ಆಂದೋಲನ ಪುರವಣಿ

ಈ ವಾರ ಮೂರು ಚಿತ್ರಗಳ ಮೆರವಣಿಗೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್, ಅದ್ದೂರಿ ನಿರ್ಮಾಣದ, ಹೊಸ ಪ್ರತಿಭೆಯನ್ನು ಪರಿಚಯಿಸಲಿರುವ ‘ರೇಮೋ’, ನೈಜ ಘಟನೆ ಆಧರಿಸಿದ ‘ಸದ್ದು ವಿಚಾರಣೆ ನಡೆಯುತ್ತಿದೆ’ ಎನ್ನುವ ಮೂರು ಚಿತ್ರಗಳು ತೆರೆಗೆ ಬರಲು ಸಜ್ಜಾಗಿವೆ.

ತ್ರಿಬಲ್ ರೈಡಿಂಗ್
ಕೃಪಾಳು ಎಂಟರ್‌ಟೈನರ್ಸ್ ಲಾಂಛನದಲ್ಲಿ ರಾಮಗೋಪಾಲ್ ವೈ.ಎಂ. ನಿರ್ಮಿಸಿರುವ ಚಿತ್ರ ‘ತ್ರಿಬಲ್ ರೈಡಿಂಗ್’. ಮಹೇಶ್ ಗೌಡ ನಿರ್ದೇಶನದ ಈ ಚಿತ್ರದ ಪ್ರಧಾನ ಪಾತ್ರದಲ್ಲಿ ಗಣೇಶ್ ಅವರಿದ್ದು, ಅವರೊಂದಿಗೆ ಅದಿತಿ ಪ್ರಭುದೇವ, ಮೇಘ ಶೆಟ್ಟಿ ಮತ್ತು ರಚನಾ ಇಂದರ್ ತ್ರಿಬಲ್ ರೈಡಿಂಗ್ ಹೊರಟಿದ್ದಾರೆ. ಸಾಧು ಕೋಕಿಲ, ರವಿಶಂಕರ್, ಶರತ್ ಲೋಹಿತಾಶ್ವ, ರಂಗಾಯಣ ರಘು, ಅಚ್ಚುತ್ ಕುಮಾರ್, ಶೋಭರಾಜ್, ಕುರಿ ಪ್ರತಾಪ್, ಅರವಿಂದ ಬೋಳಾರ್, ರವಿಶಂಕರ್ ಗೌಡ, ಚಿತ್ಕಲ ಬಿರಾದಾರ್, ರೇಣುಕಾ ಚಿತ್ರದಲ್ಲಿದ್ದಾರೆ. ಜೈ ಆನಂದ್ ಛಾಾಂಗ್ರಹಣ, ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ, ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ.

‘ರೇಮೋ’
ಜಾಂದಿತ್ಯ ಫಿಲಂಸ್ ಲಾಂಛನದಲ್ಲಿ ಸಿ.ಆರ್.ಮನೋಹರ್ ನಿರ್ಮಿಸಿರುವ ಚಿತ್ರ ‘ರೇಮೋ’. ಪವನ್ ಒಡೆಯರ್ ನಿರ್ದೇಶನದ ಈ ಚಿತ್ರದ ಕೇಂದ್ರಪಾತ್ರಧಾರಿ ಇಶಾನ್. ಅವರ ಜೋಡಿಯಾಗಿ ಅಶಿಕಾ ರಂಗನಾಥ್ ನಟಿಸಿದ್ದು, ರಾಜೇಶ್ ನಟರಂಗ, ಮಧು ಶಾ, ಶರತ್‌ಕುಮಾರ್ ಇತರ ಪ್ರಮುಖ ಪಾತ್ರಧಾರಿಗಳು. ಅರ್ಜುನ್ ಜನ್ಯ ಸಂಗೀತ ಸಂಯೋಜನೆ, ವೈದಿ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಪಿ. ಗುಣಶೇಖರನ್ ಕಲಾ ನಿರ್ದೇಶನ, ಇವ್ರಾನ್ ಸರ್ದಾರಿಯಾ ನೃತ್ಯ ಸಂಯೋಜನೆ ಚಿತ್ರಕ್ಕಿದೆ.

‘ಸದ್ದು ವಿಚಾರಣೆ ನಡೆಯುತ್ತಿದೆ’
ಎಂ.ಎಂ.ಸಿನಿವಾಸ್ ಲಾಂಛನದಲ್ಲಿ ಸುರಭಿ ಲಕ್ಷ್ಮಣ್ ನಿರ್ಮಿಸಿರುವ ಚಿತ್ರ ‘ಸದ್ದು ವಿಚಾರಣೆ ನಡೆುುಂತ್ತಿದೆ’. ಭಾಸ್ಕರ್ ಆರ್. ನೀನಾಸಂ ಚಿತ್ರಕಥೆ, ನಿರ್ದೇಶನದ ಈ ಚಿತ್ರದ ಮುಖ್ಯಪಾತ್ರಗಳಲ್ಲಿ ಪಾವನ ಗೌಡ, ರಾಕೇಶ್ ಮಯ್ಯ, ಮಧುನಂದನ್ ಇದ್ದು, ಅವರೊಂದಿಗೆ ಅಚ್ಯುತ್ ಕುಮಾರ್, ಕೃಷ್ಣ ಹೆಬ್ಬಾಳೆ, ರಾಘು ಶಿವಮೊಗ್ಗ, ಜಹಾಂಗೀರ್, ರೋಹಿಣಿ ರಘುನಂದನ್ ತಾರಾಬಳಗದಲ್ಲಿದ್ದಾರೆ.

ಅಶ್ವಿನಿ ಕೆ.ಎನ್. ಕಥೆ, ದಕ್ಷಿಣ ಮೂರ್ತಿ ಸಂಭಾಷಣೆ, ಪ್ರಮೋದ್ ಮರವಂತೆ ಗೀತರಚನೆ, ಕಿನ್ನಾಳ್ ರಾಜ್ ಛಯಾಗ್ರಹಣ, ಸಚಿನ್ ಬಸ್ರೂರು ಸಂಗೀತ ಸಂಯೋಜನೆ, ಶಶಿಧರ್ ಪಿ. ಸಂಕಲನ, ಗಂಗಮ್ ರಾಜ್ ನೃತ್ಯ ಸಂಯೋ ಜನೆ ಚಿತ್ರಕ್ಕಿದೆ.

 

 

andolana

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

1 hour ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

1 hour ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

1 hour ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

1 hour ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

1 hour ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

1 hour ago