10ನೇ ಚಾಮರಾಜ ಒಡೆಯರ್ ಆಳ್ವಿಕೆಯಲ್ಲಿ ನಡೆದ ಪ್ರಸಂಗ
• ಧರ್ಮೇಂದ್ರ ಕುಮಾರ್ ಮೈಸೂರು
ಮೈಸೂರು ಸಂಸ್ಥಾನವನ್ನು ಭೀಕರ ಬರಗಾಲ ಕಾಡಿತ್ತು… ಶ್ರೀಮಂತರೊಬ್ಬರು ತಾವು ಸಂಗ್ರಹಿಸಿಟ್ಟಿದ್ದ ದವಸ ಧಾನ್ಯಗಳನ್ನು ಉಚಿತವಾಗಿ ಬಡವರಿಗೆ ಹಂಚಿದರು… ಅವರ ಮಾನವೀಯ ಕಾರ್ಯವನ್ನು ಮೆಚ್ಚಿದ ಮೈಸೂರು ಮಹಾರಾಜರು ‘ನಾನು ನಿಮಗೇನಾದರೂ ಉಡುಗೊರೆ ಕೊಡಬೇಕಲ್ಲ ಎನ್ನುತ್ತಾರೆ. ಅದಕ್ಕೆ ಮಹಾದಾನಿ ಏನು ಕೇಳಿದರು ಗೊತ್ತೇ… ಅದು ಊಹೆಗೆ ನಿಲುಕದ್ದು… ಆದರೆ, ಅವರ ಉದಾರ ಹೃದಯದ ವೈಶಾಲ್ಯತೆಯ ಪ್ರತೀಕವಾಗಿತ್ತು.
10ನೇ ಚಾಮರಾಜ ಒಡೆಯರ್ 1881ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜರಾಗಿ ಅಧಿಕಾರ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಉತ್ತರ ಭಾಗದಲ್ಲಿ ಬರಗಾಲ ತಾಂಡವವಾಡುತ್ತಿತ್ತು.
ಚಿತ್ರದುರ್ಗದ ಅತ್ಯಂತ ಶ್ರೀಮಂತ ಕಾಶಿ ಅಪ್ಪಣ್ಣ ಶೆಟ್ಟರ್ ಅವರು ತಮ್ಮಲ್ಲಿದ್ದ ನೂರಾರು ಗೋಡೌನ್ ಗಳಿಂದ ಚಿತ್ರದುರ್ಗದಾದ್ಯಂತ ಜನರಿಗೆ ದವಸ ಮತ್ತು ಧಾನ್ಯಗಳನ್ನು ಉಚಿತವಾಗಿ ಹಂಚುತ್ತಾರೆ.
ಒಬ್ಬ ಸಾಮಾನ್ಯ ಪ್ರಜೆ ತನ್ನಲ್ಲಿದ್ದ ಸಿರಿ ಸಂಪತ್ತನ್ನು ಬಡವರ ಕಷ್ಟಕ್ಕಾಗಿ ದಾನ ನೀಡಿದ ಎಂದು ಮಹಾರಾಜರಿಗೆ ತಿಳಿದಾಗ, ಕಾಶಿ ಅಪ್ಪಣ್ಣ ಶೆಟ್ಟರ್ ಅವರನ್ನು ನೋಡಬೇಕು ಎಂದು ಮೈಸೂರು ಸಂಸ್ಥಾನಕ್ಕೆ ಕರೆಸುತ್ತಾರೆ. ಸಂಸ್ಥಾನಕ್ಕೆ ಬಂದ ಅಪ್ಪಣ್ಣನವರಿಗೆ ಆದರಾತಿಥ್ಯ ನೀಡಿದ ಮಹಾರಾಜರು, ಇಂತಹ ಔದರ್ಯ ಮೆರೆದಿರುವ ನಿಮಗೆ ಏನು ಬೇಕು ಎಂದು ಕೇಳಿದಾಗ, ಕಾಶಿ ಅಪ್ಪಣ್ಣ ಅವರು ಕೈಮುಗಿದು ಮಹಾಸ್ವಾಮಿ ನನಗಾಗಿ ಏನೂ ಬೇಡ, ಆದರೆ ನಿಮ್ಮೊಡನೆ ಇರುವ ಒಂದು ಚಿತ್ರಪಟ
ಕಾಶಿ ಅಪ್ಪಣ್ಣ ಅವರು ಇರುವ ಚಿತ್ರಪಟ ಮಾಡಿಸಿಕೊಟ್ಟರೆ ಸಾಕು ಎಂದು ವಿನಮ್ರರಾಗಿ ಕೇಳುತ್ತಾರೆ. ಮಹಾರಾಜರು ಅರಮನೆ ಕಲಾವಿದರಿಗೆ ವರ್ಣಚಿತ್ರವನ್ನು ರಚಿಸಲು ಸೂಚಿಸುತ್ತಾರೆ. ಚಿನ್ನದ ಪದಕದೊಡನೆ ಚಿತ್ರಪಟವನ್ನೂ ಅಪ್ಪಣ್ಣ ಅವರಿಗೆ ನೀಡುತ್ತಾರೆ.
ಅವರ ನಂತರ ನಮ್ಮ ಕುಟುಂಬಸ್ಥರು ದಾನ-ಧರ್ಮಗಳ ಜೊತೆಗೆ ಟ್ರಸ್ಟ್ ಹಾಗೂ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದೇವೆ ಎಂದು ಕಾಶಿ ಅಪ್ಪಣ್ಣ ಅವರ ಮರಿ ಮೊಮ್ಮಗ ಮನೋಹರ್ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ 1881ರಲ್ಲಿ ಬರಗಾಲ ಬಂದಾಗ ರಾಜ್ಯದ ಪರಿಸ್ಥಿತಿಯನ್ನು ಕಂಡು ಕಾಶಿ ಅಪ್ಪಣ್ಣ ಅವರು ಬಹಳ ಜನ ಬಡವರಿಗೆ ಹಸಿವು ತಣಿಸಲು ಹಗೇವುನಲ್ಲಿದ್ದ ಧಾನ್ಯವನ್ನು ಹೊರತೆಗೆದು ಹಂಚಿರುತ್ತಾರೆ. ಈ ವಿಷಯವನ್ನು ತಿಳಿದ 10ನೇ ಚಾಮರಾಜ ಒಡೆಯರು ಅವರು ಸನ್ಮಾನಿಸಲು ಇಚ್ಚಿಸಿದಾಗ, ಕಾಶಿ ಅಪ್ಪಣ್ಣ ಅವರು ನನಗೆ ಅದೆಲ್ಲ ಬೇಡ, ಕೇವಲ ಮಹಾರಾಜರ ಜೊತೆಯಲ್ಲಿರುವ ಒಂದು ಚಿತ್ರಪಟ ಸಾಕು ಎಂದಿದ್ದರಂತೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…