದ್ದಾರೆ. ಸಾಧು ಕೋಕಿಲ, ರವಿಶಂಕರ್, ಶರತ್ ಲೋಹಿತಾಶ್ವ, ರಂಗಾಯಣ ರಘು, ಅಚ್ಚುತ್ ಕುಮಾರ್, ಶೋಭರಾಜ್, ಕುರಿ ಪ್ರತಾಪ್, ಅರವಿಂದ ಬೋಳಾರ್, ರವಿಶಂಕರ್ ಗೌಡ, ಚಿತ್ಕಲ ಬಿರಾದಾರ್, ರೇಣುಕಾ ಚಿತ್ರದಲ್ಲಿದ್ದಾರೆ. ಜೈ ಆನಂದ್ ಛಾಾಂಗ್ರಹಣ, ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ, ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

‘ರೇಮೋ’
ಜಾಂದಿತ್ಯ ಫಿಲಂಸ್ ಲಾಂಛನದಲ್ಲಿ ಸಿ.ಆರ್.ಮನೋಹರ್ ನಿರ್ಮಿಸಿರುವ ಚಿತ್ರ ‘ರೇಮೋ’. ಪವನ್ ಒಡೆಯರ್ ನಿರ್ದೇಶನದ ಈ ಚಿತ್ರದ ಕೇಂದ್ರಪಾತ್ರಧಾರಿ ಇಶಾನ್. ಅವರ ಜೋಡಿಯಾಗಿ ಅಶಿಕಾ ರಂಗನಾಥ್ ನಟಿಸಿದ್ದು, ರಾಜೇಶ್ ನಟರಂಗ, ಮಧು ಶಾ, ಶರತ್‌ಕುಮಾರ್ ಇತರ ಪ್ರಮುಖ ಪಾತ್ರಧಾರಿಗಳು. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ವೈದಿ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಪಿ. ಗುಣಶೇಖರನ್ ಕಲಾ ನಿರ್ದೇಶನ, ಇವ್ರಾನ್ ಸರ್ದಾರಿಯಾ ನೃತ್ಯ ಸಂಯೋಜನೆ ಚಿತ್ರಕ್ಕಿದೆ.

‘ಸದ್ದು ವಿಚಾರಣೆ ನಡೆಯುತ್ತಿದೆ’
ಎಂ.ಎಂ.ಸಿನಿವಾಸ್ ಲಾಂಛನದಲ್ಲಿ ಸುರಭಿ ಲಕ್ಷ್ಮಣ್ ನಿರ್ಮಿಸಿರುವ ಚಿತ್ರ ‘ಸದ್ದು ವಿಚಾರಣೆ ನಡೆುುಂತ್ತಿದೆ’. ಭಾಸ್ಕರ್ ಆರ್. ನೀನಾಸಂ ಚಿತ್ರಕಥೆ, ನಿರ್ದೇಶನದ ಈ ಚಿತ್ರದ ಮುಖ್ಯಪಾತ್ರಗಳಲ್ಲಿ ಪಾವನ ಗೌಡ, ರಾಕೇಶ್ ಮಯ್ಯ, ಮಧುನಂದನ್ ಇದ್ದು, ಅವರೊಂದಿಗೆ ಅಚ್ಯುತ್ ಕುಮಾರ್, ಕೃಷ್ಣ ಹೆಬ್ಬಾಳೆ, ರಾಘು ಶಿವಮೊಗ್ಗ, ಜಹಾಂಗೀರ್, ರೋಹಿಣಿ ರಘುನಂದನ್ ತಾರಾಬಳಗದಲ್ಲಿದ್ದಾರೆ.

ಅಶ್ವಿನಿ ಕೆ.ಎನ್. ಕಥೆ, ದಕ್ಷಿಣ ಮೂರ್ತಿ ಸಂಭಾಷಣೆ, ಪ್ರಮೋದ್ ಮರವಂತೆ ಗೀತರಚನೆ, ಕಿನ್ನಾಳ್ ರಾಜ್ ಛಯಾಗ್ರಹಣ, ಸಚಿನ್ ಬಸ್ರೂರು ಸಂಗೀತ ಸಂಯೋಜನೆ, ಶಶಿಧರ್ ಪಿ. ಸಂಕಲನ, ಗಂಗಮ್ ರಾಜ್ ನೃತ್ಯ ಸಂಯೋ ಜನೆ ಚಿತ್ರಕ್ಕಿದೆ.

 

 

andolana

Recent Posts

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

1 hour ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

1 hour ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

1 hour ago

‘ಮಾದಕ ವಸ್ತು ಮಾರಾಟ ಮಾಡಿದರೆ ಕ್ರಮ’

ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್‌ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…

1 hour ago

ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯವರ ಸರಸ ಸಲ್ಲಾಪ

ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…

1 hour ago

ಮಾನಂದವಾಡಿ ರಸ್ತೆಯಲ್ಲಿ ಅಪಘಾತಕ್ಕೆ ಬೀಳಬೇಕಿದೆ ಬ್ರೇಕ್…

ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್‌ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…

2 hours ago