ಬೆಳವಾಡಿಯ ಗೇಟ್ ಬಳಿ ಮೊದಲ ಬಾರಿಗೆ ತರಕಾರಿ ಮಾರುವುದಕ್ಕೆ ಆರಂಭಿಸಿದವರು ರೇವಮ್ಮ. ಹತ್ತು ವರ್ಷಗಳ ಹಿಂದೆ ಆಕಸ್ಮಿಕವಾಗಿ ತರಕಾರಿ ಮಾರುವ ಕೆಲಸಕ್ಕೆ ಕೈ ಹಾಕಿದರು. ಇದಕ್ಕೂ ಮೊದಲು ಬೆಂಕಿಪುರದಲ್ಲಿ ಮನೆಯಲ್ಲೇ ಹೋಟೆಲ್ ವ್ಯಾಪಾರ ನಡೆಸುತ್ತಿದ್ದರು. ಮಕ್ಕಳೆಲ್ಲ ಬೆಳವಾಡಿಗೆ ಹೋಗಬೇಕೆಂದಾಗ ಮನೆಯಲ್ಲಿ ಒಬ್ಬಳೇ ಇರುವುದಕ್ಕೆ ಮನಸ್ಸಾಗದೆ, ಮಕ್ಕಳೊಂದಿಗೆ ಹೊರಟುನಿಂತರು.
ರೇವಮ್ಮ ಅವರು ಚಿಕ್ಕವರಿದ್ದಾಗ ಬಲಗಣ್ಣಿನ ದೃಷ್ಟಿ ಕಳೆದುಕೊಂಡರು. ಚಿಕಿತ್ಸೆಗೆಂದು ವೈದ್ಯರ ಬಳಿ ಹೋಗಲಾರದಷ್ಟು ಬಡತನ.
ಬೆಳಿಗ್ಗೆ ಆರು ಗಂಟೆ ಹೊತ್ತಿಗೆಲ್ಲ ತರಕಾರಿ, ಹೂ ವ್ಯಾಪಾರ ಶುರು ಮಾಡುವ ರೇವಮ್ಮ ರಾತ್ರಿ ಎಂಟೂವರೆ ತನಕ ಆದಷ್ಟು ದುಡಿಮೆ ಮಾಡಿಕೊಂಡು ಮನೆಗೆ ವಾಪಸ್ ಆಗುತ್ತಾರೆ. ಮಗಳು ಕೊಟ್ಟ ಮಧ್ಯಾಹ್ನದ ಬುತ್ತಿ, ಸಂಜೆಯ ಚಹ ಇವರ ಕೆಲಸಕ್ಕೆ ಹುರುಪು ಕೊಡುತ್ತವೆ. ನನ್ನ ಬದುಕಿಗೆ ನನ್ನ ತಾಯಿಯೇ ಸೂರ್ತಿ ಎನ್ನುವ ರೇವಮ್ಮ ಹತ್ತು ತಿಂಗಳ ಹಿಂದೆ ತಾಯಿಯನ್ನು ಕಳೆದುಕೊಂಡಿದ್ದರೂ ತಾಯಿ ಕಲಿಸಿದ ಜೀವನ ಪಾಠವನ್ನು ಮರೆತಿಲ್ಲ
ಮೈಸೂರು: ನಗರದ ಹೊರವಲಯದ ಹಳೆ ಕೆಸರೆ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಕಸದ…
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…